ಮೈಸೂರು

ಉಚಿತ ಸಾಮೂಜಿಕ ವಿವಾಹ : ನವ ದಾಂಪತ್ಯಕ್ಕೆ ಕಾಲಿಟ್ಟ 24 ಜೋಡಿ

ನಂಜನಗೂಡು : ಇಲ್ಲಿನ ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿ ಗುರುವಾರ ಆಯೋಜಿಸಿದ್ದ ಉಚಿತ ಸಾಮೂಹಿಕ ವಿವಾಹದಲ್ಲಿ 24 ಜೋಡಿಗಳು ನವಜೀವನಕ್ಕೆ ಕಾಲಿಟ್ಟರು.

ಜಿಲ್ಲಾಡಳಿತ, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ 24 ನವಜೋಡಿಗಳು ದಾಂಪತ್ಯಕ್ಕೆ ಮುನ್ನುಡಿ ಬರೆದರು.

ಬಳಿಕ ಅಧ್ಯಕ್ಷತೆಯ ವಹಿಸಿ ಅವರು ಮಾತನಾಡಿದ ಅಪರ ಜಿಲ್ಲಾಧಿಕಾರಿ ಡಾ. ಪಿ ಶಿವರಾಜು, ಸಾಲ ಮಾಡಿ ಮದುವೆ ಆಗದೆ ಸರಳವಾಗಿ ಮದುವೆ ಆಗುವ ಮೂಲಕ ಎಲ್ಲರಿಗೂ ಮಾದರಿ ಆಗಬೇಕು ಎಂದು ಹೇಳಿದರು.

ಮದುವೆಗೆ ದುಂದು ವೆಚ್ಚ ಮಾಡಿ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಒಳಗಾಗುತ್ತಿರುವುದನ್ನು ತಪ್ಪಿಸಲು ರಾಜ್ಯ ಸರ್ಕಾರ ಆರಂಭಿಸಿರುವ ಯೋಜನೆ ಇದಾಗಿದೆ. ಮಾಂಗಲ್ಯ ಭಾಗ್ಯ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ. 2020 ರಿಂದ ಮಾಂಗಲ್ಯ ಭಾಗ್ಯ ಯೋಜನೆ ಪ್ರಾರಂಭವಾಯಿತು. ಇದರ ಸದುಪಯೋಗ ಪಡೆದುಕೊಂಡು ಮದುವೆ ದುಂದುವೆಚ್ಚಕ್ಕೆ ಕಡಿವಾಣ ಹಾಕಿರಿ ಎಂದು ಸಲಹೆ ನೀಡಿದರು.

ಅದ್ದೂರಿ, ಆಡಂಬರದ ಮದುವೆ ಮಾಡಿ ಸಾಲ ತೀರಿಸಲು ಕಷ್ಟ ಪಡುವುದು ಬೇಡ. ಈ ರೀತಿ ಸರಳವಾಗಿ ಮದುವೆ ಆಗುವುದರಿಂದ ಆರ್ಥಿಕವಾಗಿ ಹಣ ಉಳಿತಾಯ ಆಗುತ್ತದೆ. ಈ ಹಣವನ್ನು ಬೇರೆ ಕಾರ್ಯಗಳಿಗೆ ಬಳಸಿಕೊಳ್ಳಿ ಎಂದು ಕಿವಿಮಾತು ಹೇಳಿದ ಅವರು ಈ ಬಾರಿ 24 ಜೋಡಿಗಳು ಸಾಮೂಹಿಕ ವಿವಾಹ ಆಗಿದ್ದು , ಮುಂದಿನ ವರ್ಷ ಕನಿಷ್ಠ 100 ಜೋಡಿಗಳು ಸಾಮೂಹಿಕ ವಿವಾಹದಲ್ಲಿ ಮದುವೆ ಆಗಬೇಕು ಎಂದು ತಿಳಿಸಿದರು.

ನಂಜನಗೂಡು ನಗರಸಭೆಯ ಅಧ್ಯಕ್ಷರಾದ ಶ್ರೀಕಂಠ ಮಾತನಾಡಿ, ಧಾರ್ಮಿಕ ದತ್ತಿ ಇಲಾಖೆಯ ವತಿಯಿಂದ ಸಾಮೂಹಿಕ ವಿವಾಹ ಏರ್ಪಡಿಸಿರುವುದು ಉತ್ತಮವಾದ ಕಾರ್ಯ. ಇದರಿಂದ ದುಂದು ವೆಚ್ಚ ತಡೆಯಲು ಸಾಧ್ಯವಾಗುತ್ತದೆ. ಬಡವರು ಉಚಿತವಾಗಿ ಮದುವೆ ಆಗಲು ಅನುಕೂಲಕರವಾಗಿದೆ. ಆದ್ದರಿಂದ ಇನ್ನೂ ಹೆಚ್ಚು ಹೆಚ್ಚು ಸಾಮೂಹಿಕ ವಿವಾಹ ಕಾರ್ಯಕ್ರಮಗಳು ನಡೆಯಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಶಿವಕುಮಾರ್ ಕಾಸನೂರು, ಶ್ರೀಕಂಠೇಶ್ವರ ದೇವಾಲಯದ ಜಗದೀಶ್ ಕುಮಾರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಟಿ.ಕೆ ಹರೀಶ್, ವೃತ್ತ ನಿರೀಕ್ಷಕರಾದ ರವೀಂದ್ರ ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

1 hour ago

ಶೂಟೌಟ್‌ ಪ್ರಕರಣ ; ಮೃತರು ಬೇಟೆಗಾರರು ಎಂಬುದಕ್ಕೆ ಮತ್ತಷ್ಟು ಸಾಕ್ಷ್ಯ ಬಿಡುಗಡೆ ಮಾಡಿದ ಅರಣ್ಯ ಇಲಾಖೆ

ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್​​ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…

2 hours ago

ನಕಲಿ ಔಷಧ ಜಾಲ ಪತ್ತೆ ಪ್ರಕರಣ ; ಎಸ್‌ಐಟಿ ತನಿಖೆಗೆ ಆದೇಶ

ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…

3 hours ago

ಮುಡಾ ಬದಲಿ ನಿವೇಶನಗಳ ಹಂಚಿಕೆ ಆದೇಶ ರದ್ದು ; ಮುಯ್ಯಿಗೆ ಮುಯ್ಯಿ ತೀರಿಸಿಕೊಂಡ ಸಚಿವ ಯತೀಂದ್ರ

ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್‌ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…

3 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

4 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 21 ಶುಕ್ರವಾರ

6 hours ago