ಮೈಸೂರು: ಟಿ.ನರಸೀಪುರದಲ್ಲಿ 13ನೇ ವರ್ಷದ ಕುಂಭಮೇಳ ಇಂದಿನಿಂದ ಪ್ರಾರಂಭವಾಗಿದ್ದು, ನಾಳೆ ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ ತಿಳಿಸಿದ್ದಾರೆ.
ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ತ್ರಿವೇಣಿ ಸಂಗಮಕ್ಕೆ ಇಂದು(ಫೆಬ್ರವರಿ.10) ಭೇಟಿ ನೀಡಿದ ವೇಳೆ ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಈ ಕುಂಭಮೇಳಕ್ಕೆ ಬರುವ ಭಕ್ತರಿಗೆ ಶ್ರೀ ಗುಂಜಾ ನರಸಿಂಹ ಸ್ವಾಮಿ, ಅಗಸ್ತ್ಯೇಶ್ವರ ಸ್ವಾಮಿ ಹಾಗೂ ಗುಹೇಶ್ವರ ಸ್ವಾಮಿ ದೇವಾಲಯದ ಬಳಿ ಸ್ನಾನದ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ ಜಿಲ್ಲಾಡಳಿತದ ವತಿಯಿಂದ ಸುರಕ್ಷತಾ ವ್ಯವಸ್ಥೆಯನ್ನು ಮಾಡಲಾಗಿದೆ ಎಂದರು.
ಇನ್ನೂ ನಾಳೆ(ಫೆ.11) ನಡೆಯುವ ಕಾವೇರಿ ಆರತಿ ಕಾರ್ಯಕ್ರಮವೂ ಸಂಜೆ 6.30 ರಿಂದ 7 ಗಂಟೆಯವರೆಗೂ ಜರುಗಲಿದ್ದು, ಗಂಗಾ ಆರತಿಯ ರೀತಿಯಲ್ಲಿಯೇ ನಡೆಯಲಿದೆ. ಅದಕ್ಕೆ ಗಂಗಾ ಆರತಿ ಮಾಡುವ ಒಂದು ತಂಡವನ್ನು ಇಲ್ಲಿಗೆ ಕರೆದು ತರಲಾಗಿದೆ. ಹೀಗಾಗಿ ಅವರೇ ಕಾವೇರಿ ಆರತಿ ಮಾಡಲಿದ್ದಾರೆ ಎಂದು ಹೇಳಿದರು.
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…