ಮೈಸೂರು

ಮುಡುಕುತೊರೆ ಜಾತ್ರಾ ಮಹೋತ್ಸವ: ಸಕಲ ಸಿದ್ಧತೆಗಾಗಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್‌ ರೆಡ್ಡಿ ಸೂಚನೆ

ಮೈಸೂರು: ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನಲ್ಲಿ ಐತಿಹಾಸಿಕ ಜಾತ್ರಾ ಮಹೋತ್ಸವ ಜನವರಿ.31 ರಿಂದ ಫೆಬ್ರವರಿ 16ರವರೆಗೆ ನಡೆಯಲಿದ್ದು, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಕ್ರಮವಹಿಸಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್‌ ರೆಡ್ಡಿ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು(ಜನವರಿ.29) ಮುಡುಕುತೊರೆ ಜಾತ್ರಾ ಮಹೋತ್ಸವದಲ್ಲಿ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಜನವರಿ 31 ರಿಂದ ಫೆಬ್ರವರಿ 16ರವರೆಗೆ ಮುಡುಕುತೊರೆ ಜಾತ್ರಾ ಮಹೋತ್ಸವ ನಡೆಯಲಿದೆ. ಫೆಬ್ರವರಿ 7 ರಂದು ರಥೋತ್ಸವ ಮತ್ತು ಫೆಬ್ರವರಿ 10 ರಂದು ತೆಪ್ಪೋತ್ಸವ ಸಮಾರಂಭ ಜರುಗಲಿದೆ. ಈ ಜಾತ್ರೆಯೂ ಒಟ್ಟು 17 ದಿನಗಳ ಕಾಲ ನಡೆಯಲಿದೆ. ಹೀಗಾಗಿ ಸಂಬಂಧ ಪಟ್ಟ ಅಧಿಕಾರಿಗಳು ಯಾವುದೇ ರೀತಿಯ ತೊಂದರೆ ಆಗದಂತೆ ಮುಂಜಾಗೃತಾ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಈ ಜಾತ್ರಾ ಮಹೋತ್ಸವದಲ್ಲಿ ಆರೋಗ್ಯ ಇಲಾಖೆ ವತಿಯಿಂದ ಆಂಬುಲೆನ್ಸ್ ವ್ಯವಸ್ಥೆ ಮತ್ತು ವೈದ್ಯರುಗಳ ತಂಡವನ್ನು ನೇಮಿಸಬೇಕು. ಚೆಸ್ಕಾಂ ಇಲಾಖೆಯಿಂದ ವಿದ್ಯುತ್ ದೀಪಾಲಂಕಾರ ಮಾಡಬೇಕು. ಅಲ್ಲದೇ ಜಾತ್ರೆಯಲ್ಲಿ ತಾತ್ಕಾಲಿಕ ಶೌಚಾಲಯ, ಮೊಬೈಲ್ ಶೌಚಾಲಯ ಹಾಗೂ ಬಟ್ಟೆ ಬದಲಿಸುವ ಕೊಠಡಿ ನಿರ್ಮಿಸಿ ಸ್ವಚ್ಚತೆಗೆ ಆದ್ಯತೆ ನೀಡಬೇಕು ಎಂದು ಸೂಚಿಸಿದರು.

ಇನ್ನೂ ಪೊಲೀಸ್ ಇಲಾಖೆ ವತಿಯಿಂದ ಬ್ಯಾರಿಕೇಡ್, ಧ್ವನಿ ವರ್ಧಕ , ಸಿಸಿ ಕ್ಯಾಮೆರಾ ಅಳವಡಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಜೊತೆಗೆ ಜಾತ್ರಾ ಮಾಳದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮತ್ತು ಜಾತ್ರಾ ಪ್ರದೇಶದಲ್ಲಿ ಸ್ವಚ್ಚತೆ ಕಾಪಾಡಬೇಕು. ನೈರ್ಮಲೀಕರಣಕ್ಕೆ ಹೆಚ್ಚು ಒತ್ತು ನೀಡಬೇಕು. ಈ ಇಲಾಖೆಗಳೊಂದಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

3 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

9 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

9 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

9 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

9 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

10 hours ago