ಮೈಸೂರು: ಬೇಸಿಗೆಕಾಲ ಹತ್ತಿರವಾಗುತ್ತಿದ್ದಂತೆ ಅರಣ್ಯ ಇಲಾಖೆಗೆ ಬೆಂಕಿ ನಂದಿಸುವ ಸವಾಲು ಎದುರಾಗುತ್ತದೆ. ಈ ಸಂಬಂಧ ಅರಣ್ಯಗಳಲ್ಲಿ ಬೆಂಕಿ ಅವಘಡ ತಡೆದು, ಅದನ್ನು ರಕ್ಷಿಸಲು ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು(ಮಾರ್ಚ್.4) ಅರಣ್ಯ ಬೆಂಕಿ ತಡೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಪೂರ್ವಸಿದ್ಧತೆ ಸಭೆಯಲ್ಲಿ ಮಾತನಾಡಿದ ಅವರು, ಈ ಸಂಬಂಧ ಅಗ್ನಿ ಶಾಮಕ ಇಲಾಖೆ ಮತ್ತು ಅರಣ್ಯ ಇಲಾಖೆಯ ಉತ್ತಮ ಸಮನ್ವಯತೆ ಉತ್ತಮವಾಗಿ ಯಾವುದೇ ಅವಘಡಗಳು ಸಂಭವಿಸದಂತೆ ನಿಭಾಯಿಸಲಾಗಿದೆ. ಅದರ ಜೊತೆಗೆ ಅರಣ್ಯ ರಕ್ಷಣೆಗೆ ಜನರ ಸಹಕಾರ ಹಾಗೂ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಮಾಡಬೇಕು. ಅಲ್ಲದೇ ಅರಣ್ಯಗಳಲ್ಲಿ ಅಚನಾಕ್ ಆಗಿ ಬೆಂಕಿ ಕಾಣಿಸಿಕೊಂಡಾಗ ತಕ್ಷಣ ಕ್ರಮ ಕೈಗೊಂಡು ಅಗತ್ಯ ಕ್ರಮ ವಹಿಸಲು ಅಧಿಕಾರಿಗಳು ಸಿಬ್ಬಂದಿಗಳು ಸಜ್ಜಾಗಿ ಇರಬೇಕು ಎಂದರು.
ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಳ್ಳದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಅವುಗಳಲ್ಲಿ ನೀರು ಲಭ್ಯವಿರುವ ಪ್ರದೇಶಗಳನ್ನು ಗುರುತಿಸಿಕೊಳ್ಳಿ , ಅರಣ್ಯ ಬೆಂಕಿ ಕಾಣಿಸಿಕೊಂಡಾಗ ಹತ್ತಿರದಲ್ಲಿರುವ ಕಾರ್ಖಾನೆಗಳು, ಮಾಲ್ ಗಳು ಹಾಗೂ ಸಾರ್ವಜನಿಕರು ತಮ್ಮ ಬಳಿ ಲಭ್ಯವಿರುವ ನೀರು ಹಾಗೂ ಸೌಲಭ್ಯಗಳನ್ನು ಅಧಿಕಾರಿಗಳು ಕೋರಿದರೆ ತಕ್ಷಣ ಒದಗಿಸಬೇಕು. ಇಲ್ಲವಾದರೆ ಈ ವಿಚಾರವಾಗಿ ಅಸಹಕಾರ ತೋರಿದರೆ ರಾಷ್ಟೀಯ ವಿಪತ್ತು ನಿರ್ವಹಣಾ ಕಾಯ್ದೆ ಅನ್ವಯ ಕ್ರಮ ವಹಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಇನ್ನು ಜಿಲ್ಲಾ ವಿಪತ್ತು ನಿರ್ವಹಣೆಯಿಂದ ಅರಣ್ಯ ಇಲಾಖೆ ಮತ್ತು ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಬೇಕು. ಅಲ್ಲದೇ ಕಾಡಂಚಿನ ಪ್ರದೇಶಗಳ ಬಳಿ ಸಾರ್ವಜನಿಕರು ಧೂಮಪಾನ ಸೇವನೆ ಮಾಡಿ ಬೆಂಕಿ ನಂದಿಸದೆ ಎಸೆಯಬಾರದು. ಇದರಿಂದ ಬೆಂಕಿ ಕಾಣಿಸಿಕೊಳ್ಳುವ ಸಂಭವಿರುತ್ತದೆ. ಹೀಗಾಗಿ ಅರಣ್ಯ ಪ್ರದೇಶಗಳಲ್ಲಿ ಬೆಂಕಿ ಕಾಣಿಸಿಕೊಳ್ಳದ ಹಾಗೇ ತಡೆಯಲು ಸಾರ್ವಜನಿಕರು ಅಗತ್ಯ ಸಹಕಾರ ನೀಡಬೇಕು ಎಂದು ಹೇಳಿದರು.
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…
ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…
ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…
ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…
ಮೈಸೂರು : ಕ್ರಿಸ್ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…
ಮೈಸೂರು : ಮೈಸೂರಿನ ರೇಸ್ಕ್ಲಬ್ನ ಪ್ರದೇಶದ ಸುತ್ತಲಿನ ಎರಡು ಕಿ.ಮೀ ವ್ಯಾಪ್ತಿಯಲ್ಲಿ ಕುದುರೆ, ಕತ್ತೆ, ಹೇಸರಗತ್ತೆ ಪ್ರಾಣಿಗಳ ಚಲನವಲನ, ಕುದುರೆಗಳನ್ನು…