ಮೈಸೂರು

ಉಚಿತ ಸಾಮೂಜಿಕ ವಿವಾಹ : ನವ ದಾಂಪತ್ಯಕ್ಕೆ ಕಾಲಿಟ್ಟ 24 ಜೋಡಿ

ನಂಜನಗೂಡು : ಇಲ್ಲಿನ ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿ ಗುರುವಾರ ಆಯೋಜಿಸಿದ್ದ ಉಚಿತ ಸಾಮೂಹಿಕ ವಿವಾಹದಲ್ಲಿ 24 ಜೋಡಿಗಳು ನವಜೀವನಕ್ಕೆ ಕಾಲಿಟ್ಟರು.

ಜಿಲ್ಲಾಡಳಿತ, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ 24 ನವಜೋಡಿಗಳು ದಾಂಪತ್ಯಕ್ಕೆ ಮುನ್ನುಡಿ ಬರೆದರು.

ಬಳಿಕ ಅಧ್ಯಕ್ಷತೆಯ ವಹಿಸಿ ಅವರು ಮಾತನಾಡಿದ ಅಪರ ಜಿಲ್ಲಾಧಿಕಾರಿ ಡಾ. ಪಿ ಶಿವರಾಜು, ಸಾಲ ಮಾಡಿ ಮದುವೆ ಆಗದೆ ಸರಳವಾಗಿ ಮದುವೆ ಆಗುವ ಮೂಲಕ ಎಲ್ಲರಿಗೂ ಮಾದರಿ ಆಗಬೇಕು ಎಂದು ಹೇಳಿದರು.

ಮದುವೆಗೆ ದುಂದು ವೆಚ್ಚ ಮಾಡಿ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಒಳಗಾಗುತ್ತಿರುವುದನ್ನು ತಪ್ಪಿಸಲು ರಾಜ್ಯ ಸರ್ಕಾರ ಆರಂಭಿಸಿರುವ ಯೋಜನೆ ಇದಾಗಿದೆ. ಮಾಂಗಲ್ಯ ಭಾಗ್ಯ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ. 2020 ರಿಂದ ಮಾಂಗಲ್ಯ ಭಾಗ್ಯ ಯೋಜನೆ ಪ್ರಾರಂಭವಾಯಿತು. ಇದರ ಸದುಪಯೋಗ ಪಡೆದುಕೊಂಡು ಮದುವೆ ದುಂದುವೆಚ್ಚಕ್ಕೆ ಕಡಿವಾಣ ಹಾಕಿರಿ ಎಂದು ಸಲಹೆ ನೀಡಿದರು.

ಅದ್ದೂರಿ, ಆಡಂಬರದ ಮದುವೆ ಮಾಡಿ ಸಾಲ ತೀರಿಸಲು ಕಷ್ಟ ಪಡುವುದು ಬೇಡ. ಈ ರೀತಿ ಸರಳವಾಗಿ ಮದುವೆ ಆಗುವುದರಿಂದ ಆರ್ಥಿಕವಾಗಿ ಹಣ ಉಳಿತಾಯ ಆಗುತ್ತದೆ. ಈ ಹಣವನ್ನು ಬೇರೆ ಕಾರ್ಯಗಳಿಗೆ ಬಳಸಿಕೊಳ್ಳಿ ಎಂದು ಕಿವಿಮಾತು ಹೇಳಿದ ಅವರು ಈ ಬಾರಿ 24 ಜೋಡಿಗಳು ಸಾಮೂಹಿಕ ವಿವಾಹ ಆಗಿದ್ದು , ಮುಂದಿನ ವರ್ಷ ಕನಿಷ್ಠ 100 ಜೋಡಿಗಳು ಸಾಮೂಹಿಕ ವಿವಾಹದಲ್ಲಿ ಮದುವೆ ಆಗಬೇಕು ಎಂದು ತಿಳಿಸಿದರು.

ನಂಜನಗೂಡು ನಗರಸಭೆಯ ಅಧ್ಯಕ್ಷರಾದ ಶ್ರೀಕಂಠ ಮಾತನಾಡಿ, ಧಾರ್ಮಿಕ ದತ್ತಿ ಇಲಾಖೆಯ ವತಿಯಿಂದ ಸಾಮೂಹಿಕ ವಿವಾಹ ಏರ್ಪಡಿಸಿರುವುದು ಉತ್ತಮವಾದ ಕಾರ್ಯ. ಇದರಿಂದ ದುಂದು ವೆಚ್ಚ ತಡೆಯಲು ಸಾಧ್ಯವಾಗುತ್ತದೆ. ಬಡವರು ಉಚಿತವಾಗಿ ಮದುವೆ ಆಗಲು ಅನುಕೂಲಕರವಾಗಿದೆ. ಆದ್ದರಿಂದ ಇನ್ನೂ ಹೆಚ್ಚು ಹೆಚ್ಚು ಸಾಮೂಹಿಕ ವಿವಾಹ ಕಾರ್ಯಕ್ರಮಗಳು ನಡೆಯಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಶಿವಕುಮಾರ್ ಕಾಸನೂರು, ಶ್ರೀಕಂಠೇಶ್ವರ ದೇವಾಲಯದ ಜಗದೀಶ್ ಕುಮಾರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಟಿ.ಕೆ ಹರೀಶ್, ವೃತ್ತ ನಿರೀಕ್ಷಕರಾದ ರವೀಂದ್ರ ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಗ್ರಾಮ ಪಂಚಾಯ್ತಿ ಚುನಾವಣೆ : ಸಿದ್ಧತೆಗೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ ಸರ್ಕಾರ

ಬೆಂಗಳೂರು : 2026-31ನೇ ಸಾಲಿನ ಗ್ರಾಮ ಪಂಚಾಯ್ತಿಗಳ ಚುನಾವಣೆಗೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಹಾಗೂ…

16 mins ago

ಗ್ರಾಮ ಸ್ವರಾಜ್ಯದ ಕಲ್ಪನೆಗೆ ಶಕ್ತಿ ತುಂಬಿದ್ದು ಗಾಂಧಿಜೀ : ಸಿಎಂ

ಬೆಂಗಳೂರು : ಹಳ್ಳಿಯಿಂದ ದಿಲ್ಲಿಯೇ ಹೊರತು, ದಿಲ್ಲಿಯಿಂದ ಹಳ್ಳಿ ಅಲ್ಲ ಎಂದು ಪ್ರತಿಪಾದಿಸಿದ ಮಹಾತ್ಮಾ ಗಾಂಧೀಜಿಯವರು ಗ್ರಾಮ ಸ್ವರಾಜ್ಯದ ಕಲ್ಪನೆಗೆ…

27 mins ago

ಮದುವೆ ಆರತಕ್ಷತೆಗೆ ತೆರಳುತ್ತಿದ್ದ ವರನ ಮೇಲೆ ಚಾಕು ಇರಿತ ; ವಧು ಮಾಜಿ ಲವರ್‌ನಿಂದ ಕೃತ್ಯ ಶಂಕೆ

ಕೊಳ್ಳೇಗಾಲ : ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ಮದುವೆಯ ಆರತಕ್ಷತೆಗೆ ತೆರಳುತ್ತಿದ್ದ ವರನ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ಏಕಾಏಕಿ ದಾಳಿ…

2 hours ago

ಚಿರತೆ ದಾಳಿ : ರೈತನಿಗೆ ಗಾಯ

ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮನಹಳ್ಳಿ ಗ್ರಾಮದ ರಾಜಶೇಖರ ಮೂರ್ತಿ ಎಂಬುವವರ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿದ್ದು, ಅದೃಷ್ಟವಶಾತ್ ರೈತ…

3 hours ago

ಮಹಾತ್ಮ ಗಾಂಧಿ ಪುಣ್ಯತಿಥಿ | ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ, ಖರ್ಗೆ ಸೇರಿ ಗಣ್ಯರ ನಮನ

ಹೊಸದಿಲ್ಲಿ : ರಾಷ್ಟ್ರಪಿತಿ ಮಹಾತ್ಮ ಗಾಂಧಿ ಅವರ 78ನೇ ಪುಣ್ಯತಿಥಿ ಹಿನ್ನೆಲೆಯಲ್ಲಿ ಇಂದು ರಾಷ್ಟ್ರಪತಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ…

3 hours ago

ಡ್ರಗ್ಸ್‌ ಗುಮಾನಿ | ಎನ್‌ಸಿಬಿ ಅಧಿಕಾರಿಗಳ ದಾಳಿ ಫಾಲೋಅಪ್‌ ಅಷ್ಟೇ : ಗೃಹ ಸಚಿವ

ಮೈಸೂರು : ಮೈಸೂರಿನಲ್ಲಿ ಡ್ರಗ್ಸ್‌ ತಯಾರು ಮಾಡುವ ಯಾವ ವಸ್ತುಗಳ ಸಹ ಸಿಕ್ಕಿಲ್ಲ. ಎನ್‌.ಸಿ.ಬಿ ಅಧಿಕಾರಿಗಳು ದಾಳಿ ಮಾಡಿರುವುದು ಫಾಲೋಅಪ್‌…

4 hours ago