ಮೈಸೂರು: ಟಿ.ನರಸೀಪುರದಲ್ಲಿ 13ನೇ ವರ್ಷದ ಕುಂಭಮೇಳ ಇಂದಿನಿಂದ ಪ್ರಾರಂಭವಾಗಿದ್ದು, ನಾಳೆ ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ ತಿಳಿಸಿದ್ದಾರೆ.
ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ತ್ರಿವೇಣಿ ಸಂಗಮಕ್ಕೆ ಇಂದು(ಫೆಬ್ರವರಿ.10) ಭೇಟಿ ನೀಡಿದ ವೇಳೆ ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಈ ಕುಂಭಮೇಳಕ್ಕೆ ಬರುವ ಭಕ್ತರಿಗೆ ಶ್ರೀ ಗುಂಜಾ ನರಸಿಂಹ ಸ್ವಾಮಿ, ಅಗಸ್ತ್ಯೇಶ್ವರ ಸ್ವಾಮಿ ಹಾಗೂ ಗುಹೇಶ್ವರ ಸ್ವಾಮಿ ದೇವಾಲಯದ ಬಳಿ ಸ್ನಾನದ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ ಜಿಲ್ಲಾಡಳಿತದ ವತಿಯಿಂದ ಸುರಕ್ಷತಾ ವ್ಯವಸ್ಥೆಯನ್ನು ಮಾಡಲಾಗಿದೆ ಎಂದರು.
ಇನ್ನೂ ನಾಳೆ(ಫೆ.11) ನಡೆಯುವ ಕಾವೇರಿ ಆರತಿ ಕಾರ್ಯಕ್ರಮವೂ ಸಂಜೆ 6.30 ರಿಂದ 7 ಗಂಟೆಯವರೆಗೂ ಜರುಗಲಿದ್ದು, ಗಂಗಾ ಆರತಿಯ ರೀತಿಯಲ್ಲಿಯೇ ನಡೆಯಲಿದೆ. ಅದಕ್ಕೆ ಗಂಗಾ ಆರತಿ ಮಾಡುವ ಒಂದು ತಂಡವನ್ನು ಇಲ್ಲಿಗೆ ಕರೆದು ತರಲಾಗಿದೆ. ಹೀಗಾಗಿ ಅವರೇ ಕಾವೇರಿ ಆರತಿ ಮಾಡಲಿದ್ದಾರೆ ಎಂದು ಹೇಳಿದರು.
ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…
ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…
ಸಿದ್ದಾಪುರ : ಎರಡು ಬೈಕ್ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…
ಹೊಸದಿಲ್ಲಿ : ಎಲ್ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…
ಟೆಹ್ರಾನ್ : ಇರಾನ್ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…
ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…