Categories: ಮೈಸೂರು

ಯುಜಿಸಿ ನೆಟ್‌, ಕೆ-ಸೆಟ್ ಪರೀಕ್ಷೆಗೆ ಉಚಿತ ತರಬೇತಿ

ಮೈಸೂರು: ಯುಜಿಸಿ ನೆಟ್‌ ಮತ್ತು ಕೆಸೆಟ್‌ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ನಗರದ ಜ್ಞಾನಬುತ್ತಿ ಸಂಸ್ಥೆಯು ಉಚಿತ ತರಬೇತಿ ನೀಡಲಿದೆ.

ಈ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದ್ದು, ಆಸಕ್ತ ವಿದ್ಯಾರ್ಥಿಗಳು ಡಿ.೫ ರೊಳಗಾಗಿ ಸಂಜೆ ೫.೩೦ ರಿಂದ ೭.೩೦ರವರೆಗೆ ಮೈಸೂರಿನ ಲಕ್ಷ್ಮೀಪುರಂ ಸರ್ಕಾರಿ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜಿನಲ್ಲಿರುವ ಜ್ಞಾನಬುತ್ತಿ ಸಂಸ್ಥೆಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು.

ವಿಶ್ವವಿದ್ಯಾನಿಲಯದ ಧನ ಸಹಾಯ ಆಯೋಗದವರು ೨೦೨೫ರ ಜನವರಿ ತಿಂಗಳಲ್ಲಿ ನಡೆಸಲಿರುವ ಕಾಲೇಜು ಸಹಾಯಕ ಪ್ರಾಧ್ಯಾಪಕರ ಮತ್ತು ಕಿರಿಯ ಶಿಷ್ಯವೇತನ ಸಂಶೋಧನಾ ಸಹಾಯಕರ ಅರ್ಹತಾ(ಯುಜಿಸಿ-ನೆಟ್) ಪರೀಕ್ಷೆಗೆ ಈ ತರಬೇತಿ ನಡೆಯಲಿದೆ.

ಮಾಹಿತಿಗಾಗಿ ಸಂಸ್ಥೆಯ ಸಂಯೋಜಕರಾದ ಸಿ.ಕೆ.ಕಿರಣ್ ಕೌಶಿಕ್(ಮೊ.೯೯೭೨೮ ೩೦೮೫೭), ಕೆ.ವೈ.ನಾಗೇಂದ್ರ (ಮೊ.೮೨೯೬೭ ೮೮೨೫೧) ಸಂಪರ್ಕಿಸಬಹುದು ಎಂದು ಸಂಸ್ಥೆಯ ಕಾರ್ಯದರ್ಶಿ ಎಚ್.ಬಾಲಕೃಷ್ಣ ಪ್ರಕಟಣೆಯಲ್ಲಿ ಕೋರಿದ್ದಾರೆ.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಭಾರತದಲ್ಲಿ ಟೆಲಿಗ್ರಾಂ ನಿಷೇಧ ತೆರವು

ನವದೆಹಲಿ: ನೀಟ್‌ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್‌ ಹಾಗೂ…

2 hours ago

ಓದುಗರ ಪತ್ರ: ಫಿಜಿಯೋ ಥೆರಪಿ ಸೌಲಭ್ಯ ಕಲ್ಪಿಸಿ

ಹೆಗ್ಗಡದೇವನಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಫಿಜಿಯೋಥೆರಪಿ ಸೌಲಭ್ಯವಿಲ್ಲದೇ ತಾಲ್ಲೂಕಿನ ಗ್ರಾಮಸ್ಥರು ಫಿಜಿಯೋ ಥೆರಪಿಗಾಗಿ ಖಾಸಗಿ ಆಸ್ಪತ್ರೆಗೆ ತೆರಳುವುದು ಅನಿವಾರ್ಯವಾಗಿದೆ. ಹಣವಿದ್ದವರು ಖಾಸಗಿ…

4 hours ago

ಓದುಗರ ಪತ್ರ: ಮರಗಳ ಗಣತಿ ಸ್ವಾಗತಾರ್ಹ

ಮೈಸೂರಿನಲ್ಲಿ ಭೇರುಂಡ ಫೌಂಡೇಷನ್ ಮುಖ್ಯಸ್ಥರಾದ ರಾಜವಂಶಸ್ಥೆ ತ್ರಿಷಿಕಾ ಕುಮಾರಿ ಒಡೆಯರ್ ಅವರ ನೇತೃತ್ವದಲ್ಲಿ ‘ನಮ್ಮ ಮರಗಳ ಗಣತಿ’ ಯ ಹೆಸರಿನಲ್ಲಿ…

4 hours ago

ಓದುಗರ ಪತ್ರ: ವಿದ್ಯುತ್ ವಿತರಣೆ ಖಾಸಗೀಕರಣ ಸಲ್ಲದು

ರಾಜ್ಯದಲ್ಲಿ ವಿದ್ಯುತ್ ವಿತರಣಾ ಪರವಾನಿಗೆಗಾಗಿ ಟಾಟಾ ಪವರ್ ಕಂಪೆನಿ ಅರ್ಜಿ ಸಲ್ಲಿಸಿದ್ದು, ಇದರ ವಿರುದ್ಧ ರೈತರು ಹಾಗೂ ಸಾರ್ವಜನಿಕರು ಪ್ರತಿಭಟನೆ…

4 hours ago

ದಂಡ ರಿಯಾಯಿತಿ: ನಿಯಮ ಉಲ್ಲಂಘನೆಗೆ ಸ್ಛೂರ್ತಿ?

‘ಸಂಚಾರ ನಿಯಂತ್ರಣ ಪೊಲೀಸರ ಆದ್ಯ ಕರ್ತವ್ಯ ಆಗಲಿ’  ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಬೆಂಗಳೂರಿನ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರ…

7 hours ago

ಮಳೆ ಕ್ಷೀಣ; ಕುಸಿದ ಹಾರಂಗಿ ಒಳಹರಿವು

ಕೆ.ಬಿ.ಶಂಶುದ್ಧೀನ್ ನಿರೀಕ್ಷಿತ ಪ್ರಮಾಣದಲ್ಲಿ ಬೀಳದ ಮಳೆ; ರೈತರಲ್ಲಿ ಹೆಚ್ಚಿದ ಆತಂಕ ಕುಶಾಲನಗರ: ಮುಂಗಾರು ಮಳೆ ಕೊರತೆಯಿಂದ ಕೊಡಗು ಜಿಲ್ಲೆಯ ಹಾರಂಗಿ…

8 hours ago