ಮೈಸೂರು: ಬೇಸಿಗೆಕಾಲ ಹತ್ತಿರವಾಗುತ್ತಿದ್ದಂತೆ ಅರಣ್ಯ ಇಲಾಖೆಗೆ ಬೆಂಕಿ ನಂದಿಸುವ ಸವಾಲು ಎದುರಾಗುತ್ತದೆ. ಈ ಸಂಬಂಧ ಅರಣ್ಯಗಳಲ್ಲಿ ಬೆಂಕಿ ಅವಘಡ ತಡೆದು, ಅದನ್ನು ರಕ್ಷಿಸಲು ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು(ಮಾರ್ಚ್.4) ಅರಣ್ಯ ಬೆಂಕಿ ತಡೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಪೂರ್ವಸಿದ್ಧತೆ ಸಭೆಯಲ್ಲಿ ಮಾತನಾಡಿದ ಅವರು, ಈ ಸಂಬಂಧ ಅಗ್ನಿ ಶಾಮಕ ಇಲಾಖೆ ಮತ್ತು ಅರಣ್ಯ ಇಲಾಖೆಯ ಉತ್ತಮ ಸಮನ್ವಯತೆ ಉತ್ತಮವಾಗಿ ಯಾವುದೇ ಅವಘಡಗಳು ಸಂಭವಿಸದಂತೆ ನಿಭಾಯಿಸಲಾಗಿದೆ. ಅದರ ಜೊತೆಗೆ ಅರಣ್ಯ ರಕ್ಷಣೆಗೆ ಜನರ ಸಹಕಾರ ಹಾಗೂ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಮಾಡಬೇಕು. ಅಲ್ಲದೇ ಅರಣ್ಯಗಳಲ್ಲಿ ಅಚನಾಕ್ ಆಗಿ ಬೆಂಕಿ ಕಾಣಿಸಿಕೊಂಡಾಗ ತಕ್ಷಣ ಕ್ರಮ ಕೈಗೊಂಡು ಅಗತ್ಯ ಕ್ರಮ ವಹಿಸಲು ಅಧಿಕಾರಿಗಳು ಸಿಬ್ಬಂದಿಗಳು ಸಜ್ಜಾಗಿ ಇರಬೇಕು ಎಂದರು.
ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಳ್ಳದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಅವುಗಳಲ್ಲಿ ನೀರು ಲಭ್ಯವಿರುವ ಪ್ರದೇಶಗಳನ್ನು ಗುರುತಿಸಿಕೊಳ್ಳಿ , ಅರಣ್ಯ ಬೆಂಕಿ ಕಾಣಿಸಿಕೊಂಡಾಗ ಹತ್ತಿರದಲ್ಲಿರುವ ಕಾರ್ಖಾನೆಗಳು, ಮಾಲ್ ಗಳು ಹಾಗೂ ಸಾರ್ವಜನಿಕರು ತಮ್ಮ ಬಳಿ ಲಭ್ಯವಿರುವ ನೀರು ಹಾಗೂ ಸೌಲಭ್ಯಗಳನ್ನು ಅಧಿಕಾರಿಗಳು ಕೋರಿದರೆ ತಕ್ಷಣ ಒದಗಿಸಬೇಕು. ಇಲ್ಲವಾದರೆ ಈ ವಿಚಾರವಾಗಿ ಅಸಹಕಾರ ತೋರಿದರೆ ರಾಷ್ಟೀಯ ವಿಪತ್ತು ನಿರ್ವಹಣಾ ಕಾಯ್ದೆ ಅನ್ವಯ ಕ್ರಮ ವಹಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಇನ್ನು ಜಿಲ್ಲಾ ವಿಪತ್ತು ನಿರ್ವಹಣೆಯಿಂದ ಅರಣ್ಯ ಇಲಾಖೆ ಮತ್ತು ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಬೇಕು. ಅಲ್ಲದೇ ಕಾಡಂಚಿನ ಪ್ರದೇಶಗಳ ಬಳಿ ಸಾರ್ವಜನಿಕರು ಧೂಮಪಾನ ಸೇವನೆ ಮಾಡಿ ಬೆಂಕಿ ನಂದಿಸದೆ ಎಸೆಯಬಾರದು. ಇದರಿಂದ ಬೆಂಕಿ ಕಾಣಿಸಿಕೊಳ್ಳುವ ಸಂಭವಿರುತ್ತದೆ. ಹೀಗಾಗಿ ಅರಣ್ಯ ಪ್ರದೇಶಗಳಲ್ಲಿ ಬೆಂಕಿ ಕಾಣಿಸಿಕೊಳ್ಳದ ಹಾಗೇ ತಡೆಯಲು ಸಾರ್ವಜನಿಕರು ಅಗತ್ಯ ಸಹಕಾರ ನೀಡಬೇಕು ಎಂದು ಹೇಳಿದರು.
ಬೆಂಗಳೂರು : ಇ-ಸ್ವತ್ತು 2.0 ತಂತ್ರಾಂಶದಲ್ಲಿ ಕೆಲವು ಬದಲಾವಣೆಗಳನ್ನು ಮಾಡುವ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಯನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ…
ಮೈಸೂರು : ಡ್ರಗ್ಸ್ ಮುಕ್ತ ಮೈಸೂರು ಮಾಡಲು ಮುಂದಾಗಿರುವ ಮೈಸೂರು ನಗರ ಪೊಲೀಸರು ‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ…
ಮಂಡ್ಯ : ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್ಎಚ್ 275ರ ವಿಸ್ತೃತ ಮಾರ್ಗವಾದ ಬೆಂಗಳೂರು-ಕುಶಾಲನಗರ ಹೆದ್ದಾರಿಯು ರಂಗನತಿಟ್ಟು ಪಕ್ಷಿಧಾಮದ…
ಹಲಗೂರು : ಪ್ರತ್ಯೇಕ ಎರಡು ಕಡೆಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದು ಐದಾರು ಎಕರೆ ಭೂ ಪ್ರದೇಶದಲ್ಲಿ ಸಣ್ಣಪುಟ್ಟ ಗಿಡಗಳು ಸುಟ್ಟು…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದ ಹೆಣ್ಣು ಜೀಬ್ರಾ ‘ಪ್ರಾಚಿ’ ಅನಾರೋಗ್ಯದಿಂದ ಶನಿವಾರ ಬೆಳಿಗ್ಗೆ 11ರ ಸುಮಾರಿಗೆ ಸಾವನ್ನಪ್ಪಿದೆ. ಅದಕ್ಕೆ…
ವಾಷಿಂಗ್ಟನ್ : ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಚೌಕಟ್ಟನ್ನು ತಲುಪಿವೆ ಎಂದು ಘೋಷಿಸಿವೆ. ಇದರ ಅಡಿಯಲ್ಲಿ ಭಾರತ…