ಮೈಸೂರು: ಯುಜಿಸಿ ನೆಟ್ ಮತ್ತು ಕೆಸೆಟ್ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ನಗರದ ಜ್ಞಾನಬುತ್ತಿ ಸಂಸ್ಥೆಯು ಉಚಿತ ತರಬೇತಿ ನೀಡಲಿದೆ.
ಈ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದ್ದು, ಆಸಕ್ತ ವಿದ್ಯಾರ್ಥಿಗಳು ಡಿ.೫ ರೊಳಗಾಗಿ ಸಂಜೆ ೫.೩೦ ರಿಂದ ೭.೩೦ರವರೆಗೆ ಮೈಸೂರಿನ ಲಕ್ಷ್ಮೀಪುರಂ ಸರ್ಕಾರಿ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜಿನಲ್ಲಿರುವ ಜ್ಞಾನಬುತ್ತಿ ಸಂಸ್ಥೆಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು.
ವಿಶ್ವವಿದ್ಯಾನಿಲಯದ ಧನ ಸಹಾಯ ಆಯೋಗದವರು ೨೦೨೫ರ ಜನವರಿ ತಿಂಗಳಲ್ಲಿ ನಡೆಸಲಿರುವ ಕಾಲೇಜು ಸಹಾಯಕ ಪ್ರಾಧ್ಯಾಪಕರ ಮತ್ತು ಕಿರಿಯ ಶಿಷ್ಯವೇತನ ಸಂಶೋಧನಾ ಸಹಾಯಕರ ಅರ್ಹತಾ(ಯುಜಿಸಿ-ನೆಟ್) ಪರೀಕ್ಷೆಗೆ ಈ ತರಬೇತಿ ನಡೆಯಲಿದೆ.
ಮಾಹಿತಿಗಾಗಿ ಸಂಸ್ಥೆಯ ಸಂಯೋಜಕರಾದ ಸಿ.ಕೆ.ಕಿರಣ್ ಕೌಶಿಕ್(ಮೊ.೯೯೭೨೮ ೩೦೮೫೭), ಕೆ.ವೈ.ನಾಗೇಂದ್ರ (ಮೊ.೮೨೯೬೭ ೮೮೨೫೧) ಸಂಪರ್ಕಿಸಬಹುದು ಎಂದು ಸಂಸ್ಥೆಯ ಕಾರ್ಯದರ್ಶಿ ಎಚ್.ಬಾಲಕೃಷ್ಣ ಪ್ರಕಟಣೆಯಲ್ಲಿ ಕೋರಿದ್ದಾರೆ.
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…
ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…
ಮುಖ್ಯಮಂತ್ರಿ ಸಿದ್ದರಾಮಯ್ಯನವರು ೧೬ನೇ ಬಜೆಟ್ ಮಂಡನೆ ವೇಳೆ ಸಿನಿಮಾ ಟಿಕೆಟ್ ದರ ನಿಗದಿಯ ಬಗ್ಗೆ ಪ್ರಸ್ತಾಪಿಸಿದ್ದು, ಸಿನಿ ಪ್ರಿಯರಿಗೆ ಸಂತಸ…
ದಲಿತ ಸಮುದಾಯಕ್ಕೆ ಮೀಸಲಿಟ್ಟಿದ್ದ ಹಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೇರೆ ಖಾತೆಗೆ ವರ್ಗಾವಣೆ ಮಾಡಿಸಿದ್ದಾರೆ. ಹೀಗೆ ದಲಿತ ಸಮುದಾಯಕ್ಕೆ ಅನ್ಯಾಯ ಮಾಡಿದ್ದಕ್ಕಾಗಿ…