ಕೆ.ಆರ್ ನಗರ: ತನ್ನ ಬೈಕ್ ತಪಾಸಣೆ ಮಾಡಿದ ಕಾರಣಕ್ಕೆ ಪಟ್ಟಣದ ಅಬಕಾರಿ ಇಲಾಖೆ ಸಿಬ್ಬಂದಿಯ ಮೇಲೆ ಕೊಪಗೊಂಡು ಹಲ್ಲೆ ನಡೆಸಿರುವ ಘಟನೆ ತಿಪ್ಪೂರು ಬಳಿ ನಡೆದಿದೆ. ಅಧಿಕಾರಿ ಮೇಲೆ ದಾಳಿ ಮಾಡಿದ ಆರೋಪದಡಿ ನಾಲ್ವರನ್ನು ಬಂಧಿಸಲಾಗಿದೆ.
ಅಕ್ರಮ ಮದ್ಯ ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಮಂಗಳವಾರ ರಾತ್ರಿ ಇಲಾಖೆಯ ಸಿಬ್ಬಂದಿಗಳಾದ ಸಂತೋಷ್, ಸಂದೀಪ್, ಮಲ್ಲೇಶ್ ಮತ್ತು ಮಾಳಪ್ಪ ಅವರು ತಾಲೂಕಿನ ತಿಪ್ಪೂರು ಗ್ರಾಮದ ಬಳಿ ಅದೇ ಗ್ರಾಮದ ಸಂತೋಷ್ ಎಂಬುವವರ ಬೈಕ್ ತಪಾಸಣೆ ಮಾಡಲು ಮುಂದಾಗಿದ್ದಾರೆ. ಇದನ್ನು ಸಹಿಸದ ಸಂತೋಷ್ ಅಧಿಕಾರಿಗಳ ಜೊತೆ ಮಾತಿಗೆರಗಿದ್ದಾನೆ. ಆದರೂ ತಪಾಸಣೆ ನಡೆಸಿದ ಅಧಿಕಾರಿಗಳು ಮದ್ಯ ಸಿಗದ ಹಿನ್ನಲೆ ವಾಪಾಸಾಗಿದ್ದಾರೆ.
ಈ ಘಟನೆಯಿಂದ ಕುಪಿತಗೊಂಡ ಸಂತೋಷ್ ತನ್ನ ಸ್ನೇಹಿತರಾದ ರಘು, ಯಶ್ವಂತ್ ಮತ್ತು ಪ್ರಶಾಂತ್ ಎಂಬುವವ ಜೊತೆಗೂಡಿ ಅಬಕಾರಿ ಇಲಾಖೆಯ ಅಧಿಕಾರಿಗಳನ್ನು ಹಿಂಬಾಲಿಸಿ ಕಗ್ಗೆರೆ ಬಸ್ ನಿಲ್ದಾಣದ ಬಳಿ ಅವರ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿದ್ದಾನೆ. ಈ ದಾಳಿಯಿಂದ ಅಬಕಾರಿ ಮುಖ್ಯ ಪೇದೆ ಸಂತೋಷ್ಗೆ ತೀವ್ರ ಗಾಯಗಳಾಗಿದ್ದು, ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನಾ ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಮುಖ್ಯ ಪೇದೆ ಸಂತೋಷ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳಿಗೆ ಮೂಲಭೂತಸೌಕರ್ಯ ಮರಿಚಿಕೆಯಾಗಿದೆ ಎಂದು ಆರೋಪಿಸಿ ಸಂಶೋಧಕರು ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟವು ಪ್ರತಿಭಟನೆ…
ಕೆ.ಆರ್.ನಗರ : ಪಟ್ಟಣದಲ್ಲಿ ಇಬ್ಬರು ಯುವಕರು ಮಾರುತಿ ಕಾರಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ…
ಮಂಡ್ಯ : ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ವಿನೂತನವಾಗಿ “ಮಿಷನ್ 40 ಫಾರ್ 90 ಡೇಸ್” ಅಭಿಯಾನವನ್ನು…
ಬೆಂಗಳೂರು : ಬೆಳಗಾವಿ ಚಳಿಗಾಲದ ಅಧಿವೇಶನದ ಕಲಾಪದಲ್ಲಿ ರಾಜ್ಯ ಸರ್ಕಾರವನ್ನು ತೀವ್ರ ಇಕ್ಕಟ್ಟಿಗೆ ಸಿಲುಕಿಸಿದ್ದ ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣ…
ಮುಂಬೈ : ಬಾಲಿವುಡ್, ಟಾಲಿವುಡ್, ಸ್ಯಾಂಡಲ್ವುಡ್ ಸೇರಿದಂತೆ ಎಲ್ಲಾ ವುಡ್ಗಳಲ್ಲಿಯೂ ಧುರಂಧರ್ದೆ ಹಾವಳಿ. ಈ ವರ್ಷದ ಅತಿ ಹೆಚ್ಚು ಕೆಲಕ್ಷನ್…
ಬೆಂಗಳೂರು : ಅಧಿಕಾರ ಹಸ್ತಾಂತರದ ವಿಚಾರದಲ್ಲಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಹೈಡ್ರಾಮ ಆಡುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು…