Free mass wedding
ನಂಜನಗೂಡು : ಇಲ್ಲಿನ ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿ ಗುರುವಾರ ಆಯೋಜಿಸಿದ್ದ ಉಚಿತ ಸಾಮೂಹಿಕ ವಿವಾಹದಲ್ಲಿ 24 ಜೋಡಿಗಳು ನವಜೀವನಕ್ಕೆ ಕಾಲಿಟ್ಟರು.
ಜಿಲ್ಲಾಡಳಿತ, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ 24 ನವಜೋಡಿಗಳು ದಾಂಪತ್ಯಕ್ಕೆ ಮುನ್ನುಡಿ ಬರೆದರು.
ಬಳಿಕ ಅಧ್ಯಕ್ಷತೆಯ ವಹಿಸಿ ಅವರು ಮಾತನಾಡಿದ ಅಪರ ಜಿಲ್ಲಾಧಿಕಾರಿ ಡಾ. ಪಿ ಶಿವರಾಜು, ಸಾಲ ಮಾಡಿ ಮದುವೆ ಆಗದೆ ಸರಳವಾಗಿ ಮದುವೆ ಆಗುವ ಮೂಲಕ ಎಲ್ಲರಿಗೂ ಮಾದರಿ ಆಗಬೇಕು ಎಂದು ಹೇಳಿದರು.
ಮದುವೆಗೆ ದುಂದು ವೆಚ್ಚ ಮಾಡಿ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಒಳಗಾಗುತ್ತಿರುವುದನ್ನು ತಪ್ಪಿಸಲು ರಾಜ್ಯ ಸರ್ಕಾರ ಆರಂಭಿಸಿರುವ ಯೋಜನೆ ಇದಾಗಿದೆ. ಮಾಂಗಲ್ಯ ಭಾಗ್ಯ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ. 2020 ರಿಂದ ಮಾಂಗಲ್ಯ ಭಾಗ್ಯ ಯೋಜನೆ ಪ್ರಾರಂಭವಾಯಿತು. ಇದರ ಸದುಪಯೋಗ ಪಡೆದುಕೊಂಡು ಮದುವೆ ದುಂದುವೆಚ್ಚಕ್ಕೆ ಕಡಿವಾಣ ಹಾಕಿರಿ ಎಂದು ಸಲಹೆ ನೀಡಿದರು.
ಅದ್ದೂರಿ, ಆಡಂಬರದ ಮದುವೆ ಮಾಡಿ ಸಾಲ ತೀರಿಸಲು ಕಷ್ಟ ಪಡುವುದು ಬೇಡ. ಈ ರೀತಿ ಸರಳವಾಗಿ ಮದುವೆ ಆಗುವುದರಿಂದ ಆರ್ಥಿಕವಾಗಿ ಹಣ ಉಳಿತಾಯ ಆಗುತ್ತದೆ. ಈ ಹಣವನ್ನು ಬೇರೆ ಕಾರ್ಯಗಳಿಗೆ ಬಳಸಿಕೊಳ್ಳಿ ಎಂದು ಕಿವಿಮಾತು ಹೇಳಿದ ಅವರು ಈ ಬಾರಿ 24 ಜೋಡಿಗಳು ಸಾಮೂಹಿಕ ವಿವಾಹ ಆಗಿದ್ದು , ಮುಂದಿನ ವರ್ಷ ಕನಿಷ್ಠ 100 ಜೋಡಿಗಳು ಸಾಮೂಹಿಕ ವಿವಾಹದಲ್ಲಿ ಮದುವೆ ಆಗಬೇಕು ಎಂದು ತಿಳಿಸಿದರು.
ನಂಜನಗೂಡು ನಗರಸಭೆಯ ಅಧ್ಯಕ್ಷರಾದ ಶ್ರೀಕಂಠ ಮಾತನಾಡಿ, ಧಾರ್ಮಿಕ ದತ್ತಿ ಇಲಾಖೆಯ ವತಿಯಿಂದ ಸಾಮೂಹಿಕ ವಿವಾಹ ಏರ್ಪಡಿಸಿರುವುದು ಉತ್ತಮವಾದ ಕಾರ್ಯ. ಇದರಿಂದ ದುಂದು ವೆಚ್ಚ ತಡೆಯಲು ಸಾಧ್ಯವಾಗುತ್ತದೆ. ಬಡವರು ಉಚಿತವಾಗಿ ಮದುವೆ ಆಗಲು ಅನುಕೂಲಕರವಾಗಿದೆ. ಆದ್ದರಿಂದ ಇನ್ನೂ ಹೆಚ್ಚು ಹೆಚ್ಚು ಸಾಮೂಹಿಕ ವಿವಾಹ ಕಾರ್ಯಕ್ರಮಗಳು ನಡೆಯಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಶಿವಕುಮಾರ್ ಕಾಸನೂರು, ಶ್ರೀಕಂಠೇಶ್ವರ ದೇವಾಲಯದ ಜಗದೀಶ್ ಕುಮಾರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಟಿ.ಕೆ ಹರೀಶ್, ವೃತ್ತ ನಿರೀಕ್ಷಕರಾದ ರವೀಂದ್ರ ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.
ಡಿಸಿ ಶಿಲ್ಪಾನಾಗ್ ಸೂಚನೆ ಮೇರೆಗೆ ಅರಣ್ಯ ಇಲಾಖೆಯ ಸಫಾರಿ ವಾಹನದಲ್ಲಿ ಮಕ್ಕಳನ್ನು ಕರೆತರಲು ಕ್ರಮ ಹನೂರು : ಅಂತೂ ಇಂತೂ…
ಬೆಳಗಾವಿ : ನಾನು ಅಡ್ಜಸ್ಟ್ ಮೆಂಟ್ ರಾಜಕಾರಣಿ ಅಲ್ಲ, ನಿಜವಾದ ವಿರೋಧ ಪಕ್ಷದ ನಾಯಕ ನಾನೇ ಎಂದು ವಿಧಾನಸಭೆ ಕಲಾಪದ…
ಬೆಳಗಾವಿ : ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಪುರಾಣ ಪ್ರಸಿದ್ಧ ಕ್ಷೇತ್ರವಾಗಿರುವ ಬಿಳಿಗಿರಿ ರಂಗನಬೆಟ್ಟ ಪ್ರದೇಶವನ್ನು 5.75…
ಬೆಳಗಾವಿ : ಬಿಜೆಪಿ ನಾಯಕರಿಗೆ ರೈತರ ಮೇಲೆ ದಿಢೀರ್ ಪ್ರೀತಿ ಬಂದಿದೆ. ಅವರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿ, ಯಾರು…
ಬೆಳಗಾವಿ: ರಾಜಧಾನಿ ಬೆಂಗಳೂರನ್ನು ಹೊರತುಪಡಿಸಿದರೆ ಅತಿವೇಗವಾಗಿ ಬೆಳೆಯುತ್ತಿರುವ ಮೈಸೂರಿನಲ್ಲಿ ಸುಮಾರು 300 ಎಕರೆ ಜಮೀನಿನಲ್ಲಿ ಲೇಔಟ್ ನಿರ್ಮಾಣ ಮಾಡಿ ಸಾರ್ವಜನಿಕರಿಗೆ…
ಬೆಂಗಳೂರು: ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ರಾಜ್ಯ ಸರ್ಕಾರ ನೀಡಿದ್ದ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಆದರೆ ಈ…