ಮೈಸೂರು

ನಕಲಿ ಚಿನ್ನ ಅಡವಿಟ್ಟು ವಂಚಿಸುತಿದ್ದ ಅಸಾಮಿ ಬಂಧನ

ಹುಣಸೂರು : ಗಿರವಿ ಅಂಗಡಿಯಲ್ಲಿ ಸ್ನೇಹಿತರ ಹೆಸರುಗಳಲ್ಲಿ ನಕಲಿ ಚಿನ್ನದ ಉಂಗುರಗಳನ್ನು ಅಡವಿಟ್ಟು ಪಂಗನಾಮ ಹಾಕಿ ಲಕ್ಷಾಂತರ ರೂ. ಮೋಸ ಮಾಡಿದ್ದ ಆರೋಪಿಯನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಚಿಕ್ಕನಾಯಕನಹಳ್ಳಿಯ ಮಂಜುನಾಥ ಅಲಿಯಾಸ್ ಮಹೇಶ್ ಬಂಧಿತ ಆರೋಪಿ. ಮತ್ತಿಬ್ಬರು ಕಾರಿನೊಂದಿಗೆ ಪರಾರಿಯಾಗಿದ್ದಾರೆ.

ಈತ ತಾಲ್ಲೂಕಿನ ಗಾವಡಗೆರೆ ಗ್ರಾಮದ ಕಾವೇರಿ ಜ್ಯುವೆಲ್ಲರ್ಸ್ ಚಿನ್ನ, ಬೆಳ್ಳಿ ಗಿರವಿ ಅಂಗಡಿಯಲ್ಲಿ ೨೦೨೩ರ ನವೆಂಬರ್ ೨೪ರಿಂದ ೨೦೨೫ ಜು.೫ರವರೆಗೆ ಕೆಡಿಎಂ ೯೧೬ ಮಾರ್ಕ್ ಇರುವ ೧೧ ನಕಲಿ ಉಂಗುರಗಳನ್ನು ಗಿರವಿ ಇಟ್ಟು ಸುಮಾರು ೫ ಲಕ್ಷ ರೂ. ಸಾಲ ಪಡೆದಿದ್ದ.

ಪ್ರಕರಣದ ವಿವರ:
ಮಂಜುನಾಥ ಪದೇಪದೇ ಸ್ನೇಹಿತರೊಂದಿಗೆ ಬಂದು ಬೇರೆ ಬೇರೆ ಹೆಸರುಗಳಲ್ಲಿ ಉಂಗುರಗಳನ್ನು ಗಿರವಿ ಇಡುತ್ತಿರುವುದರಿಂದ ಅನುಮಾನಗೊಂಡ ಅಂಗಡಿ ಮಾಲಿಕ ಜೆಸಿಂಗ್ ಉಂಗುರಗಳನ್ನು ಪರೀಕ್ಷಿಸಿದ ವೇಳೆ ನಕಲಿ ಚಿನ್ನ ಎಂಬುದು ತಿಳಿದು ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರಿಗೆ ದೂರು ನೀಡಿದ್ದರು.

ಶನಿವಾರ ಆರೋಪಿ ಮಂಜುನಾಥ್ ಕಾರಿನಲ್ಲಿ ತನ್ನಿಬ್ಬರು ಸ್ನೇಹಿತರೊಂದಿಗೆ ಬಂದು ಉಂಗುರ ಗಿರವಿ ಇಡಲು ಮುಂದಾದ ವೇಳೆ ಗಿರವಿ ಅಂಗಡಿ ಮಾಲಿಕ ಜೆಸಿಂಗ್ ಅಕ್ಕಪಕ್ಕದವರಿಗೆ ಮಾಹಿತಿ ನೀಡಿ ಪೊಲೀಸರಿಗೆ ತಿಳಿಸಿದ್ದಾರೆ. ಈ ವೇಳೆ ಮಂಜುನಾಥ್ ಸಿಕ್ಕಿ ಬಿದ್ದಿದ್ದು, ಕಾರಿನಲ್ಲಿದ್ದ ಇಬ್ಬರು ಪರಾರಿಯಾಗಿದ್ದಾರೆ.

ಎಸ್‌ಪಿ ವಿಷ್ಣುವರ್ಧನ್, ಡಿವೈಎಸ್‌ಪಿ ಗೋಪಾಕೃಷ್ಣರವರ ಮಾರ್ಗದರ್ಶನದಲ್ಲಿ ಇನ್‌ಸ್ಪೆಕ್ಟರ್ ಎನ್.ಮುನಿಯಪ್ಪ, ಉಪನಿರೀಕ್ಷಕರಾದ ರಾಮು, ಶ್ರೀನಿವಾಸಲು, ಎಎಸ್‌ಐ ಅಂತೋಣಿಕ್ರೂಸ್, ಸಿಬ್ಬಂದಿಗಳಾದ ವಿಜಯರಾಘು, ಇಮ್ರಾನ್‌ಷರೀಫ್, ಮಹದೇವ, ರಮೇಶ, ಮಂಜುನಾಥ, ಚಾಲಕ ಸುಂದರ್‌ರಾಜು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

8 mins ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

19 mins ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

51 mins ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

2 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

2 hours ago

ಅಪ್ಪಟ ಸಮಾಜವಾದಿ, ಗುಡಿಸಲೂ ಇರದಿದ್ದ ಜೋಗಿ ಕಿಶನ್ ಪಟ್ನಾಯಕ್

ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…

10 hours ago