ಮೈಸೂರು

ಅರಣ್ಯಗಳಲ್ಲಿ ಬೆಂಕಿ ಅವಘಡ ತಡೆಯಲು ಮುಂಜಾಗ್ರತಾ ಕ್ರಮವಹಿಸಿ: ಜಿ.ಲಕ್ಷ್ಮೀಕಾಂತ್‌ ರೆಡ್ಡಿ

ಮೈಸೂರು: ಬೇಸಿಗೆಕಾಲ ಹತ್ತಿರವಾಗುತ್ತಿದ್ದಂತೆ ಅರಣ್ಯ ಇಲಾಖೆಗೆ ಬೆಂಕಿ ನಂದಿಸುವ ಸವಾಲು ಎದುರಾಗುತ್ತದೆ. ಈ ಸಂಬಂಧ ಅರಣ್ಯಗಳಲ್ಲಿ ಬೆಂಕಿ ಅವಘಡ ತಡೆದು, ಅದನ್ನು ರಕ್ಷಿಸಲು ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್‌ ರೆಡ್ಡಿ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು(ಮಾರ್ಚ್‌.4) ಅರಣ್ಯ ಬೆಂಕಿ ತಡೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಪೂರ್ವಸಿದ್ಧತೆ ಸಭೆಯಲ್ಲಿ ಮಾತನಾಡಿದ ಅವರು, ಈ ಸಂಬಂಧ ಅಗ್ನಿ ಶಾಮಕ ಇಲಾಖೆ ಮತ್ತು ಅರಣ್ಯ ಇಲಾಖೆಯ ಉತ್ತಮ ಸಮನ್ವಯತೆ ಉತ್ತಮವಾಗಿ ಯಾವುದೇ ಅವಘಡಗಳು ಸಂಭವಿಸದಂತೆ ನಿಭಾಯಿಸಲಾಗಿದೆ. ಅದರ ಜೊತೆಗೆ ಅರಣ್ಯ ರಕ್ಷಣೆಗೆ ಜನರ ಸಹಕಾರ ಹಾಗೂ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಮಾಡಬೇಕು. ಅಲ್ಲದೇ ಅರಣ್ಯಗಳಲ್ಲಿ ಅಚನಾಕ್‌ ಆಗಿ ಬೆಂಕಿ ಕಾಣಿಸಿಕೊಂಡಾಗ ತಕ್ಷಣ ಕ್ರಮ ಕೈಗೊಂಡು ಅಗತ್ಯ ಕ್ರಮ ವಹಿಸಲು ಅಧಿಕಾರಿಗಳು ಸಿಬ್ಬಂದಿಗಳು ಸಜ್ಜಾಗಿ ಇರಬೇಕು ಎಂದರು.

ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಳ್ಳದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಅವುಗಳಲ್ಲಿ ನೀರು ಲಭ್ಯವಿರುವ ಪ್ರದೇಶಗಳನ್ನು ಗುರುತಿಸಿಕೊಳ್ಳಿ , ಅರಣ್ಯ ಬೆಂಕಿ ಕಾಣಿಸಿಕೊಂಡಾಗ ಹತ್ತಿರದಲ್ಲಿರುವ ಕಾರ್ಖಾನೆಗಳು, ಮಾಲ್ ಗಳು ಹಾಗೂ ಸಾರ್ವಜನಿಕರು ತಮ್ಮ ಬಳಿ ಲಭ್ಯವಿರುವ ನೀರು ಹಾಗೂ ಸೌಲಭ್ಯಗಳನ್ನು ಅಧಿಕಾರಿಗಳು ಕೋರಿದರೆ ತಕ್ಷಣ ಒದಗಿಸಬೇಕು. ಇಲ್ಲವಾದರೆ ಈ ವಿಚಾರವಾಗಿ ಅಸಹಕಾರ ತೋರಿದರೆ ರಾಷ್ಟೀಯ ವಿಪತ್ತು ನಿರ್ವಹಣಾ ಕಾಯ್ದೆ ಅನ್ವಯ ಕ್ರಮ ವಹಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಇನ್ನು ಜಿಲ್ಲಾ ವಿಪತ್ತು ನಿರ್ವಹಣೆಯಿಂದ ಅರಣ್ಯ ಇಲಾಖೆ ಮತ್ತು ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಬೇಕು. ಅಲ್ಲದೇ ಕಾಡಂಚಿನ ಪ್ರದೇಶಗಳ ಬಳಿ ಸಾರ್ವಜನಿಕರು ಧೂಮಪಾನ ಸೇವನೆ ಮಾಡಿ ಬೆಂಕಿ ನಂದಿಸದೆ ಎಸೆಯಬಾರದು. ಇದರಿಂದ ಬೆಂಕಿ ಕಾಣಿಸಿಕೊಳ್ಳುವ ಸಂಭವಿರುತ್ತದೆ. ಹೀಗಾಗಿ ಅರಣ್ಯ ಪ್ರದೇಶಗಳಲ್ಲಿ ಬೆಂಕಿ ಕಾಣಿಸಿಕೊಳ್ಳದ ಹಾಗೇ ತಡೆಯಲು ಸಾರ್ವಜನಿಕರು ಅಗತ್ಯ ಸಹಕಾರ ನೀಡಬೇಕು ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

34 mins ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

37 mins ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

43 mins ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

49 mins ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

13 hours ago