ನಂಜನಗೂಡು : ಎರಡು ಕುಟುಂಬದ ನಡುವಿನ ಸಾಮಾನ್ಯ ವಿಷಯವನ್ನೇ ದೊಡ್ಡದು ಮಾಡಿಕೊಂಡು ಸಾರ್ವಜನಿಕ ಆಸ್ಪತ್ರೆ ಬಳಿ ಲಾಂಗ್ ಹಾಗೂ ತಲವಾರ್ ಬೀಸಿ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಜನರಲ್ಲಿ ಭೀತಿ ಹುಟ್ಟಿಸಿ ಪರಾರಿಯಾಗಿದ್ದ ನಾಲ್ವರನ್ನು ವಶಕ್ಕೆ ಪಡೆಯುವಲ್ಲಿ ನಂಜನಗೂಡು ನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ನಗರದ ಸಾರ್ವಜನಿಕ ಆಸ್ಪತ್ರೆ ಮುಂಭಾಗದಲ್ಲಿ ಸಾರ್ವಜನಿಕರ ಮುಂದೆಯೇ ಲಾಂಗ್ ಮತ್ತು ತಲವಾರ್, ರಿಪ್ಪೀಸ್ ಪಟ್ಟಿಗಳಿಂದ ರವಿ ಮತ್ತು ಅಭಿಷೇಕ್ ಎಂಬವರ ಮೆಲೆ ಮಾರಣಾಂತಿಕ ಹಲ್ಲೆ ಮಾಡಿದ್ದ ಸುಬ್ಬು ಹಾಗೂ ಮಂಟಿಯನ್ನು ಭಾನುವಾರ ರಾತ್ರಿಯೇ ವಶಕ್ಕೆ ಪಡೆದು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಸೋಮವಾರ ಆಕಾಶ್, ಓರ್ವ ಬಾಲಕನನ್ನು ಕೂಡ ನಗರ ಠಾಣೆಯ ಪೊಲೀಸರು ವಶಕ್ಕೆ ಪಡೆದು ಅವರ ವಿರುದ್ಧ ಕಾನೂನಿನ ಕುಣಿಕೆ ಬಿಗಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಬಾಲಕನನ್ನು ಬಾಲಪರಾಧಿ ನಿಲಯಕ್ಕೆ ಕಳಿಸಲಾಗಿದ್ದು, ಸುಭಾಷ್ ಅಲಿಯಾಸ್ ಸುಬ್ಬು, ಆಕಾಶ, ಮಂಟಿ ಎಂಬ ಮೂವರೂ ಈಗ ಜೈಲಿನ ಅತಿಥಿಗಳಾಗಿದ್ದಾರೆ.
ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…
ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…
ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…
ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…
ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…
ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…