ಮೈಸೂರು

ದ್ವಿತೀಯ ಪಿಯುಸಿ ಪರೀಕ್ಷೆ ನಾಳೆ ಆರಂಭ| ಎಲ್ಲಾ ಕೇಂದ್ರಗಳಲ್ಲೂ ಸುಸೂತ್ರವಾಗಿ ನಡೆಸಲು ಅಧಿಕಾರಿಗಳಿಗೆ ಸೂಚನೆ: ಜಿ.ಲಕ್ಷ್ಮೀಕಾಂತ್‌ ರೆಡ್ಡಿ

ಮೈಸೂರು: ರಾಜ್ಯಾದ್ಯಂತ ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿತ್ತಿದ್ದು, ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿಯೂ ಅಧಿಕಾರಿಗಳು ಎಲ್ಲಾ ರೀತಿಯ ಅಂತಿಮ ಹಂತದ ಸಿದ್ಧತೆ ಮಾಡಿಕೊಂಡು ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಬೇಕು ಎಂದು ಅಧಿಕಾರಿಗಳಿಗೆ ಜಿ.ಲಕ್ಷ್ಮೀಕಾಂತ್‌ ರೆಡ್ಡಿ ಸೂಚನೆ ನೀಡಿದ್ದಾರೆ.

ಜಿಲ್ಲಾ ಪಂಚಾಯಿತಿಯ ಅಬ್ದುಲ್‌ ನಜೀರ್‌ ಸಭಾಂಗಣದಲ್ಲಿ ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಅಂಗವಾಗಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಮೈಸೂರು ಜಿಲ್ಲೆಯಲ್ಲಿ ಮಾರ್ಚ್.1 ರಿಂದ ಮಾರ್ಚ್‌.20 ರವರೆಗೂ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಒಟ್ಟು 50 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಅವುಗಳಲ್ಲಿ ಮೈಸೂರು ನಗರದಲ್ಲಿ 27 ಪರೀಕ್ಷಾ ಕೇಂದ್ರಗಳು ಮತ್ತು ಗ್ರಾಮಾಂತರ ವ್ಯಾಪ್ತಿಯ 23 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತದೆ ಎಂದು ಮಾಹಿತಿ ನೀಡಿದರು.

ಈ ಪರೀಕ್ಷೆಗೆ ಸಂಬಂಧಿಸಿದಂತೆ 10 ರೂಟ್‌ಗಳನ್ನು ಮಾಡಲಾಗಿದ್ದು, ಆ ರೂಟ್‌ಗೀಗೆ ರೂಟ್‌ ಆಫೀಸರ್‌ಗಳನ್ನು ನೇಮಕ ಮಾಡಲಾಗಿದೆ. ಅಲ್ಲದೇ ಜಿಲ್ಲಾ ಖಜಾನೆಯಿಂದ ಪ್ರಶ್ನೆ ಪತ್ರಿಕೆಗಳನ್ನು ರವಾನೆ ಮಾಡಲು ತಹಶೀಲ್ದಾರ್, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಪ್ರಾಂಶುಪಾಲರನ್ನು ಒಳಗೊಂಡ ಮಾರ್ಗಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಪ್ರಶ್ನೆ ಪತ್ರಿಕೆಗಳನ್ನು ಜಿಲ್ಲಾ ಖಜಾನೆಯಿಂದ ತೆಗೆದುಕೊಂಡು ಹೋಗುವ ವಾಹನಗಳಿಗೆ ಜಿಪಿಎಸ್‌ ಅಳವಡಿಸಲಾಗಿದೆ ಎಂದು ಹೇಳಿದರು.

ಇನ್ನು ದ್ವಿತೀಯ ಪಿಯುಸಿ ಪರೀಕ್ಷೆಗೆ ನಿಯೋಜಿಸಿರುವ ಅಧಿಕಾರಿಗಳು ಶಿಕ್ಷಕರು ಹಾಗೂ ಸಿಬ್ಬಂದಿಗಳು ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಕ್ರಮವಹಿಸಬೇಕು. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಟಿವಿಗಳನ್ನು ಅಳವಡಿಸಲಾಗಿದೆ. ಯಾವುದೇ ಮೋಸ ಮತ್ತು ಮಾಲ್‌ ಪ್ರಾಕ್ಟೀಸ್‌ಗೆ ಅವಕಾಶ ಕೊಡಬಾರದು. ಜೊತೆಗೆ ನಾಳೆ ನಡೆಯುವ ಪರೀಕ್ಷೆಯಲ್ಲಿ ವೆಬ್‌ ಕ್ಯಾಸ್ಟಿಂಗ್‌ ಅಳವಡಿಕೆ ಮಾಡಲಾಗಿರುವುದರಿಂದ ಪರೀಕ್ಷಾ ಕೊಠಡಿಯಲ್ಲಿ ಮೊಬೈಲ್ ಬಳಕೆ ಮಾಡುವಂತಿಲ್ಲ.

ಅರ್ಚನ ಎಸ್‌ ಎಸ್

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

11 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

12 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

12 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

12 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

13 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

13 hours ago