ಮೈಸೂರು

ಮೈಸೂರಿನ ನೂತನ ಬಿಷಪ್‌ರಾಗಿ ಫ್ರಾನ್ಸಿಸ್ ಸೆರಾವ್ ನೇಮಕ

ಮೈಸೂರು: ಮೈಸೂರು ಧರ್ಮ ಕ್ಷೇತ್ರ (ಮೈಸೂರು ಡಯೋಸಿಸ್)ದ ಹೊಸ ಬಿಷಪ್‌ರನ್ನಾಗಿ ಡಾ.ಫ್ರಾನ್ಸಿಸ್ ಸೆರಾವ್ ಅವರನ್ನು ಪೋಪ್ 14ನೇ ಲಿಯೋ ಶುಕ್ರವಾರ ನೇಮಕ ಮಾಡಿದ್ದಾರೆ.

ಜೆಸ್ಯೂಟ್ (ಸೊಸೈಟಿ ಆಫ್ ಜೀಸಸ್)ನವರಾದ ಸೆರಾವ್ ಅವರು, ಪ್ರಸ್ತುತ ಶಿವಮೊಗ್ಗ ಧರ್ಮ ಕ್ಷೇತ್ರದ ಬಿಷಪ್ಪರಾಗಿ ಹಾಗೂ ಕಾನ್ಛರೆನ್ಸ್ ಆಫ್ ಕ್ಯಾಥೋಲಿಕ್ ಬಿಷಪ್ಸ್ ಆಫ್ ಇಂಡಿಯಾದ ಕ್ರೈಸ್ತ ಧರ್ಮದ ಆಯೋಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಕಿರು ಪರಿಚಯ
ಆಗಸ್ಟ್ 15, 1959ರಲ್ಲಿ ಮಂಗಳೂರು ಧರ್ಮ ಕ್ಷೇತ್ರದ ಮೂಡುಬಿದಿರೆಯಲ್ಲಿ ಜನಿಸಿದ ಫ್ರಾನ್ಸಿಸ್ ಸೆರಾವ್ ಅವರು, ಜನವರಿ 3, 1979ರಲ್ಲಿ ಬೆಂಗಳೂರಿನ ಮೌಂಟ್ ಸೇಂಟ್ ಜೋಸೆಫ್‌ನಲ್ಲಿ ಸೊಸೈಟಿ ಆಫ್ ಜೀಸಸ್ (ಜೆಸ್ಯೂಟ್)ಅನ್ನು ಸೇರಿದರು. ನಂತರ ಜೆಸ್ಯೂಟ್ ಸಂಸ್ಥೆಗಳಾದ ಚೆನ್ನೈನ ಸತ್ಯ ನಿಲಯಂ ಮತ್ತು ಪುಣೆಯ ಜ್ಞಾನ ದೀಪ ವಿದ್ಯಾಪೀಠದಲ್ಲಿ ತತ್ವಶಾಸ್ತ್ರ ಹಾಗೂ ಧರ್ಮಶಾಸ್ತ್ರ ಅಧ್ಯಯನ ಮಾಡಿದರು. ದಿಲ್ಲಿಯ ವಿದ್ಯಾ ಜ್ಯೋತಿ ಕಾಲೇಜಿನಲ್ಲಿ ಧರ್ಮಶಾಸ್ತ್ರದಲ್ಲಿ ಪ್ರವೀಣತಾ ಪತ್ರ ಪಡೆದರು.

ಏಪ್ರಿಲ್ 30, 1992ರಲ್ಲಿ ಪಾದ್ರಿಯಾಗಿ ದೀಕ್ಷೆ ಪಡೆದ ಫ್ರಾನ್ಸಿಸ್ ಸೆರಾವ್ ಅವರ ಸೇವೆಯು ಸಾಮಾಜಿಕ ಕ್ರಿಯೆ, ಶೈಕ್ಷಣಿಕ ನಾಯಕತ್ವ ಮತ್ತು ಸಮುದಾಯ ರಚನೆಯನ್ನು ವ್ಯಾಪಿಸಿದೆ. ಕಾರವಾರ ಧರ್ಮ ಕ್ಷೇತ್ರದ ಮುಂಡ್‌ಗೋಡ್‌ನಲ್ಲಿ ಪಾದ್ರಿಯಾಗಿ ಸೇವೆಯನ್ನು ಪ್ರಾರಂಭಿಸಿದ ಅವರು, ನಂತರ ಮುಂಡ್‌ಗೋಡ್‌ನ ಲೊಯೊಲಾ ವಿಕಾಸ ಕೇಂದ್ರದಲ್ಲಿ ಸಾಮಾಜಿಕ ಅಭಿವೃದ್ಧಿ ಕಾರ್ಯಗಳಲ್ಲಿ ಸೇವೆ ಸಲ್ಲಿಸಿದರು. ಬಳಿಕ ಬೆಂಗಳೂ ರಿನ ಪ್ರಾದೇಶಿಕ ಥಿಯೊಲೊಗೇಟ್‌ನಲ್ಲಿ ಕಾರ್ಯನಿರ್ವಹಿಸಿದರು.

ತದನಂತರ ಆನೇಕಲ್‌ನಲ್ಲಿರುವ ಸೇಂಟ್ ಜೋಸೆಫ್ ಚರ್ಚ್‌ನ ಪಾದ್ರಿಯಾಗಿ, ವಿಜಯಪುರದಲ್ಲಿರುವ ಜೆಸ್ಯೂಟ್ ಕಮ್ಯುನಿಟಿಯ ಸುಪೀರಿಯರ್ ಆಗಿ ಮತ್ತು ಮಂಗಳೂರಿನ ಸೇಂಟ್ ಅಲೋಶಿಯಸ್ ಕಾಲೇಜಿನ ರೆಕ್ಟರ್ ಆಗಿ ಕಾರ್ಯಭಾರ ನಿರ್ವಹಿಸಿದರು. ಮಾರ್ಚ್ 19, 2014ರಲ್ಲಿ ಶಿವಮೊಗ್ಗ ಧರ್ಮ ಕ್ಷೇತ್ರದ ಬಿಷಪ್‌ರನ್ನಾಗಿ ನೇಮಿಸಲಾಗಿತ್ತು.

ಡಾ.ಫ್ರಾನ್ಸಿಸ್ ಸೆರಾವ್ ಮೈಸೂರು ಧರ್ಮ ಕ್ಷೇತ್ರದ ೯ನೇ ಬಿಷಪ್. 2024ರಲ್ಲಿ ತೆರವಾದ ಈ ಸ್ಥಾನಕ್ಕೆ ಪ್ರೇಷಿತ ಆಡಳಿತ ಅಧಿಕಾರಿಯನ್ನಾಗಿ ಬೆಂಗಳೂರು ಮಹಾಧರ್ಮ ಕ್ಷೇತ್ರದ ನಿವೃತ್ತ ಆರ್ಚ್ ಬಿಷಪ್ ಡಾ.ಬರ್ನಾರ್ಡ್ ಮೊರಾಸ್ ಅವರನ್ನು ನೇಮಿಸಲಾಗಿತ್ತು. ಮೈಸೂರು ಧರ್ಮ ಕ್ಷೇತ್ರವು ಮೈಸೂರು, ಮಂಡ್ಯ, ಕೊಡಗು ಹಾಗೂ ಚಾಮರಾಜನಗರ ಜಿಲ್ಲೆಗಳನ್ನು ಒಳಗೊಂಡಿದೆ.

ಶುಭ ಹಾರೈಕೆ
ಮೈಸೂರು ಡಯೋಸಿಸ್‌ನ ನೂತನ ಬಿಷಪ್ ಫ್ರಾನ್ಸಿಸ್ ಸೆರಾವ್ ಅವರಿಗೆ ಪ್ರೇಷಿತ ಆಡಳಿತ ಅಧಿಕಾರಿ ಡಾ. ಬರ್ನಾರ್ಡ್ ಮೊರಾಸ್ ಶುಭ ಹಾರೈಸಿದ್ದಾರೆ. ‘ಪ್ರಸ್ತುತ ಶಿವಮೊಗ್ಗ ಬಿಷಪ್ ಆಗಿರುವ ಫ್ರಾನ್ಸಿಸ್ ಸೆರಾವ್ ಅವರನ್ನು ಮೈಸೂರಿನ ಬಿಷಪ್ ಆಗಿ ನೇಮಕ ಮಾಡಲಾಗಿದೆ ಎಂದು ಘೋಷಿಸಲು ನನಗೆ ಸಂತೋಷವಾಗಿದೆ. ರೋಮ್‌ನಲ್ಲಿ ಶುಕ್ರವಾರ ಈ ಘೋಷಣೆ ಮಾಡಲಾಗಿದೆ. ನಾವೆಲ್ಲರೂ ಬಿಷಪ್ ಫ್ರಾನ್ಸಿಸ್ ಸೆರಾವ್ ಅವರನ್ನು ಹೃತ್ಪೂರ್ವಕವಾಗಿ ಸ್ವಾಗತಿಸೋಣ ಮತ್ತು ಮೈಸೂರು ಡಯಾಸಿಸ್‌ನಲ್ಲಿ ಅವರ ಸೇವೆಯು ಹಲವು ವರ್ಷಗಳ ಕಾಲ ಫಲಪ್ರದವಾಗಲಿ ಎಂದು ಹಾರೈಸೋಣ’ ಎಂದು ಅವರು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ : ಮುಖ್ಯಮಂತ್ರಿ

ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…

42 mins ago

ಮಹದೇಶ್ವರ ಬೆಟ್ಟ | ದಾಸೋಹ-ಲಾಡು ಪ್ರಸಾದಕ್ಕೆ ಸಿಲಿಂಡರ್ ಕೊರತೆ ಇಲ್ಲ ; ಅಪಪ್ರಚಾರಕ್ಕೆ ಕಿವಿಗೊಡದಿರಿ

ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…

2 hours ago

ಮ.ಬೆಟ್ಟ | ಯುಗಾದಿ ಜಾತ್ರೆಗೆ ಪಾದಯಾತ್ರೆಯಲ್ಲಿ ಬರುತ್ತಿರುವ ಭಕ್ತರು

ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಯುಗಾದಿ ಜಾತ್ರಾ ಮಹೋತ್ಸವಕ್ಕೆ…

2 hours ago

ಮೈಸೂರು | ಕೆಂಪೇಗೌಡ ವೃತ್ತ ಕಾಮಗಾರಿ ಪರಿಶೀಲಿಸಿದ ಸಂಸದ ಯದುವೀರ್‌

ಮೈಸೂರು : ನಗರದ ಹೊರವಲಯದ ಕೆಂಪೇಗೌಡ ವೃತ್ತ(ಮಣಿಪಾಲ್ ಜಂಕ್ಷನ್)ದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರದಿಂದ ನಡೆಯುತ್ತಿರುವ ಕಾಮಗಾರಿಗಳನ್ನು ಸಂಸದ ಯದುವೀರ್…

3 hours ago

ಚಿಕ್ಕಮಗಳೂರು: ಮುತ್ತೋಡಿ ಅರಣ್ಯದಲ್ಲಿ ಭಾರೀ ಕಾಡ್ಗಿಚ್ಚು

ಚಿಕ್ಕಮಗಳೂರು: ತಾಲ್ಲೂಕಿನ ಮುತ್ತೋಡಿ ಅರಣ್ಯ ವಲಯದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಪರಿಣಾಮ ಅಪರೂಪದ ಅರಣ್ಯ…

4 hours ago

ಯುಗಾದಿ ಹಾಗೂ ರಂಜಾನ್‌ ಹಬ್ಬಕ್ಕೆ 2000 ಹೆಚ್ಚುವರಿ ಬಸ್‌ ವ್ಯವಸ್ಥೆ: ಕೆಎಸ್‌ಆರ್‌ಟಿಸಿ ಪ್ರಕಟಣೆ

ಬೆಂಗಳೂರು: ಯುಗಾದಿ ಹಾಗೂ ರಂಜಾನ್‌ ಹಬ್ಬದ ಪ್ರಯುಕ್ತ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ 2000 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ…

4 hours ago