Friend murdered for receiving girlfriend's call during birthday celebration
ಮೈಸೂರು: ಗೆಳತಿಯ ಫೋನ್ ರಿಸೀವ್ ಮಾಡಿದ ಗೆಳೆಯನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಂಜನಗೂಡು ತಾಲ್ಲೂಕಿನ ಕೆಂಪಿಸಿದ್ದನಹುಂಡಿ ಗ್ರಾಮದಲ್ಲಿ ನಡೆದಿದೆ.
ಕೇವಲ ಗೆಳತಿಯ ಫೋನ್ ರಿಸೀವ್ ಮಾಡಿದ್ದಕ್ಕೆ ಬೈಕ್ನಲ್ಲಿ ಗುದ್ದಿ ಕೊಲೆ ಮಾಡಲಾಗಿದೆ. ಘಟನೆಗೆ ಸಂಭಂಧಿಸಿದಂತೆ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 5 ಸ್ನೇಹಿತರ ವಿರುದ್ಧ ಪ್ರಕರಣ ದಾಖಲಾಗಿದ್ದು, ಇಬ್ಬರನ್ನ ವಶಕ್ಕೆ ಪಡೆಯಲಾಗಿದೆ.
ಕಿರಣ್ ಎಂಬುವವನೇ ಕೊಲೆಯಾದ ದುರ್ದೈವಿಯಾಗಿದ್ದು, ಕೆಂಪಿಸಿದ್ದನಹುಂಡಿ ಗ್ರಾಮದ ವಸಂತ್ ಕುಮಾರ್, ಮಧುಸೂದನ್, ಚಂದ್ರು, ರವಿಚಂದ್ರ, ಸಿದ್ದರಾಜು ಎಂಬುವವರ ವಿರುದ್ದ ಪ್ರಕರಣ ದಾಖಲಾಗಿದೆ.
ಜುಲೈ.15ರಂದು ಸ್ನೇಹಿತ ರವಿಚಂದ್ರನ್ ಹುಟ್ಟುಹಬ್ಬ ಇತ್ತು. ಕಿರಣ್ ಬರ್ತ್ ಡೇ ಪಾರ್ಟಿ ಆಚರಿಸಲು 5 ಮಂದಿ ಸ್ನೇಹಿತರ ಜೊತೆ ಹೊರಟ. ಹೆಜ್ಜಿಗೆ ಸೇತುವೆಯ ತೋಪಿನ ಬಳಿ 6 ಮಂದಿ ಸೇರಿ ಎಣ್ಣೆ ಪಾರ್ಟಿ ಶುರುಮಾಡಿದ್ರು. ವಸಂತ್ ಮೂತ್ರ ವಿಸರ್ಜನೆ ಮಾಡಲು ಸ್ವಲ್ಪ ದೂರ ಹೋದ. ಈ ವೇಳೆ ವಸಂತ್ ಫೋನ್ ರಿಂಗ್ ಆಗಿ ಕಿರಣ್ ರಿಸೀವ್ ಮಾಡಿದ. ರಶ್ಮಿ ಎಂಬಾಕೆಯಿಂದ ಫೋನ್ ಬಂದಿತ್ತು. ಯಾಕೆ ವಸಂತ್ ಮೊಬೈಲ್ ಗೆ ಫೋನ್ ಮಾಡಿದ್ದೀಯ ಎಂದು ಕಿರಣ್ ಪ್ರಶ್ನಿಸಿದ. ಕೆಲ ಸಮಯದ ನಂತರ ಮತ್ತೆ ರಶ್ಮಿಯಿಂದ ಬಂದ ಫೋನ್ ವಸಂತ್ ರಿಸೀವ್ ಮಾಡಿದಾಗ ಕಿರಣ್ ರಿಸೀವ್ ಮಾಡಿದ್ದ ವಿಚಾರ ಗೊತ್ತಾಯಿತು. ಇಷ್ಟಕ್ಕೇ ಇಬ್ಬರ ನಡುವೆ ಗಲಾಟೆ ಶುರುವಾಯ್ತು. ವಸಂತ್ ಜೊತೆ ಸೇರಿದ ನಾಲ್ವರು ಸ್ನೇಹಿತರು ಕಿರಣ್ ಮೇಲೆ ಹಲ್ಲೆ ನಡೆಸಿದ್ರು. ಸ್ಕೂಟರ್ನಿಂದ ಗುದ್ದಿ ಕೆಳಗೆ ಬೀಳಿಸಿ ಹಲ್ಲೆ ನಡೆಸಿ ಪರಾರಿಯಾದರು. ಮಾಹಿತಿ ಅರಿತ ಸಹೋದರ ಅಣ್ಣನನ್ನ ಆಸ್ಪತ್ರೆಗೆ ದಾಖಲಿಸಿದ್ದ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕಿರಣ್ ಮೃತಪಟ್ಟಿದ್ದಾನೆ.
ಯುವತಿಯ ಫೋನ್ ರಿಸೀವ್ ಮಾಡಿದ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತ ಎನ್ನುವುದದನ್ನು ಮರೆತು ಬರ್ತ್ ಡೇ ಪಾರ್ಟಿ ದಿನವೇ ಗೆಳೆಯನನ್ನ ಕೊಂದಿದ್ದಾರೆ. ಘಟನೆ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಬೆಳಗಾವಿ : ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಜೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ನಿಯಮದಂತೆ ಕ್ರಮ…
ಚಿಕ್ಕಮಗಳೂರು : ಅತ್ಯಂತ ಪರಿಸರ ಸೂಕ್ಷ ಸ್ಥಳಗಳನ್ನು ಹೊಂದಿರುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪರಿಸರದ ಮೇಲೆ ಆಗುವ ದುಷ್ಪರಿಣಾಮಗಳನ್ನು ಗಣನೆಗೆ ತೆಗೆದುಕೊಳ್ಳದೆ…
ಹೊಸದಿಲ್ಲಿ : ಲೋಕಸಭೆಯಲ್ಲಿ ವಂದೇ ಮಾತರಂ ಗೀತೆ ಕುರಿತ ಚರ್ಚೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣವು ಇತಿಹಾಸವನ್ನು…
ಬೆಳಗಾವಿ : ರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿ ಒಂದೇ ಒಂದು ಮಗುವಿದ್ದರೂ ಕೂಡ ಯಾವುದೇ ಕಾರಣಕ್ಕೂ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚುವುದಿಲ್ಲ…
ಬೆಳಗಾವಿ : ಡಿನ್ನರ್ ಬ್ರೇಕ್ಫಾಸ್ಟ್ ಬಳಿಕವೂ ತಂದೆಯ ಪರ ಪುತ್ರ ಯತೀಂದ್ರ ಬ್ಯಾಟಿಂಗ್ ಮಾಡುವುದನ್ನು ಮುಂದುವರಿಸಿದ್ದಾರೆ. ಸಿದ್ದರಾಮಯ್ಯ ಪೂರ್ಣ ಅವಧಿಯವರೆಗೆ…
ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಪ್ತ, ಕಾಂಗ್ರೆಸ್ ಮುಖಂಡ ಇನಾಯತ್ ಅಲಿಗೆ ದೆಹಲಿ…