ಮೈಸೂರು

ಚಾಮನಹಳ್ಳಿ ಕೆರೆಯ ಮೀನುಪಾಶವಾರು ಹಕ್ಕು ಪರಿಶೀಲಿಸಿದ ಜಿ.ಪಂ ಸಿಇಒ

ಮೈಸೂರು : ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಕ ಅಧಿಕಾರಿ ಯುಕೇಶ್‌ ಕುಮಾರ್‌ ಅವರು ತಿ.ನರಸೀಪುರ ತಾಲ್ಲೂಕು ಬನ್ನೂರು ಹೋಬಳಿ ವ್ಯಾಪ್ತಿಯ ಚಾಮನಹಳ್ಳಿ ಕೆರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಚಾಮನಹಳ್ಳಿ ಕೆರೆಯ ಮೀನುಪಾಶವಾರು ಹಕ್ಕನ್ನು ಶ್ರೀ ಚಾಮುಂಡೇಶ್ವರಿ ಮೀನುಗಾರರ ಸಹಕಾರ ಸಂಘ ಚಾಮನಹಳ್ಳಿರವರಿಗೆ ವಹಿಸಲಾಗಿದ್ದು ಸದರಿ ಕೆರಯಲ್ಲಿ ಪಾಲನೆಯಲ್ಲಿರುವ ರೋಹು ತಳಿ ಮೀನುಮರಿಗಳ ಬೆಳವಣಿಗೆಯನ್ನು ಪರಿಶೀಲಿಸಿದರು.

ಸಹಕಾರ ಸಂಘದ ವತಿಯಿಂದಲೇ ಮೀನು ಮಾರಾಟ ಮಾಡುವುದರಿಂದ ದಲ್ಲಾಳಿಗಳ ಮಧ್ಯಸ್ಥಿಕೆ ಇಲ್ಲದೇ ಹೆಚ್ಚಿನ ಲಾಭ ಗಳಿಸಬುಹುದಾಗಿದೆ ಎಂದು ಸಹಕಾರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳಿಗೆ ಸಲಹೆ ನೀಡಿದರು.

ಸಂಘದ ಅಧ್ಯಕ್ಷರು ಮಾತನಾಡಿ, ಮೀನು ಮಾರಾಟ ಮಾಡಲು ಹಾಗೂ ಉಪಹಾರ ಗೃಹ ಮಾಡಲು ಸ್ಳಳಾವಕಾಶ ಕಲ್ಲಿಸಿಕೊಡುವಂತೆ ಹಾಗೂ ಕೆರೆಯಲ್ಲಿ ಬೆಳೆದಿರುವ ಜಲಸಸ್ಯ, ಕೆರೆಯ ಏರಿ ದುರಸ್ಥಿ ಮತ್ತು ಹೂಳು ತೆಗೆಸಿಕೊಡುವಂತೆ ಮನವಿ ಮಾಡಿದರು. ಇದಕ್ಕೆ ಮಾನ್ಯ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಯವರು ಸಂಬಂಧಪಟ್ಟ ಇಲಾಖೆಗಳೊಂದಿಗೆ ಚರ್ಚಿಸಿ ನಿಯಮಾನುಸಾರ ಕ್ರಮವಹಿಸಲಾಗುವುದೆಂದು ತಿಳಿಸಿದರು.

ಈ ವೇಳೆ ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕ ಮಂಜುನಾಥ್‌, ಸಹಾಯಕ ನಿರ್ದೇಶಕರು, ಇಲಾಖೆ ಸಿಬ್ಬಂದಿ ಹಾಗೂ ಸಹಕಾರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

8 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

8 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

8 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

8 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

8 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

11 hours ago