ಮೈಸೂರು

ಅಸಮಾನತೆ ಇರುವವರೆಗೆ ಸ್ವಾತಂತ್ರ್ಯ ಯಶಸ್ವಿಯಾಗುವುದಿಲ್ಲ : ಸಿದ್ದರಾಮಯ್ಯ

ಮೈಸೂರು : ಎಲ್ಲಿಯೆಯವರೆಗೆ ಅಸಮಾನತೆ ಇರುತ್ತದೆಯೋ ಅಲ್ಲಿಯವರೆಗೆ ಸ್ವಾತಂತ್ರ್ಯ ಯಶಸ್ವಿಯಾಗಿದೆ ಎಂದು ಹೇಳಲಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು.

ಪ್ರಗತಿಪರ ಸಂಘಟನೆಗಳ ಒಕ್ಕೂಟ ಇವರ ವತಿಯಿಂದ ಮೈಸೂರಿನ ಕಲಾ ಮಂದಿರದಲ್ಲಿ ಆಯೋಜಿಸಲಾಗಿದ್ದ ಶ್ರೀ ಪ. ಮಲ್ಲೇಶ್ – 90 ಭಾರತ ಜನತಂತ್ರದ ಸಮಕಾಲಿನ ತಲ್ಲಣಗಳು ರಾಷ್ಟ್ರೀಯ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು,  ಮನು ಸ್ಮೃತಿಯಿಂದಾಗಿ ಶೂದ್ರರು ಅಕ್ಷರ ಸಂಸ್ಕೃತಿಯಿಂದ ವಂಚಿತರಾದರು. ಚಾತುರ್ವಣ ವ್ಯವಸ್ಥೆಯಲ್ಲಿ ಮೊದಲ ಮೂರು ವರ್ಗಗಳಿಗೆ ವಿದ್ಯೆಗೆ ಅವಕಾಶವಿತ್ತು ಎಂದರು.

ಕಾಯಕ ಜೀವಿಗಳಿಗೆ ವಿದ್ಯೆ, ಆಸ್ತಿ ಇರುವಂತಿರಲಿಲ್ಲ. ಜಾತಿ ವ್ಯವಸ್ಥೆಯ ಕಾರಣದಿಂದಲೇ ಅಸಮಾನತೆ ಸೃಷ್ಟಿ ಯಾಗಿ ಕೆಲವರ ಕೈಯಲ್ಲಿ ಆಸ್ತಿ ಶೇಖರಣೆಯಾಗಿ ವಿದ್ಯೆಯಿಂದ ವಂಚಿತರಾದರು. ಎಲ್ಲಿಯೆಯವರೆಗೆ ಅಸಮಾನತೆ ಇರುತ್ತದೆಯೋ ಅಲ್ಲಿಯವರೆಗೆ ಸ್ವಾತಂತ್ರ್ಯ ಯಶಸ್ವಿಯಾಗಿದೆ ಎಂದು ಹೇಳಲಾಗುವುದಿಲ್ಲ ಎಂದರು.

ಚಲನೆಯಿಲ್ಲದ ಜಾತಿವ್ಯವಸ್ಥೆ ತೊಲಗಲು ಸಮಾನತೆ ಬರಬೇಕು : ಚಲನೆಯಿಲ್ಲದ ಜಾತಿವ್ಯವಸ್ಥೆ ನಮ್ಮ ಸಮಾಜದಲ್ಲಿದೆ. ಜಾತಿವ್ಯವಸ್ಥೆಯನ್ನು ವರ್ಟಿಕಲ್ ಆಗಿದ್ದು, ಶ್ರೇಷ್ಠ ,ಕನಿಷ್ಠವೆಂಬ ವ್ಯವಸ್ಥೆಯಿತ್ತು. ನಿರ್ಜಿವವಾದ ವ್ಯವಸ್ಥೆಗೆ ಜೀವ ಬರಬೇಕಾದರೆ ಆರ್ಥಿಕ , ಸಾಮಾಜಿಕ ಸಮಾನತೆ ಬರಬೇಕು. ಬಸವಾದಿ ಶರಣರು ಗಾಂಧಿ ಅಂಬೇಡ್ಕರ್ ರು ಸಮಾಜದಲ್ಲಿ ಬದಲಾವಣೆ ತರಲು ಶ್ರಮಿಸಿದರು.

ಕಾಯಕ ಮತ್ತು ದಾಸೋಹ ತತ್ವವನ್ನು ಬಸವಾದಿ ಶರಣರು ಪ್ರತಿಪಾದಿಸಿದರು. ಉತ್ಪಾದಿಸಿದ ಸಂಪತ್ತನ್ನು ಎಲ್ಲರೂ ಸಮನಾಗಿ ಹಂಚಿಕೊಳ್ಳಬೇಕೆಂದು ಅನುಭವ ಮಂಟಪದಲ್ಲಿ ತಿಳಿಸಿದ್ದರು. ಬಸವಾದಿ ಶರಣರ ಕಾಲದಲ್ಲಿ ಮಹಿಳೆಯರಿಗೂ, ದುರ್ಬಲವರ್ಗದವರಿಗೂ ಶಿಕ್ಷಣ ಸೇರಿದಂತೆ ಎಲ್ಲ ರಂಗದಲ್ಲಿಯೂ ಸಮಾನ ಅವಕಾಶಗಳನ್ನು ನೀಡಲಾಗಿತ್ತು.

ತಳಸಮುದಾಯಗಳು ಮುಖ್ಯವಾಹಿನಿಗೆ ಬರಬೇಕು.850 ವರ್ಷಗಳ ಹಿಂದೆ ಸಮಾನತೆಯ ತತ್ವ ಇಂದಿಗೂ ಸಮರ್ಥವಾಗಿ ಪಾಲನೆಯಾಗುತ್ತಿಲ್ಲ. ಬಸವಾದಿ ಶರಣರು ಕರ್ಮಸಿದ್ಧಾಂತವನ್ನು ಅಲ್ಲಗೆಳೆದಿದ್ದರು.

ಆದ್ದರಿಂದ ವೈಚಾರಿಕ ಹಾಗೂ ವೈಜ್ಞಾನಿಕ ಶಿಕ್ಷಣವನ್ನು ಎಲ್ಲರೂ ಪಡೆಯಬೇಕು. ಇತಿಹಾಸ ತಿಳಿದಿದ್ದರೆ ಮಾತ್ರ ಭವಿಷ್ಯ ಬರೆಯಲು ಸಾಧ್ಯ ಎಂದು ಡಾ.ಅಂಬೇಡ್ಕರ್ ತಿಳಿಸಿದ್ದರು ಎಂದರು.

andolana

Recent Posts

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

9 mins ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

14 mins ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

20 mins ago

ನಾಲ್ಕು ಶೂಟೌಟ್ ಪ್ರಕರಣ; ಏಳು ಸಾವು

ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…

26 mins ago

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

9 hours ago