ಮೈಸೂರು: ಇಲ್ಲಿನ ವಿಶ್ವೇಶ್ವರಯ್ಯನಗರದ ಅಪಾರ್ಟ್ಮೆಂಟ್ವೊಂದರಲ್ಲಿ ಡೆತ್ ನೋಟ್ ಬರೆದಿಟ್ಟು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿರುವ ಘಟನೆ ನಡೆದಿದೆ.
ಈ ಘಟನೆಯಲ್ಲಿ ಮೃತಪಟ್ಟವರು ಚೇತನ್(45), ರೂಪಾಲಿ(43), ಪ್ರಿಯಂಂವದ(65) ಮತ್ತು ಕುಶಾಲ್(15) ಎಂಬುದಾಗಿ ಗುರುತಿಸಲಾಗಿದೆ. ಮೊದಲು ಚೇತನ್ ತನ್ನ ತಾಯಿ, ಪತ್ನಿ ಮತ್ತು ಮಗನಿಗೆ ವಿಷ ಉಣಿಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಬಳಿಕ ತಾನು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಲ್ಲದೇ ನಮ್ಮ ಸಾವಿಗೆ ನಾವೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಮೃತಪಟ್ಟಿರುವ ಚೇತನ್ ಎಂಬಾತ ಡೆತ್ನೋಟ್ನಲ್ಲಿ ಹಣಕಾಸಿನ ಸಮಸ್ಯೆಯಿಂದಾಗಿ ನಾವು ಸಾಯುತ್ತಿದ್ದೇವೆ. ನಮ್ಮ ಸಾವಿಗೆ ಬೇರೆ ಯಾರೂ ಕಾರಣರಲ್ಲ ನನ್ನ ಸ್ನೇಹಿತರು, ಸಂಬಂಧಿಕರಿಗೆ ಯಾರೂ ತೊಂದರೆ ನೀಡಬೇಡಿ. ನಮ್ಮನ್ನು ಕ್ಷಮಿಸಿ ಐ ಆಮ್ ಸ್ಯಾರಿ ಎಂದು ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾರೆ.
ಈ ಘಟನೆ ತಿಳಿದ ಕೂಡಲೇ ವಿದ್ಯಾರಣ್ಯಪುರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇನ್ನು ಪ್ರಕರಣದ ಬಗ್ಗೆ ಮೈಸೂರು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಪ್ರತಿಕ್ರಿಯೆ ನೀಡಿ, ಈ ಘಟನೆಯ ಕುರಿತು ವಿದ್ಯಾರಣ್ಯಪುರಂನಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಸಲಾಗುವುದು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…
ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…