ಮೈಸೂರು

ಅಸಮಾನತೆ ಇರುವವರೆಗೆ ಸ್ವಾತಂತ್ರ್ಯ ಯಶಸ್ವಿಯಾಗುವುದಿಲ್ಲ : ಸಿದ್ದರಾಮಯ್ಯ

ಮೈಸೂರು : ಎಲ್ಲಿಯೆಯವರೆಗೆ ಅಸಮಾನತೆ ಇರುತ್ತದೆಯೋ ಅಲ್ಲಿಯವರೆಗೆ ಸ್ವಾತಂತ್ರ್ಯ ಯಶಸ್ವಿಯಾಗಿದೆ ಎಂದು ಹೇಳಲಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು.

ಪ್ರಗತಿಪರ ಸಂಘಟನೆಗಳ ಒಕ್ಕೂಟ ಇವರ ವತಿಯಿಂದ ಮೈಸೂರಿನ ಕಲಾ ಮಂದಿರದಲ್ಲಿ ಆಯೋಜಿಸಲಾಗಿದ್ದ ಶ್ರೀ ಪ. ಮಲ್ಲೇಶ್ – 90 ಭಾರತ ಜನತಂತ್ರದ ಸಮಕಾಲಿನ ತಲ್ಲಣಗಳು ರಾಷ್ಟ್ರೀಯ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು,  ಮನು ಸ್ಮೃತಿಯಿಂದಾಗಿ ಶೂದ್ರರು ಅಕ್ಷರ ಸಂಸ್ಕೃತಿಯಿಂದ ವಂಚಿತರಾದರು. ಚಾತುರ್ವಣ ವ್ಯವಸ್ಥೆಯಲ್ಲಿ ಮೊದಲ ಮೂರು ವರ್ಗಗಳಿಗೆ ವಿದ್ಯೆಗೆ ಅವಕಾಶವಿತ್ತು ಎಂದರು.

ಕಾಯಕ ಜೀವಿಗಳಿಗೆ ವಿದ್ಯೆ, ಆಸ್ತಿ ಇರುವಂತಿರಲಿಲ್ಲ. ಜಾತಿ ವ್ಯವಸ್ಥೆಯ ಕಾರಣದಿಂದಲೇ ಅಸಮಾನತೆ ಸೃಷ್ಟಿ ಯಾಗಿ ಕೆಲವರ ಕೈಯಲ್ಲಿ ಆಸ್ತಿ ಶೇಖರಣೆಯಾಗಿ ವಿದ್ಯೆಯಿಂದ ವಂಚಿತರಾದರು. ಎಲ್ಲಿಯೆಯವರೆಗೆ ಅಸಮಾನತೆ ಇರುತ್ತದೆಯೋ ಅಲ್ಲಿಯವರೆಗೆ ಸ್ವಾತಂತ್ರ್ಯ ಯಶಸ್ವಿಯಾಗಿದೆ ಎಂದು ಹೇಳಲಾಗುವುದಿಲ್ಲ ಎಂದರು.

ಚಲನೆಯಿಲ್ಲದ ಜಾತಿವ್ಯವಸ್ಥೆ ತೊಲಗಲು ಸಮಾನತೆ ಬರಬೇಕು : ಚಲನೆಯಿಲ್ಲದ ಜಾತಿವ್ಯವಸ್ಥೆ ನಮ್ಮ ಸಮಾಜದಲ್ಲಿದೆ. ಜಾತಿವ್ಯವಸ್ಥೆಯನ್ನು ವರ್ಟಿಕಲ್ ಆಗಿದ್ದು, ಶ್ರೇಷ್ಠ ,ಕನಿಷ್ಠವೆಂಬ ವ್ಯವಸ್ಥೆಯಿತ್ತು. ನಿರ್ಜಿವವಾದ ವ್ಯವಸ್ಥೆಗೆ ಜೀವ ಬರಬೇಕಾದರೆ ಆರ್ಥಿಕ , ಸಾಮಾಜಿಕ ಸಮಾನತೆ ಬರಬೇಕು. ಬಸವಾದಿ ಶರಣರು ಗಾಂಧಿ ಅಂಬೇಡ್ಕರ್ ರು ಸಮಾಜದಲ್ಲಿ ಬದಲಾವಣೆ ತರಲು ಶ್ರಮಿಸಿದರು.

ಕಾಯಕ ಮತ್ತು ದಾಸೋಹ ತತ್ವವನ್ನು ಬಸವಾದಿ ಶರಣರು ಪ್ರತಿಪಾದಿಸಿದರು. ಉತ್ಪಾದಿಸಿದ ಸಂಪತ್ತನ್ನು ಎಲ್ಲರೂ ಸಮನಾಗಿ ಹಂಚಿಕೊಳ್ಳಬೇಕೆಂದು ಅನುಭವ ಮಂಟಪದಲ್ಲಿ ತಿಳಿಸಿದ್ದರು. ಬಸವಾದಿ ಶರಣರ ಕಾಲದಲ್ಲಿ ಮಹಿಳೆಯರಿಗೂ, ದುರ್ಬಲವರ್ಗದವರಿಗೂ ಶಿಕ್ಷಣ ಸೇರಿದಂತೆ ಎಲ್ಲ ರಂಗದಲ್ಲಿಯೂ ಸಮಾನ ಅವಕಾಶಗಳನ್ನು ನೀಡಲಾಗಿತ್ತು.

ತಳಸಮುದಾಯಗಳು ಮುಖ್ಯವಾಹಿನಿಗೆ ಬರಬೇಕು.850 ವರ್ಷಗಳ ಹಿಂದೆ ಸಮಾನತೆಯ ತತ್ವ ಇಂದಿಗೂ ಸಮರ್ಥವಾಗಿ ಪಾಲನೆಯಾಗುತ್ತಿಲ್ಲ. ಬಸವಾದಿ ಶರಣರು ಕರ್ಮಸಿದ್ಧಾಂತವನ್ನು ಅಲ್ಲಗೆಳೆದಿದ್ದರು.

ಆದ್ದರಿಂದ ವೈಚಾರಿಕ ಹಾಗೂ ವೈಜ್ಞಾನಿಕ ಶಿಕ್ಷಣವನ್ನು ಎಲ್ಲರೂ ಪಡೆಯಬೇಕು. ಇತಿಹಾಸ ತಿಳಿದಿದ್ದರೆ ಮಾತ್ರ ಭವಿಷ್ಯ ಬರೆಯಲು ಸಾಧ್ಯ ಎಂದು ಡಾ.ಅಂಬೇಡ್ಕರ್ ತಿಳಿಸಿದ್ದರು ಎಂದರು.

andolana

Recent Posts

ಕಾರು ಅಪಘಾತ : ಕಾರಿನಲ್ಲಿ‌10ಕ್ಕೂ ಹೆಚ್ಚು ಕರುಗಳು ಪತ್ತೆ

ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…

5 hours ago

ಮದ್ದೂರು |‌ ದೇವಾಲಯಗಳಲ್ಲಿ ಸರಣಿ ಕಳ್ಳತನ

ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…

8 hours ago

ಎಚ್ಚೆತ್ತ ಪೊಲೀಸರು : ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ,ಪರಿಶೀಲನೆ

ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…

9 hours ago

ರಾಜೀವ್‌ಗೌಡಗೆ ಜಾಮೀನು : ಪಟಾಕಿ ಸಿಡಿಸಿ ಸಂಭ್ರಮಿಸದಂತೆ ಕೋರ್ಟ್‌ ತಾಕೀತು

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…

10 hours ago

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ

ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…

10 hours ago

ಸಿಎಂ,ಡಿಸಿಎಂ ವಿರುದ್ಧ ಮಾನಹಾನಿಕ ಪೋಸ್ಟ್‌ : ಬಿಜೆಪಿ ವಿರುದ್ಧ ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…

10 hours ago