ಮೈಸೂರು : ವಂಚನೆ ಪ್ರಕರಣದಲ್ಲಿ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾಗಿದ್ದ ವಕೀಲನನ್ನು ವಿದ್ಯಾರಣ್ಯಪುರಂ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ವಿಶ್ವಾಸ ದ್ರೋಹ ಹಾಗೂ ವಂಚನೆಯ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ತಲೆ ಮರೆಸಿಕೊಂಡಿದ್ದ ಓರಿಯಂಟಲ್ ಬ್ಯಾಂಕ್ ಆ್ ಕಾಮರ್ಸ್ ಮಾಜಿ ವ್ಯವಸ್ಥಾಪಕ, ವಕೀಲ ಬೆಂಕಿ ಚಿದಾನಂದ್ ಅವರನ್ನು ತುಮಕೂರಿನಲ್ಲಿ ಬಂಧಿಸಿದ ಪೊಲೀಸರು, ನ್ಯಾಯಾಧೀಶರ ಎದುರು ಹಾಜರು ಪಡಿಸಿ, ಶಿಕ್ಷೆ ಜಾರಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.
ಬೆಂಕಿ ಚಿದಾನಂದ ಲಷ್ಕರ್ ಮೊಹಲ್ಲಾದ ಕೆ.ರಾಘು ಅವರಿಂದ 2012ರಲ್ಲಿ 20 ಸಾವಿರ ರೂ.ಗಳನ್ನು ಸಾಲವಾಗಿ ಪಡೆದಿದ್ದರು. ಆ ಸಾಲದ ಮರು ಪಾವತಿಗಾಗಿ ದಿವಾನ್ಸ್ ರಸ್ತೆಯ ಓರಿಯಂಟಲ್ ಬ್ಯಾಂಕ್ ಆ್ ಕಾಮರ್ಸ್ನ 20 ಸಾವಿರ ರೂ. ಮೊತ್ತದ ಚೆಕ್ವೊಂದಕ್ಕೆ ಸಹಿ ಮಾಡಿ ರಾಘು ಅವರಿಗೆ ನೀಡಿದ್ದರು. ರಾಘು ಬ್ಯಾಂಕಿಗೆ ಹಾಜರುಪಡಿಸಿದಾಗ ಚೆಕ್ಬೌನ್ಸ್ ಆಗಿತ್ತು. ಬೆಂಕಿ ಚಿದಾನಂದ ಅವರ ಮನೆಯ ಬಳಿ ಹೋಗಿ ವಿಚಾರ ತಿಳಿಸಿ, ಹಣ ವಾಪಸ್ ನೀಡುವಂತೆ ಕೇಳಿದ್ದರು. ಆಗ ಬೆಂಕಿ ಚಿದಾನಂದ, ‘‘ಈ ವಿಚಾರವಾಗಿ ಕೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು’’ ಎಂದು ರಾಘು ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ಪೊಲೀಸರು ಬೆಂಕಿ ಚಿದಾನಂದ್, ಪತ್ನಿ ಗಿರಿಜಾಂಬಾ ಹಾಗೂ ಪುತ್ರ ಸ್ನೇಹಿತ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ದೋಷಾ ರೋಪಣೆ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಚಿದಾನಂದ್ ಅವರಿಗೆ 3 ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಿತ್ತು. ಚಿದಾನಂದ್ ಅವರು ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಕೆಳ ನ್ಯಾಯಾಲಯದ ಆದೇಶವನ್ನು ಎತ್ತಿಹಿಡಿದು, ಚಿದಾನಂದ್ ಅವರ ಅರ್ಜಿಯನ್ನು ವಜಾಗೊಳಿಸಿ ತೀರ್ಪು ನೀಡಿದೆ.
ಅರ್ಜಿಯನ್ನು ವಜಾಗೊಳಿಸಿ ತೀರ್ಪು ನೀಡಿದ ಹಿನ್ನಲೆಯಲ್ಲಿ ನ್ಯಾಯಾಲಯದ ಆದೇಶ ಜಾರಿಗೆ ಪೊಲೀಸರು, ಚಿದಾನಂದ್ ನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…
ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…
ಅಣ್ಣೂರು ಸತೀಶ್ ೩೦ ಹಾಸಿಗೆಯ ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲ; ತುರ್ತು ಚಿಕಿತ್ಸೆಯೂ ಲಭ್ಯವಿಲ್ಲ ಭಾರತೀನಗರ: ಸುಮಾರು ನೂರಕ್ಕೂ ಹೆಚ್ಚು ಗ್ರಾಮಗಳ…
ಕೃಷ್ಣ ಸಿದ್ದಾಪುರ ಸ್ಥಳಾಂತರಿಸಿದ್ದ ಪುಂಡಾನೆ ಪುನಃ ಕೊಡಗಿನಲ್ಲಿ ಸಂಚಾರ: ನರಹಂತಕ ಆನೆಯನ್ನು ಸೆರೆ ಹಿಡಿದು ಪಳಗಿಸುವಂತೆ ಗ್ರಾಮಸ್ಥರ ಆಗ್ರ ಸಿದ್ದಾಪುರ:…
ಕೆ.ಎಸ್.ಚಂದ್ರಶೇಖರಮೂರ್ತಿ ರಾಮಕೃಷ್ಣ ನಗರದ ನಂದನವನ ಈಗ ಕುಡುಕರ ತಾಣ, ಬಯಲು ಶೌಚಾಲಯ ! ಮೈಸೂರು: ಸಾರ್ವಜನಿಕರಿಗೆ ವಿಶ್ರಾಂತಿಯ ತಾಣವಾಗಬೇಕಿದ್ದ ಉದ್ಯಾನವನ…