ಮೈಸೂರು

ಅಸಮಾನತೆ ಇರುವವರೆಗೆ ಸ್ವಾತಂತ್ರ್ಯ ಯಶಸ್ವಿಯಾಗುವುದಿಲ್ಲ : ಸಿದ್ದರಾಮಯ್ಯ

ಮೈಸೂರು : ಎಲ್ಲಿಯೆಯವರೆಗೆ ಅಸಮಾನತೆ ಇರುತ್ತದೆಯೋ ಅಲ್ಲಿಯವರೆಗೆ ಸ್ವಾತಂತ್ರ್ಯ ಯಶಸ್ವಿಯಾಗಿದೆ ಎಂದು ಹೇಳಲಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು.

ಪ್ರಗತಿಪರ ಸಂಘಟನೆಗಳ ಒಕ್ಕೂಟ ಇವರ ವತಿಯಿಂದ ಮೈಸೂರಿನ ಕಲಾ ಮಂದಿರದಲ್ಲಿ ಆಯೋಜಿಸಲಾಗಿದ್ದ ಶ್ರೀ ಪ. ಮಲ್ಲೇಶ್ – 90 ಭಾರತ ಜನತಂತ್ರದ ಸಮಕಾಲಿನ ತಲ್ಲಣಗಳು ರಾಷ್ಟ್ರೀಯ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು,  ಮನು ಸ್ಮೃತಿಯಿಂದಾಗಿ ಶೂದ್ರರು ಅಕ್ಷರ ಸಂಸ್ಕೃತಿಯಿಂದ ವಂಚಿತರಾದರು. ಚಾತುರ್ವಣ ವ್ಯವಸ್ಥೆಯಲ್ಲಿ ಮೊದಲ ಮೂರು ವರ್ಗಗಳಿಗೆ ವಿದ್ಯೆಗೆ ಅವಕಾಶವಿತ್ತು ಎಂದರು.

ಕಾಯಕ ಜೀವಿಗಳಿಗೆ ವಿದ್ಯೆ, ಆಸ್ತಿ ಇರುವಂತಿರಲಿಲ್ಲ. ಜಾತಿ ವ್ಯವಸ್ಥೆಯ ಕಾರಣದಿಂದಲೇ ಅಸಮಾನತೆ ಸೃಷ್ಟಿ ಯಾಗಿ ಕೆಲವರ ಕೈಯಲ್ಲಿ ಆಸ್ತಿ ಶೇಖರಣೆಯಾಗಿ ವಿದ್ಯೆಯಿಂದ ವಂಚಿತರಾದರು. ಎಲ್ಲಿಯೆಯವರೆಗೆ ಅಸಮಾನತೆ ಇರುತ್ತದೆಯೋ ಅಲ್ಲಿಯವರೆಗೆ ಸ್ವಾತಂತ್ರ್ಯ ಯಶಸ್ವಿಯಾಗಿದೆ ಎಂದು ಹೇಳಲಾಗುವುದಿಲ್ಲ ಎಂದರು.

ಚಲನೆಯಿಲ್ಲದ ಜಾತಿವ್ಯವಸ್ಥೆ ತೊಲಗಲು ಸಮಾನತೆ ಬರಬೇಕು : ಚಲನೆಯಿಲ್ಲದ ಜಾತಿವ್ಯವಸ್ಥೆ ನಮ್ಮ ಸಮಾಜದಲ್ಲಿದೆ. ಜಾತಿವ್ಯವಸ್ಥೆಯನ್ನು ವರ್ಟಿಕಲ್ ಆಗಿದ್ದು, ಶ್ರೇಷ್ಠ ,ಕನಿಷ್ಠವೆಂಬ ವ್ಯವಸ್ಥೆಯಿತ್ತು. ನಿರ್ಜಿವವಾದ ವ್ಯವಸ್ಥೆಗೆ ಜೀವ ಬರಬೇಕಾದರೆ ಆರ್ಥಿಕ , ಸಾಮಾಜಿಕ ಸಮಾನತೆ ಬರಬೇಕು. ಬಸವಾದಿ ಶರಣರು ಗಾಂಧಿ ಅಂಬೇಡ್ಕರ್ ರು ಸಮಾಜದಲ್ಲಿ ಬದಲಾವಣೆ ತರಲು ಶ್ರಮಿಸಿದರು.

ಕಾಯಕ ಮತ್ತು ದಾಸೋಹ ತತ್ವವನ್ನು ಬಸವಾದಿ ಶರಣರು ಪ್ರತಿಪಾದಿಸಿದರು. ಉತ್ಪಾದಿಸಿದ ಸಂಪತ್ತನ್ನು ಎಲ್ಲರೂ ಸಮನಾಗಿ ಹಂಚಿಕೊಳ್ಳಬೇಕೆಂದು ಅನುಭವ ಮಂಟಪದಲ್ಲಿ ತಿಳಿಸಿದ್ದರು. ಬಸವಾದಿ ಶರಣರ ಕಾಲದಲ್ಲಿ ಮಹಿಳೆಯರಿಗೂ, ದುರ್ಬಲವರ್ಗದವರಿಗೂ ಶಿಕ್ಷಣ ಸೇರಿದಂತೆ ಎಲ್ಲ ರಂಗದಲ್ಲಿಯೂ ಸಮಾನ ಅವಕಾಶಗಳನ್ನು ನೀಡಲಾಗಿತ್ತು.

ತಳಸಮುದಾಯಗಳು ಮುಖ್ಯವಾಹಿನಿಗೆ ಬರಬೇಕು.850 ವರ್ಷಗಳ ಹಿಂದೆ ಸಮಾನತೆಯ ತತ್ವ ಇಂದಿಗೂ ಸಮರ್ಥವಾಗಿ ಪಾಲನೆಯಾಗುತ್ತಿಲ್ಲ. ಬಸವಾದಿ ಶರಣರು ಕರ್ಮಸಿದ್ಧಾಂತವನ್ನು ಅಲ್ಲಗೆಳೆದಿದ್ದರು.

ಆದ್ದರಿಂದ ವೈಚಾರಿಕ ಹಾಗೂ ವೈಜ್ಞಾನಿಕ ಶಿಕ್ಷಣವನ್ನು ಎಲ್ಲರೂ ಪಡೆಯಬೇಕು. ಇತಿಹಾಸ ತಿಳಿದಿದ್ದರೆ ಮಾತ್ರ ಭವಿಷ್ಯ ಬರೆಯಲು ಸಾಧ್ಯ ಎಂದು ಡಾ.ಅಂಬೇಡ್ಕರ್ ತಿಳಿಸಿದ್ದರು ಎಂದರು.

andolana

Recent Posts

ಮೈಸೂರು | ಬೆಳ್ಳಂಬೆಳಗ್ಗೆ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಹತ್ಯೆ!

ಮೈಸೂರು : ಜಿಲ್ಲೆಯ ಟಿ.ನರಸೀಪುರ ಪಟ್ಟಣದಲ್ಲಿ ಬೆಳ್ಳಂಬೆಳಿಗ್ಗೆಯೇ ಮಚ್ಚು ಲಾಂಗುಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿರುವ ಘಟನೆ…

2 hours ago

ಕೊಲ್ಕತ್ತಾದಲ್ಲಿ ಮೆಸ್ಸಿ ಮೇನಿಯಾ : ಫುಟ್‌ಬಾಲ್‌ ದಂತಕಥೆಗೆ ಭರ್ಜರಿ ಸ್ವಾಗತ

ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.…

3 hours ago

ಟ್ರಂಪ್‌ ಸುಂಕ ಹೇರಿದ್ದ ರದ್ದಿಗೆ ಅಮೆರಿಕ ಸಂಸತ್ತು ನಿಲುವಳಿ

ನ್ಯೂಯಾರ್ಕ್‌ : ಭಾರತದ ಮೇಲೆ ಡೊನಾಲ್ಡ್‌ ಟ್ರಂಪ್‌ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…

4 hours ago

ಘೋರ ದುರಂತ | ಕರ್ತವ್ಯ ನಿರತ KSRTC ಮೇಲೆ ಹರಿದ ಲಾರಿ ; ಸ್ಥಳದಲ್ಲೇ ಸಾವು

ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…

4 hours ago

ಹವಾಮಾನ ಏರುಪೇರಿನಿಂದಾಗಿ ಕಾಳುಮೆಣಸಿಗೂ ಕಂಟಕ

ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್‌ ಡಿಸೋಜ ಮಡಿಕೇರಿ: ಈ ಬಾರಿಯ…

6 hours ago

ಅವಳಿ ತಾಲ್ಲೂಕುಗಳಲ್ಲಿ ಭತ್ತದ ಕಟಾವು ಜೋರು

ಭೇರ್ಯ ಮಹೇಶ್‌ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…

6 hours ago