ಸರಗೂರು: ಹಳ್ಳಿಗಾಡಿನ ಜನರಿಗೆ ಆರೋಗ್ಯ ವೃದ್ಧಿಸುವ ಸಲುವಾಗಿ ಗ್ರಾಮೀಣ ಭಾಗದಲ್ಲಿ ಆರೋಗ್ಯ ಶಿಬಿರವನ್ನು ಆಯೋಜನೆ ಮಾಡುತ್ತಿರುವ ಹಾರ್ಟ್ ಸಂಸ್ಥೆಯ ಕಾರ್ಯ ಪ್ರಶಂಸನೀಯ ಎಂದು ಅರೋಗ್ಯ ಅಧಿಕಾರಿ ಡಾ.ರವಿಕುಮಾರ್ ತಿಳಿಸಿದ್ದಾರೆ.
ಸರಗೂರು ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹಾರ್ಟ್ ಸಂಸ್ಥೆ ಮೈಸೂರು, ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಛೇರಿ ಹೆಚ್.ಡಿ.ಕೋಟೆ, ಸಮುದಾಯ ಆರೋಗ್ಯ ಕೇಂದ್ರ ಸರಗೂರು, ಪಟ್ಟಣ ಪಂಚಾಯಿತಿ ಸರಗೂರು ಇವರ ಸಂಯುಕ್ತಾಶ್ರಯದಲ್ಲಿ ನಡೆದ ಆರೋಗ್ಯ ಶಿಬಿರವನ್ನು ಉದ್ಘಾಟನೆ ಮಾಡಿ ಮಾತನಾಡಿದ ಡಾ. ರವಿಕುಮಾರ್ ಅವರು, ಗ್ರಾಮೀಣ ಪ್ರದೇಶದಲ್ಲಿ ಇಂತಹ ಆರೋಗ್ಯ ಕಾರ್ಯಕ್ರಮಗಳು ಹೆಚ್ಚು ಹೆಚ್ಚು ನಡೆಯಬೇಕು. ಇತ್ತೀಚಿನ ದಿನಗಳಲ್ಲಿ ಕ್ಯಾನ್ಸರ್ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಕ್ಯಾನ್ಸರ್ ಆರೋಗ್ಯ ಶಿಬಿರಗಳನ್ನು ಆಯೋಜಿಸುವಂತೆ ಮನವಿ ಮಾಡಿದರು.
ನಂತರ ಮಾತನಾಡಿದ ಹಾರ್ಟ್ ಸಂಸ್ಥೆ ಅಧ್ಯಕ್ಷ ಶಿವಕುಮಾರ್ ಅವರು, ಗ್ರಾಮೀಣ ಭಾಗದ ಜನರಿಗೆ ಆರೋಗ್ಯ ಶಿಕ್ಷಣ ನೀಡುವ ನಿಟ್ಟಿನಲ್ಲಿ ಈ ಸಂಸ್ಥೆಯು ಹುಟ್ಟಿದ್ದು, ನಮ್ಮ ತಾಲ್ಲೂಕಿನಲ್ಲಿ ಆರೋಗ್ಯ ಶಿಬಿರಗಳನ್ನು ಆಯೋಜಿಸುತ್ತಿದ್ದೇವೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರು ಶಿಬಿರದ ಪ್ರಯೋಜನ ಪಡೆದು ಅರೋಗ್ಯವಂತರಾಗುವಂತೆ ತಿಳಿಸಿದರು.
ನಂತರ ಸಂಧಿವಾತ ತಜ್ಞರಾದ ಮಹಾಬಲೇಶ್ವರ ಮಾಮದಪುರ ಸಂಧಿವಾತ ಲಕ್ಷಣಗಳು, ವಿಧಗಳು, ಮತ್ತು ಪರಿಹಾರಗಳ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ತಾಲ್ಲೂಕು ಆರೋಗ್ಯ ಅಧಿಕಾರಿಗಳಾದ ಡಾ.ರವಿಕುಮಾರ್, ವೈದ್ಯಾಧಿಕಾರಿ ಡಾ.ಪಾರ್ಥಸಾರಥಿ, ಹಾರ್ಟ್ ಸಂಸ್ಥೆ ಅಧ್ಯಕ್ಷ ಶಿವಕುಮಾರ್, ಸಂಧಿವಾತ ಕೀಲು ರೋಗ ತಜ್ಞರಾದ ಮಹಾಬಲೇಶ್ವರ ಮಾಮದಪುರ, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ರಾಧಿಕಾ ಶ್ರೀನಾಥ್, ಆರೋಗ್ಯ ನಿರೀಕ್ಷಕರಾದ ಅನಿತಾ, ಮೇಲ್ವಿಚಾರಕ ದಿನೇಶ್, ಎಎಸ್ಜಿ ಕಣ್ಣಿನ ಆಸ್ಪತ್ರೆ ಮಹೇಶ್, ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಕರಾದ ಜಗದೀಶ್, ರವಿರಾಜ್ ಸೇರಿದಂತೆ ಹಲವು ಸಾರ್ವಜನಿಕರು ಭಾಗಿಯಾಗಿದ್ದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಖೆ ಅರಣ್ಯದಲ್ಲಿ ನಡೆದ ಗುಂಡಿನ…
ಕುಶಾಲನಗರ: ತಾಲ್ಲೂಕಿನ ಕೂಡಿಗೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಹೆಗ್ಗಡಹಳ್ಳಿ ಗ್ರಾಮದ…
ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…
ಅಯೋಧ್ಯೆ: ಅಯೋಧ್ಯೆ ರಾಮಮಂದಿರದ ಅರ್ಚಕರಿಗೆ ಹಳದಿ ರೇಷ್ಮೆ ಧೋತಿಯನ್ನು ಹೊಸ ಡ್ರೆಸ್ ಕೋಡ್ ಆಗಿ ಜಾರಿಗೆ ತರಲಾಗಿದೆ. ರಾಮನಂದಿ ಸಂಪ್ರದಾಯಕ್ಕೆ…
ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…