ಮೈಸೂರು

ಉದಯಗಿರಿ ಪೊಲೀಸ್‌ ಠಾಣೆ ಪ್ರಕರಣ: ಠಾಣೆಗೆ ಭೇಟಿ ನೀಡಿ ಮಾಹಿತಿ ಪಡೆದ ಪರಮೇಶ್ವರ್‌

ಮೈಸೂರು: ನಗರದ ಉದಯಗಿರಿ ಪೊಲೀಸ್‌ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್‌ ಠಾಣೆಗೆ ರಾಜ್ಯ ಗೃಹ ಸಚಿವ ಜಿ.ಪರಮೇಶ್ವರ್‌ ಭೇಟಿ ನೀಡಿ ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿ ಪಡೆದಿದ್ದಾರೆ.

ಡಾ.ಜಿ.ಪರಮೇಶ್ವರ್‌ ಅವರು ಇಂದು(ಫೆಬ್ರವರರಿ.14) ಉದಯಗಿರಿ ಪೊಲೀಸ್‌ ಠಾಣೆಗೆ ಭೇಟಿ ನೀಡಿದ್ದು, ಪೊಲೀಸರಿಂದ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಈ ವೇಳೇ ಪರಮೇಶ್ವರ್‌ ಅವರೊಂದಿಗೆ ಡಿಸಿಪಿಗಳಾದ ಮುತ್ತುರಾಜ್‌ ಮತ್ತು ಜಾಹ್ನವಿ ಸೇರಿದಂತೆ ಇನ್ನಿತರ ಪೊಲೀಸ್‌ ಅಧಿಕಾರಿಗಳು ಉಪಸ್ಥಿತರಿದ್ದರು.

ಪೊಲೀಸ್‌ ಠಾಣೆಯಲ್ಲಿ ಪ್ರಕರಣದ ಬಗ್ಗೆ ಮಾಹಿತಿ ಪಡೆದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ವನಾನು ಇವತ್ತು ಘಟನೆ ಬಗ್ಗೆ ತಿಳಿದುಕೊಳ್ಳಲು ಬಂದಿದ್ದೇನೆ. ಮೊದಲು ಮಾಹಿತಿಯನ್ನು ಪಡೆದಿದ್ದೇನೆ. ಮೇಲ್ನೋಟಕ್ಕೆ ಅವರಿಗೆ ಇರುವ ಮಾಹಿತಿಯನ್ನ ಪೊಲೀಸರು ಹೇಳಿದ್ದಾರೆ. ಈ ಘಟನೆಗೆ ಕಾರಣರಾದವರಿಗೆ ಕಠಿಣ ಕ್ರಮ ತೆಗೆದುಕೊಳ್ಳಲು ಆದೇಶ ಮಾಡಿದ್ದೇವೆ. ಪೊಲೀಸ್ ವಾಹನಗಳಿಗೆ ಜಖಂ ಮಾಡಿದ್ದು, ವಾಹನಗಳಿಗೆ ಕಲ್ಲು ತೂರಿದ್ದವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಹೇಳಿದರು.

ಈ ಘಟನೆ ವಿಚಾರವಾಗಿ ಕಾನೂನನ್ನ ಕೈಗೆ ತೆಗೆದುಕೊಂಡವರನ್ನ ಯಾವುದೇ ಕಾರಣಕ್ಕೂ ಬಿಡುವ ಮಾತಿಲ್ಲ. ಯಾರೇ ತಪ್ಪು ಮಾಡಿದರೂ ಅದಕ್ಕೆ ಪೊಲೀಸ್ ವ್ಯವಸ್ಥೆ ಇದೆ. ಯಾರೇ ಆಗಲಿ ಕಾನೂನನ್ನು ಕೈಗೆ ತೆಗೆದುಕೊಳ್ಳಬಾರದು. ಪೊಲೀಸ್‌ರಿಗೆ ಪಕ್ಷ ಮುಖ್ಯ ಅಲ್ಲ, ಕಾನೂನನ್ನು ರಕ್ಷಣೆ ಮಾಡುವುದು ಮುಖ್ಯ. ಘಟನೆ ಆದ ಮೇಲೆ ಕೆಲವರು ಪರ ವಿರೋಧ ಹೇಳಿಕೆಗಳ ಕೊಡೋದು ಆಗುತ್ತಿದೆ. ಅವರಿಗೆ ಮಾತನಾಡುವ ಹಕ್ಕು ಇದೆ ಮಾತಾಡಿದ್ದಾರೆ. ಆದರೆ ಮಾತನಾಡುವಾಗ ಬೇರೆಯವರ ಭಾವನೆಗಳಿಗೆ ಧಕ್ಕೆ ಆಗದಂತೆ ಮಾತನಾಡಬೇಕು ಎಂದರು.

ಇನ್ನೂ ಉತ್ತರ ಪ್ರದೇಶದಂತೆ ನಾವು ಬುಲ್ಡೇಜರ್ ತೆಗೆದುಕೊಂಡು ಮನೆ ಕೆಡವಿ ಹಾಕುವಷ್ಟು ಮಟ್ಟಕ್ಕೆ ನಮ್ಮ ರಾಜ್ಯದಲ್ಲಿ ಆ ಮಟ್ಟದ ಪರಿಸ್ಥಿತಿ ಇಲ್ಲ. ಉದಯಗಿರಿ ಭಾಗದಲ್ಲಿ ಹೆಚ್ಚಿನ ಜನ ಸಂಖ್ಯೆ ಇದೆ. ಸುಮಾರು ನಾಲ್ಕುವರೆ ಲಕ್ಷ ಜನ ಸಂಖ್ಯೆ ಇದೆ. ಹೀಗಾಗಿ ಮತ್ತೊಂದು ಪೊಲೀಸ್ ಠಾಣೆ ತೆರೆಯುವ ಅವಶ್ಯಕತೆ ಬಿದ್ದಲ್ಲಿ ತೆಗೆಯಲಾಗುತ್ತದೆ. ಪೊಲೀಸ್ ಘಟನೆ ನಡೆದ ದಿನ ಗಲಭೆ ನಿಯಂತ್ರಣ ಮಾಡುವಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ಇದರ ಬಗ್ಗೆ ಬೇರೆ ಬೇರೆಯವರು ರಾಜಕೀಯ ಮಾಡುವುದು ತಪ್ಪು. ಮುಂದೆ ತನಿಖೆ ಮಾಡಿ ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

ಏನಿದು ಪ್ರಕರಣ?

ಉದಯಗಿರಿ ಪೊಲೀಸ್‌ ಠಾಣೆಯ ಮೇಲೆ ಕೆಲವು ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿದ್ದರು. ಈ ಪ್ರಕರಣದ ವಿಚಾರವಾಗಿ ಹಲವರನ್ನು ಬಂಧಿಸಲಾಗಿದೆ. ಅಲ್ಲದೇ ವಿವಾದ ಪೋಸ್ಟ್‌ ಹಾಕಿದ್ದ ವ್ಯಕ್ತಿಯನ್ನು ಸಹ ಆರೆಸ್ಟ್‌ ಮಾಡಲಾಗಿದ್ದು, ಸಾವಿರಕ್ಕೂ ಹೆಚ್ಚು ಮಂದಿಯ ಮೇಲೆ ಎಫ್‌ಐ ಆರ್ ದಾಖಲಾಗಿದೆ. ಅದರಲ್ಲಿ 50 ಕ್ಕೂ ಅಧಿಕ ಮಂದಿಯ ಗುರುತು ಪತ್ತೆಯಾಗಿದೆ.

ಇನ್ನು ಪೊಲೀಸ್‌ ಠಾಣೆಯ ಮೇಲೆ ಕಲು ತೂರಾಟ ನಡೆಸಿರುವ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ದೃಶ್ಯಾವಳಿಯನ್ನು ಆಧರಿಸಿ ಗಲಭೇಕೋರರನ್ನು ಬಂಧಿಸಲಾಗಿಸಲು ಪೊಲೀಸರು ಮುಂದಾಗಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಉಡುಪಿ ಮಲ್ಪೆ ಬಳಿ ದೋಣಿ ಪಲ್ಟಿ: ಮೈಸೂರಿನ ಇಬ್ಬರು ಸಾವು

ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್‌ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…

35 mins ago

ಜೆಡಿಎಸ್‌ ಬಿಟ್ಟಿದ್ದು ದ್ರೋಹ ಹೇಗಾಗುತ್ತೆ: ಶಾಸಕ ಶಿವಲಿಂಗೇಗೌಡ

ಹಾಸನ: ನಾನು ಜೆಡಿಎಸ್‌ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್‌ ಜಾಸ್ತಿ ಆಗೋದು ಅಷ್ಟೇ. ಏನು…

1 hour ago

ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲರಿಗೆ ಅಡ್ಡಿಪಡಿಸಿದ ವಿಚಾರ: ರಾಷ್ಟ್ರಪತಿಗೆ ವರದಿ ರವಾನಿಸಿದ ಲೋಕಭವನ

ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಕಾಂಗ್ರೆಸ್‌ ಸದಸ್ಯರು…

1 hour ago

ಮಳವಳ್ಳಿ: ಈಜಲು ಹೋಗಿದ್ದ ಯುವಕ ಸಾವು

ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…

1 hour ago

ಮಂಡ್ಯದಲ್ಲಿ 3 ಕೋಟಿ ವೆಚ್ಚದಲ್ಲಿ ಗಾಂಧಿಭವನ ನಿರ್ಮಾಣ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…

1 hour ago

ಗ್ರಾಮ ಪಂಚಾಯತ್‌ಗಳ 590 ಸಿಬ್ಬಂದಿಗಳಿಗೆ ಅನುಮೋದನೆ: ಆದೇಶ ಪ್ರತಿ ವಿತರಿಸಿದ ಸಚಿವ ಎನ್‌.ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…

1 hour ago