ಮೈಸೂರು

ರೈತರ OTS ಸಾಲ ತಿರುವಳಿ ಮೇಳ ನಡೆಸುವಂತೆ ಒತ್ತಾಯಿಸಿ ಅನ್ನದಾತರಿಂದ ಪ್ರತಿಭಟನೆ

ಮೈಸೂರು : OTS ಸಾಲ ತಿರುವಳಿ ಮೇಳ ನಡೆಸುವಂತೆ ಒತ್ತಾಯಿಸಿ ರಾಜ್ಯ ಕಬ್ಬು ಬೆಳೆಗಾರ ಸಂಘದ ಮೈಸೂರು ಜಿಲ್ಲಾ ಘಟಕದಿಂದ ಕರ್ನಾಟಕ ಗ್ರಾಮೀಣ ಬ್ಯಾಂಕ್ ಮೈಸೂರಿನ ಪ್ರಾದೇಶಿಕ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.

ಎಲ್ಲಾ ಬ್ಯಾಂಕುಗಳು ರೈತರ ಕೃಷಿ ಸಾಲ OTS ಮೂಲಕ ತಿರುವಳಿ ಮಾಡುತ್ತಿದ್ದರು ಕಾವೇರಿ ಗ್ರಾಮೀಣ ಬ್ಯಾಂಕ್ ಮಾತ್ರ ಸರ್ಕಾರದ ಆದೇಶ ಉಲ್ಲಂಘಿಸಿ OTS ಸಾಲ ತಿರುವಳಿ ಮೇಳ ಮಾಡುತ್ತಿಲ್ಲ ಎಂದು ಆಕ್ರೋಶಗೊಂಡ ರೈತರು, ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.

ಬಳಿಕ ಪ್ರತಿಭಟನಾಕಾರರು ಮಾತನಾಡಿ, ಬರಗಾಲದ ಆರ್ಥಿಕ ಸಂಕಷ್ಟದಲ್ಲಿರುವ ರೈತರಿಗೆ ಕೃಷಿ ಸಾಲ ಮಾಡಿ ತೀರಿಸಲು ಸಾಧ್ಯವಾಗದೆ ಇರುವುದರಿಂದ ಮತ್ತೆ ಕೃಷಿ ಚಟುವಟಿಕೆ ನಡೆಸಲು ಅನುಕೂಲ ಆಗುವಂತೆ ರಾಜ್ಯ ಮಾರ್ಗದರ್ಶಿ ಬ್ಯಾಂಕ್ ಆದೇಶ ಹೊರಡಿಸಿತ್ತು. ಹೀಗಾಗಿ ಬ್ಯಾಂಕ್ ಶಾಖೆಗಳಲ್ಲಿ OTS  ಸಾಲ ತಿರುವಳಿ ಮೇಳ ಹೆಚ್ಚು ಪ್ರಚಾರ ನೀಡಿ ನಡೆಸುವಂತೆ ಹಾಗೂ ಇದರ ಸದುಪಯೋಗ ರೈತರು ಪಡೆದುಕೊಳ್ಳುವಂತೆ ನಾಮಫಲಕ ಅನಾವರಣ ಮಾಡಿ ರೈತರಿಗೆ ಜಾಗೃತಿ ಮೂಡಿಸಿ ನೆರವಾಗಬೇಕು. ಆದರೆ  ಬ್ಯಾಂಕ್ ಶಾಖೆ ಗಳಲ್ಲಿ ಪ್ರಚಾರ ಮಾಡದೆ ಇರುವುದು ಮುಗ್ಧ ರೈತರು ಈ ಅವಕಾಶದಿಂದ ವಂಚಿತರಾಗಿದ್ದಾರೆ, ಕಳೆದ ಎರಡು ತಿಂಗಳ ಹಿಂದೆ ಬ್ಯಾಂಕ್ ನ ಕೇಂದ್ರ ಕಚೇರಿ ಬಳ್ಳಾರಿಯಲ್ಲಿ ಹೋರಾಟ ನಡೆಸಿದ ಪರಿಣಾಮ ಈ ಆದೇಶ  ಹೊರಡಿಸಲಾಗಿದೆ ಆದರೆ ಕೆಲವು ಶಾಖೆಗಳು ಇದನ್ನು ಮರೆಮಾಚಿ ರೈತರಿಗೆ ವಂಚನೆ ಮಾಡುತ್ತಿವೆ. ಹೀಗಾಗಿ ರೈತರಿಗೆ ವಂಚನೆ ಮಾಡದೆ ಅನುಕೂಲ ಮಾಡಿ ಕೊಡಬೇಕೆಂದು ಹಾಗೂ ಒ ಟಿ ಎಸ್ ಮಾಡಿದ ರೈತರಿಗೆ ಮತ್ತೆ ಸಾಲ ಕೊಡಬೇಕು ಎಂದು ಒತ್ತಾಯಿಸಿದರು.

ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ಯಾದವ ಮೂರ್ತಿ ಹಾಗೂ ಸೀನಿಯರ್ ಮ್ಯಾನೇಜರ್ ಬಾನು ಪ್ರಕಾಶ್ ಪ್ರತಿಭಟನಾ ನಿರತ ರೈತರ ಮನವಲಿಸಿ ಬ್ಯಾಂಕ್ ಗಳಲ್ಲಿ ನಾಮಫಲಕ ಅನಾವರಣ ಮಾಡಿಸಿ ರೈತರಿಗೆ ಜಾಗೃತಿ ಮೂಡಿಸಲು ಸೂಚನೆ  ನೀಡುತ್ತೇವೆ ಎಂದು ಭರವಸೆ ನೀಡಿದ ನಂತರ ರೈತರು ತಮ್ಮ ಪ್ರತಿಭಟನೆ ಕೈ ಬಿಟ್ಟರು.

 

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

5 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

6 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

8 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

8 hours ago

ಹನೂರು ಎನ್‌ಕೌಂಟರ್‌ ಬೆನ್ನಲ್ಲೇ ಕಳ್ಳಬೇಟೆ ಕಡಿವಾಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…

11 hours ago

ಟೋಲ್ ಬಳಿ ಸೈನ್ ಬೋರ್ಡ್‌ಗೆ ಖಾಸಗಿ ಬಸ್ ಡಿಕ್ಕಿ; ಇಬ್ಬರು ದುರ್ಮರಣ, 20ಕ್ಕೂ ಹೆಚ್ಚು ಜನರಿಗೆ ಗಾಯ

ಮಂಡ್ಯ: ಟೋಲ್‌ ಬಳಿಯ ಸೈನ್ ಬೋರ್ಡ್‌ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ…

12 hours ago