ಮೈಸೂರು : ರಾಜ್ಯ ವಿಧಾನಸಭೆಗೆ ನಡೆದ ಚುನಾವಣೆಗೆ ನಿನ್ನೆ ಸಂಜೆ ಆರು ಗಂಟೆಗೆ ಮತದಾನ ಮುಗಿದಿದ್ದು ಜಿಲ್ಲೆಯಲ್ಲಿರುವ ಒಟ್ಟು 143 ಅಭ್ಯರ್ಥಿಗಳ ಭವಿಷ್ಯ ಇವಿಎಂನಲ್ಲಿ ಭದ್ರವಾಗಿದೆ.
ಮೈಸೂರು ಜಿಲ್ಲೆಯ ಹನ್ನೊಂದು ವಿಧಾನಸಭಾ ಕ್ಷೇತ್ರದ ಮತಗಟ್ಟೆಗಳಲ್ಲಿ ನಡೆದ ಚುನಾಚವಣೆಯ ಮತ ಎಣಿಕೆಯು ಪಡುವಾರಹಳ್ಳಿಯ ಮಹಾರಾಣಿ ಕಾಲೇಜಿನಲ್ಲಿ ಮೇ.13 ರಂದು ಬೆಳಗ್ಗೆ 8 ಗಂಟೆಯಿಂದ ನಡೆಯಲಿದ್ದು, ಈಗಾಗಲೇ ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದೆ.
ಇವಿಎಂ ಯಂತ್ರಗಳಿರುವ ಕೊಠಡಿಯನ್ನು ಸಂಪೂರ್ಣವಾಗಿ ಅಧಿಕಾರಿಗಳು ಸೀಲ್ ಮಾಡಿದ್ದಾರೆ. ಕಿಟಕಿ, ಬಾಗಿಲುಗಳನ್ನೂ ಮುಚ್ಚಿದ್ದಾರೆ. ಕಾಲೇಜಿನ ಸುತ್ತ ಪೊಲೀಸರು ಮತ್ತು ಅರೆಸೇನಾಪಡೆ ಹದ್ದಿನ ಕಣ್ಣಿರಿಸಿದ್ದಾರೆ.
ಶನಿವಾರ ಬೆಳಿಗ್ಗೆ ಅಧಿಕಾರಿಗಳು ಅಭ್ಯರ್ಥಿಗಳ ಸಮ್ಮುಖದಲ್ಲಿ ಬಾಗಿಲಿಗೆ ಹಾಕಿದ ಸೀಲ್ ತೆರೆಯಲಿದ್ದಾರೆ. ಮೇ.13ರಂದು ಬೆಳಿಗ್ಗೆ ಆರು ಗಂಟೆಯಿಂದ ಮೇ.14ರ ಬೆಳಿಗ್ಗೆ ಆರು ಗಂಟೆಯವರೆಗೆ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಹೊರಡಿಸಿ ಪೊಲೀಸ್ ಆಯುಕ್ತ ಬಿ.ರಮೇಶ್ ಆದೇಶಿಸಿದ್ದಾರೆ.
ಈ ವೇಳೆ ಚುನಾಯಿತ ಅಭ್ಯರ್ಥಿಯ ವಿಜಯೋತ್ಸವ ಮೆರವಣಿಗೆ, ವಾಸದ ಮನೆ ಹಾಗೂ ಸಾರ್ವಜನಿಕ ಜಾಗದಲ್ಲಿ ಪಟಾಕಿ ಸಿಡಿಸುವುದು, ಸ್ಪೋಟಕ ಹಾಗೂ ಮಾರಕ ವಸ್ತುಗಳ ಸಾಗಾಟ, ಮೆರವಣಿಗೆ ಹಾಗೂ ಪ್ರಚೋದನಕಾರಿ ಭಾಷಣ ಮಾಡುವುದು, ಧ್ವನಿವರ್ಧಕ, ಡಿ.ಜೆ, ಬೈಕ್ ಜಾಥಾ ನಡೆಸುವುದನ್ನು ನಿರ್ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…