Friend murdered for receiving girlfriend's call during birthday celebration
ಮೈಸೂರು: ಗೆಳತಿಯ ಫೋನ್ ರಿಸೀವ್ ಮಾಡಿದ ಗೆಳೆಯನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಂಜನಗೂಡು ತಾಲ್ಲೂಕಿನ ಕೆಂಪಿಸಿದ್ದನಹುಂಡಿ ಗ್ರಾಮದಲ್ಲಿ ನಡೆದಿದೆ.
ಕೇವಲ ಗೆಳತಿಯ ಫೋನ್ ರಿಸೀವ್ ಮಾಡಿದ್ದಕ್ಕೆ ಬೈಕ್ನಲ್ಲಿ ಗುದ್ದಿ ಕೊಲೆ ಮಾಡಲಾಗಿದೆ. ಘಟನೆಗೆ ಸಂಭಂಧಿಸಿದಂತೆ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 5 ಸ್ನೇಹಿತರ ವಿರುದ್ಧ ಪ್ರಕರಣ ದಾಖಲಾಗಿದ್ದು, ಇಬ್ಬರನ್ನ ವಶಕ್ಕೆ ಪಡೆಯಲಾಗಿದೆ.
ಕಿರಣ್ ಎಂಬುವವನೇ ಕೊಲೆಯಾದ ದುರ್ದೈವಿಯಾಗಿದ್ದು, ಕೆಂಪಿಸಿದ್ದನಹುಂಡಿ ಗ್ರಾಮದ ವಸಂತ್ ಕುಮಾರ್, ಮಧುಸೂದನ್, ಚಂದ್ರು, ರವಿಚಂದ್ರ, ಸಿದ್ದರಾಜು ಎಂಬುವವರ ವಿರುದ್ದ ಪ್ರಕರಣ ದಾಖಲಾಗಿದೆ.
ಜುಲೈ.15ರಂದು ಸ್ನೇಹಿತ ರವಿಚಂದ್ರನ್ ಹುಟ್ಟುಹಬ್ಬ ಇತ್ತು. ಕಿರಣ್ ಬರ್ತ್ ಡೇ ಪಾರ್ಟಿ ಆಚರಿಸಲು 5 ಮಂದಿ ಸ್ನೇಹಿತರ ಜೊತೆ ಹೊರಟ. ಹೆಜ್ಜಿಗೆ ಸೇತುವೆಯ ತೋಪಿನ ಬಳಿ 6 ಮಂದಿ ಸೇರಿ ಎಣ್ಣೆ ಪಾರ್ಟಿ ಶುರುಮಾಡಿದ್ರು. ವಸಂತ್ ಮೂತ್ರ ವಿಸರ್ಜನೆ ಮಾಡಲು ಸ್ವಲ್ಪ ದೂರ ಹೋದ. ಈ ವೇಳೆ ವಸಂತ್ ಫೋನ್ ರಿಂಗ್ ಆಗಿ ಕಿರಣ್ ರಿಸೀವ್ ಮಾಡಿದ. ರಶ್ಮಿ ಎಂಬಾಕೆಯಿಂದ ಫೋನ್ ಬಂದಿತ್ತು. ಯಾಕೆ ವಸಂತ್ ಮೊಬೈಲ್ ಗೆ ಫೋನ್ ಮಾಡಿದ್ದೀಯ ಎಂದು ಕಿರಣ್ ಪ್ರಶ್ನಿಸಿದ. ಕೆಲ ಸಮಯದ ನಂತರ ಮತ್ತೆ ರಶ್ಮಿಯಿಂದ ಬಂದ ಫೋನ್ ವಸಂತ್ ರಿಸೀವ್ ಮಾಡಿದಾಗ ಕಿರಣ್ ರಿಸೀವ್ ಮಾಡಿದ್ದ ವಿಚಾರ ಗೊತ್ತಾಯಿತು. ಇಷ್ಟಕ್ಕೇ ಇಬ್ಬರ ನಡುವೆ ಗಲಾಟೆ ಶುರುವಾಯ್ತು. ವಸಂತ್ ಜೊತೆ ಸೇರಿದ ನಾಲ್ವರು ಸ್ನೇಹಿತರು ಕಿರಣ್ ಮೇಲೆ ಹಲ್ಲೆ ನಡೆಸಿದ್ರು. ಸ್ಕೂಟರ್ನಿಂದ ಗುದ್ದಿ ಕೆಳಗೆ ಬೀಳಿಸಿ ಹಲ್ಲೆ ನಡೆಸಿ ಪರಾರಿಯಾದರು. ಮಾಹಿತಿ ಅರಿತ ಸಹೋದರ ಅಣ್ಣನನ್ನ ಆಸ್ಪತ್ರೆಗೆ ದಾಖಲಿಸಿದ್ದ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕಿರಣ್ ಮೃತಪಟ್ಟಿದ್ದಾನೆ.
ಯುವತಿಯ ಫೋನ್ ರಿಸೀವ್ ಮಾಡಿದ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತ ಎನ್ನುವುದದನ್ನು ಮರೆತು ಬರ್ತ್ ಡೇ ಪಾರ್ಟಿ ದಿನವೇ ಗೆಳೆಯನನ್ನ ಕೊಂದಿದ್ದಾರೆ. ಘಟನೆ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…