ನಂಜನಗೂಡು : ಎರಡು ಕುಟುಂಬದ ನಡುವಿನ ಸಾಮಾನ್ಯ ವಿಷಯವನ್ನೇ ದೊಡ್ಡದು ಮಾಡಿಕೊಂಡು ಸಾರ್ವಜನಿಕ ಆಸ್ಪತ್ರೆ ಬಳಿ ಲಾಂಗ್ ಹಾಗೂ ತಲವಾರ್ ಬೀಸಿ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಜನರಲ್ಲಿ ಭೀತಿ ಹುಟ್ಟಿಸಿ ಪರಾರಿಯಾಗಿದ್ದ ನಾಲ್ವರನ್ನು ವಶಕ್ಕೆ ಪಡೆಯುವಲ್ಲಿ ನಂಜನಗೂಡು ನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ನಗರದ ಸಾರ್ವಜನಿಕ ಆಸ್ಪತ್ರೆ ಮುಂಭಾಗದಲ್ಲಿ ಸಾರ್ವಜನಿಕರ ಮುಂದೆಯೇ ಲಾಂಗ್ ಮತ್ತು ತಲವಾರ್, ರಿಪ್ಪೀಸ್ ಪಟ್ಟಿಗಳಿಂದ ರವಿ ಮತ್ತು ಅಭಿಷೇಕ್ ಎಂಬವರ ಮೆಲೆ ಮಾರಣಾಂತಿಕ ಹಲ್ಲೆ ಮಾಡಿದ್ದ ಸುಬ್ಬು ಹಾಗೂ ಮಂಟಿಯನ್ನು ಭಾನುವಾರ ರಾತ್ರಿಯೇ ವಶಕ್ಕೆ ಪಡೆದು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಸೋಮವಾರ ಆಕಾಶ್, ಓರ್ವ ಬಾಲಕನನ್ನು ಕೂಡ ನಗರ ಠಾಣೆಯ ಪೊಲೀಸರು ವಶಕ್ಕೆ ಪಡೆದು ಅವರ ವಿರುದ್ಧ ಕಾನೂನಿನ ಕುಣಿಕೆ ಬಿಗಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಬಾಲಕನನ್ನು ಬಾಲಪರಾಧಿ ನಿಲಯಕ್ಕೆ ಕಳಿಸಲಾಗಿದ್ದು, ಸುಭಾಷ್ ಅಲಿಯಾಸ್ ಸುಬ್ಬು, ಆಕಾಶ, ಮಂಟಿ ಎಂಬ ಮೂವರೂ ಈಗ ಜೈಲಿನ ಅತಿಥಿಗಳಾಗಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…