ಮೈಸೂರು

ನಕಲಿ ಚಿನ್ನ ಅಡವಿಟ್ಟು ವಂಚಿಸುತಿದ್ದ ಅಸಾಮಿ ಬಂಧನ

ಹುಣಸೂರು : ಗಿರವಿ ಅಂಗಡಿಯಲ್ಲಿ ಸ್ನೇಹಿತರ ಹೆಸರುಗಳಲ್ಲಿ ನಕಲಿ ಚಿನ್ನದ ಉಂಗುರಗಳನ್ನು ಅಡವಿಟ್ಟು ಪಂಗನಾಮ ಹಾಕಿ ಲಕ್ಷಾಂತರ ರೂ. ಮೋಸ ಮಾಡಿದ್ದ ಆರೋಪಿಯನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಚಿಕ್ಕನಾಯಕನಹಳ್ಳಿಯ ಮಂಜುನಾಥ ಅಲಿಯಾಸ್ ಮಹೇಶ್ ಬಂಧಿತ ಆರೋಪಿ. ಮತ್ತಿಬ್ಬರು ಕಾರಿನೊಂದಿಗೆ ಪರಾರಿಯಾಗಿದ್ದಾರೆ.

ಈತ ತಾಲ್ಲೂಕಿನ ಗಾವಡಗೆರೆ ಗ್ರಾಮದ ಕಾವೇರಿ ಜ್ಯುವೆಲ್ಲರ್ಸ್ ಚಿನ್ನ, ಬೆಳ್ಳಿ ಗಿರವಿ ಅಂಗಡಿಯಲ್ಲಿ ೨೦೨೩ರ ನವೆಂಬರ್ ೨೪ರಿಂದ ೨೦೨೫ ಜು.೫ರವರೆಗೆ ಕೆಡಿಎಂ ೯೧೬ ಮಾರ್ಕ್ ಇರುವ ೧೧ ನಕಲಿ ಉಂಗುರಗಳನ್ನು ಗಿರವಿ ಇಟ್ಟು ಸುಮಾರು ೫ ಲಕ್ಷ ರೂ. ಸಾಲ ಪಡೆದಿದ್ದ.

ಪ್ರಕರಣದ ವಿವರ:
ಮಂಜುನಾಥ ಪದೇಪದೇ ಸ್ನೇಹಿತರೊಂದಿಗೆ ಬಂದು ಬೇರೆ ಬೇರೆ ಹೆಸರುಗಳಲ್ಲಿ ಉಂಗುರಗಳನ್ನು ಗಿರವಿ ಇಡುತ್ತಿರುವುದರಿಂದ ಅನುಮಾನಗೊಂಡ ಅಂಗಡಿ ಮಾಲಿಕ ಜೆಸಿಂಗ್ ಉಂಗುರಗಳನ್ನು ಪರೀಕ್ಷಿಸಿದ ವೇಳೆ ನಕಲಿ ಚಿನ್ನ ಎಂಬುದು ತಿಳಿದು ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರಿಗೆ ದೂರು ನೀಡಿದ್ದರು.

ಶನಿವಾರ ಆರೋಪಿ ಮಂಜುನಾಥ್ ಕಾರಿನಲ್ಲಿ ತನ್ನಿಬ್ಬರು ಸ್ನೇಹಿತರೊಂದಿಗೆ ಬಂದು ಉಂಗುರ ಗಿರವಿ ಇಡಲು ಮುಂದಾದ ವೇಳೆ ಗಿರವಿ ಅಂಗಡಿ ಮಾಲಿಕ ಜೆಸಿಂಗ್ ಅಕ್ಕಪಕ್ಕದವರಿಗೆ ಮಾಹಿತಿ ನೀಡಿ ಪೊಲೀಸರಿಗೆ ತಿಳಿಸಿದ್ದಾರೆ. ಈ ವೇಳೆ ಮಂಜುನಾಥ್ ಸಿಕ್ಕಿ ಬಿದ್ದಿದ್ದು, ಕಾರಿನಲ್ಲಿದ್ದ ಇಬ್ಬರು ಪರಾರಿಯಾಗಿದ್ದಾರೆ.

ಎಸ್‌ಪಿ ವಿಷ್ಣುವರ್ಧನ್, ಡಿವೈಎಸ್‌ಪಿ ಗೋಪಾಕೃಷ್ಣರವರ ಮಾರ್ಗದರ್ಶನದಲ್ಲಿ ಇನ್‌ಸ್ಪೆಕ್ಟರ್ ಎನ್.ಮುನಿಯಪ್ಪ, ಉಪನಿರೀಕ್ಷಕರಾದ ರಾಮು, ಶ್ರೀನಿವಾಸಲು, ಎಎಸ್‌ಐ ಅಂತೋಣಿಕ್ರೂಸ್, ಸಿಬ್ಬಂದಿಗಳಾದ ವಿಜಯರಾಘು, ಇಮ್ರಾನ್‌ಷರೀಫ್, ಮಹದೇವ, ರಮೇಶ, ಮಂಜುನಾಥ, ಚಾಲಕ ಸುಂದರ್‌ರಾಜು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

7 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

11 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

15 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

17 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

18 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

19 hours ago