ಮೈಸೂರು

ಅಸಮಾನತೆ ಇರುವವರೆಗೆ ಸ್ವಾತಂತ್ರ್ಯ ಯಶಸ್ವಿಯಾಗುವುದಿಲ್ಲ : ಸಿದ್ದರಾಮಯ್ಯ

ಮೈಸೂರು : ಎಲ್ಲಿಯೆಯವರೆಗೆ ಅಸಮಾನತೆ ಇರುತ್ತದೆಯೋ ಅಲ್ಲಿಯವರೆಗೆ ಸ್ವಾತಂತ್ರ್ಯ ಯಶಸ್ವಿಯಾಗಿದೆ ಎಂದು ಹೇಳಲಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು.

ಪ್ರಗತಿಪರ ಸಂಘಟನೆಗಳ ಒಕ್ಕೂಟ ಇವರ ವತಿಯಿಂದ ಮೈಸೂರಿನ ಕಲಾ ಮಂದಿರದಲ್ಲಿ ಆಯೋಜಿಸಲಾಗಿದ್ದ ಶ್ರೀ ಪ. ಮಲ್ಲೇಶ್ – 90 ಭಾರತ ಜನತಂತ್ರದ ಸಮಕಾಲಿನ ತಲ್ಲಣಗಳು ರಾಷ್ಟ್ರೀಯ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು,  ಮನು ಸ್ಮೃತಿಯಿಂದಾಗಿ ಶೂದ್ರರು ಅಕ್ಷರ ಸಂಸ್ಕೃತಿಯಿಂದ ವಂಚಿತರಾದರು. ಚಾತುರ್ವಣ ವ್ಯವಸ್ಥೆಯಲ್ಲಿ ಮೊದಲ ಮೂರು ವರ್ಗಗಳಿಗೆ ವಿದ್ಯೆಗೆ ಅವಕಾಶವಿತ್ತು ಎಂದರು.

ಕಾಯಕ ಜೀವಿಗಳಿಗೆ ವಿದ್ಯೆ, ಆಸ್ತಿ ಇರುವಂತಿರಲಿಲ್ಲ. ಜಾತಿ ವ್ಯವಸ್ಥೆಯ ಕಾರಣದಿಂದಲೇ ಅಸಮಾನತೆ ಸೃಷ್ಟಿ ಯಾಗಿ ಕೆಲವರ ಕೈಯಲ್ಲಿ ಆಸ್ತಿ ಶೇಖರಣೆಯಾಗಿ ವಿದ್ಯೆಯಿಂದ ವಂಚಿತರಾದರು. ಎಲ್ಲಿಯೆಯವರೆಗೆ ಅಸಮಾನತೆ ಇರುತ್ತದೆಯೋ ಅಲ್ಲಿಯವರೆಗೆ ಸ್ವಾತಂತ್ರ್ಯ ಯಶಸ್ವಿಯಾಗಿದೆ ಎಂದು ಹೇಳಲಾಗುವುದಿಲ್ಲ ಎಂದರು.

ಚಲನೆಯಿಲ್ಲದ ಜಾತಿವ್ಯವಸ್ಥೆ ತೊಲಗಲು ಸಮಾನತೆ ಬರಬೇಕು : ಚಲನೆಯಿಲ್ಲದ ಜಾತಿವ್ಯವಸ್ಥೆ ನಮ್ಮ ಸಮಾಜದಲ್ಲಿದೆ. ಜಾತಿವ್ಯವಸ್ಥೆಯನ್ನು ವರ್ಟಿಕಲ್ ಆಗಿದ್ದು, ಶ್ರೇಷ್ಠ ,ಕನಿಷ್ಠವೆಂಬ ವ್ಯವಸ್ಥೆಯಿತ್ತು. ನಿರ್ಜಿವವಾದ ವ್ಯವಸ್ಥೆಗೆ ಜೀವ ಬರಬೇಕಾದರೆ ಆರ್ಥಿಕ , ಸಾಮಾಜಿಕ ಸಮಾನತೆ ಬರಬೇಕು. ಬಸವಾದಿ ಶರಣರು ಗಾಂಧಿ ಅಂಬೇಡ್ಕರ್ ರು ಸಮಾಜದಲ್ಲಿ ಬದಲಾವಣೆ ತರಲು ಶ್ರಮಿಸಿದರು.

ಕಾಯಕ ಮತ್ತು ದಾಸೋಹ ತತ್ವವನ್ನು ಬಸವಾದಿ ಶರಣರು ಪ್ರತಿಪಾದಿಸಿದರು. ಉತ್ಪಾದಿಸಿದ ಸಂಪತ್ತನ್ನು ಎಲ್ಲರೂ ಸಮನಾಗಿ ಹಂಚಿಕೊಳ್ಳಬೇಕೆಂದು ಅನುಭವ ಮಂಟಪದಲ್ಲಿ ತಿಳಿಸಿದ್ದರು. ಬಸವಾದಿ ಶರಣರ ಕಾಲದಲ್ಲಿ ಮಹಿಳೆಯರಿಗೂ, ದುರ್ಬಲವರ್ಗದವರಿಗೂ ಶಿಕ್ಷಣ ಸೇರಿದಂತೆ ಎಲ್ಲ ರಂಗದಲ್ಲಿಯೂ ಸಮಾನ ಅವಕಾಶಗಳನ್ನು ನೀಡಲಾಗಿತ್ತು.

ತಳಸಮುದಾಯಗಳು ಮುಖ್ಯವಾಹಿನಿಗೆ ಬರಬೇಕು.850 ವರ್ಷಗಳ ಹಿಂದೆ ಸಮಾನತೆಯ ತತ್ವ ಇಂದಿಗೂ ಸಮರ್ಥವಾಗಿ ಪಾಲನೆಯಾಗುತ್ತಿಲ್ಲ. ಬಸವಾದಿ ಶರಣರು ಕರ್ಮಸಿದ್ಧಾಂತವನ್ನು ಅಲ್ಲಗೆಳೆದಿದ್ದರು.

ಆದ್ದರಿಂದ ವೈಚಾರಿಕ ಹಾಗೂ ವೈಜ್ಞಾನಿಕ ಶಿಕ್ಷಣವನ್ನು ಎಲ್ಲರೂ ಪಡೆಯಬೇಕು. ಇತಿಹಾಸ ತಿಳಿದಿದ್ದರೆ ಮಾತ್ರ ಭವಿಷ್ಯ ಬರೆಯಲು ಸಾಧ್ಯ ಎಂದು ಡಾ.ಅಂಬೇಡ್ಕರ್ ತಿಳಿಸಿದ್ದರು ಎಂದರು.

andolana

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

9 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

9 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

9 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

10 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

10 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

11 hours ago