ಮೈಸೂರು: ಯುಜಿಸಿ ನೆಟ್ ಮತ್ತು ಕೆಸೆಟ್ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ನಗರದ ಜ್ಞಾನಬುತ್ತಿ ಸಂಸ್ಥೆಯು ಉಚಿತ ತರಬೇತಿ ನೀಡಲಿದೆ.
ಈ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದ್ದು, ಆಸಕ್ತ ವಿದ್ಯಾರ್ಥಿಗಳು ಡಿ.೫ ರೊಳಗಾಗಿ ಸಂಜೆ ೫.೩೦ ರಿಂದ ೭.೩೦ರವರೆಗೆ ಮೈಸೂರಿನ ಲಕ್ಷ್ಮೀಪುರಂ ಸರ್ಕಾರಿ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜಿನಲ್ಲಿರುವ ಜ್ಞಾನಬುತ್ತಿ ಸಂಸ್ಥೆಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು.
ವಿಶ್ವವಿದ್ಯಾನಿಲಯದ ಧನ ಸಹಾಯ ಆಯೋಗದವರು ೨೦೨೫ರ ಜನವರಿ ತಿಂಗಳಲ್ಲಿ ನಡೆಸಲಿರುವ ಕಾಲೇಜು ಸಹಾಯಕ ಪ್ರಾಧ್ಯಾಪಕರ ಮತ್ತು ಕಿರಿಯ ಶಿಷ್ಯವೇತನ ಸಂಶೋಧನಾ ಸಹಾಯಕರ ಅರ್ಹತಾ(ಯುಜಿಸಿ-ನೆಟ್) ಪರೀಕ್ಷೆಗೆ ಈ ತರಬೇತಿ ನಡೆಯಲಿದೆ.
ಮಾಹಿತಿಗಾಗಿ ಸಂಸ್ಥೆಯ ಸಂಯೋಜಕರಾದ ಸಿ.ಕೆ.ಕಿರಣ್ ಕೌಶಿಕ್(ಮೊ.೯೯೭೨೮ ೩೦೮೫೭), ಕೆ.ವೈ.ನಾಗೇಂದ್ರ (ಮೊ.೮೨೯೬೭ ೮೮೨೫೧) ಸಂಪರ್ಕಿಸಬಹುದು ಎಂದು ಸಂಸ್ಥೆಯ ಕಾರ್ಯದರ್ಶಿ ಎಚ್.ಬಾಲಕೃಷ್ಣ ಪ್ರಕಟಣೆಯಲ್ಲಿ ಕೋರಿದ್ದಾರೆ.
ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…
ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…
ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…
ಶಿವಾಜಿ ಗಣೇಶನ್ ಅವರ ವಾರದ ಅಂಕಣ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…
ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…
ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…