ಮೈಸೂರು : ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಕ ಅಧಿಕಾರಿ ಯುಕೇಶ್ ಕುಮಾರ್ ಅವರು ತಿ.ನರಸೀಪುರ ತಾಲ್ಲೂಕು ಬನ್ನೂರು ಹೋಬಳಿ ವ್ಯಾಪ್ತಿಯ ಚಾಮನಹಳ್ಳಿ ಕೆರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಚಾಮನಹಳ್ಳಿ ಕೆರೆಯ ಮೀನುಪಾಶವಾರು ಹಕ್ಕನ್ನು ಶ್ರೀ ಚಾಮುಂಡೇಶ್ವರಿ ಮೀನುಗಾರರ ಸಹಕಾರ ಸಂಘ ಚಾಮನಹಳ್ಳಿರವರಿಗೆ ವಹಿಸಲಾಗಿದ್ದು ಸದರಿ ಕೆರಯಲ್ಲಿ ಪಾಲನೆಯಲ್ಲಿರುವ ರೋಹು ತಳಿ ಮೀನುಮರಿಗಳ ಬೆಳವಣಿಗೆಯನ್ನು ಪರಿಶೀಲಿಸಿದರು.
ಸಹಕಾರ ಸಂಘದ ವತಿಯಿಂದಲೇ ಮೀನು ಮಾರಾಟ ಮಾಡುವುದರಿಂದ ದಲ್ಲಾಳಿಗಳ ಮಧ್ಯಸ್ಥಿಕೆ ಇಲ್ಲದೇ ಹೆಚ್ಚಿನ ಲಾಭ ಗಳಿಸಬುಹುದಾಗಿದೆ ಎಂದು ಸಹಕಾರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳಿಗೆ ಸಲಹೆ ನೀಡಿದರು.
ಸಂಘದ ಅಧ್ಯಕ್ಷರು ಮಾತನಾಡಿ, ಮೀನು ಮಾರಾಟ ಮಾಡಲು ಹಾಗೂ ಉಪಹಾರ ಗೃಹ ಮಾಡಲು ಸ್ಳಳಾವಕಾಶ ಕಲ್ಲಿಸಿಕೊಡುವಂತೆ ಹಾಗೂ ಕೆರೆಯಲ್ಲಿ ಬೆಳೆದಿರುವ ಜಲಸಸ್ಯ, ಕೆರೆಯ ಏರಿ ದುರಸ್ಥಿ ಮತ್ತು ಹೂಳು ತೆಗೆಸಿಕೊಡುವಂತೆ ಮನವಿ ಮಾಡಿದರು. ಇದಕ್ಕೆ ಮಾನ್ಯ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಯವರು ಸಂಬಂಧಪಟ್ಟ ಇಲಾಖೆಗಳೊಂದಿಗೆ ಚರ್ಚಿಸಿ ನಿಯಮಾನುಸಾರ ಕ್ರಮವಹಿಸಲಾಗುವುದೆಂದು ತಿಳಿಸಿದರು.
ಈ ವೇಳೆ ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕ ಮಂಜುನಾಥ್, ಸಹಾಯಕ ನಿರ್ದೇಶಕರು, ಇಲಾಖೆ ಸಿಬ್ಬಂದಿ ಹಾಗೂ ಸಹಕಾರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.
ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…
‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…
ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಮಾಡಲು ಸರ್ಕಾರಿ ನೌಕರರಿಗೆ ಅಥವಾ ಅಧಿಕಾರಿಗಳಿಗೆ ೧೦ ರೂ. ಲಂಚವನ್ನು ಕೂಡ ನೀಡಬೇಡಿ ಎಂದು…
ಪಂಜುಗಂಗೊಳ್ಳಿ ಅವಳ ಗೊಂಬೆಗಳು ದೇಶ ದೇಶಗಳಿಗೆ ಹಾರುತ್ತವೆ! ಕೊಯಂಬತ್ತೂರಿನ ಜೆ.ಎ.ರಾಧಿಕಾ ಐದು ವರ್ಷದವಳಾಗಿದ್ದಾಗ ಕಾಲ ಮೂಳೆ ಮುರಿದು, ಶಸ್ತ್ರಚಿಕಿತ್ಸೆ ನಡೆದು…
ಎಂ.ಆರ್.ಚಕ್ರಪಾಣಿ ಜಗಳದಿಂದಾಗಿ ಡೇರಿಗೆ ಬೀಗ: ದೂರು-ಪ್ರತಿ ದೂರು ದಾಖಲು; ಖಾಸಗಿ ಡೇರಿಗೆ ಹಾಲು ಸರಬರಾಜು ಮದ್ದೂರು: ತಾಲ್ಲೂಕಿನ ಪಣ್ಣೇದೊಡ್ಡಿ ಗ್ರಾಮದ…