ಮೈಸೂರು

ಉದಯಗಿರಿ ಪೊಲೀಸ್‌ ಠಾಣೆ ಪ್ರಕರಣ: ಠಾಣೆಗೆ ಭೇಟಿ ನೀಡಿ ಮಾಹಿತಿ ಪಡೆದ ಪರಮೇಶ್ವರ್‌

ಮೈಸೂರು: ನಗರದ ಉದಯಗಿರಿ ಪೊಲೀಸ್‌ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್‌ ಠಾಣೆಗೆ ರಾಜ್ಯ ಗೃಹ ಸಚಿವ ಜಿ.ಪರಮೇಶ್ವರ್‌ ಭೇಟಿ ನೀಡಿ ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿ ಪಡೆದಿದ್ದಾರೆ.

ಡಾ.ಜಿ.ಪರಮೇಶ್ವರ್‌ ಅವರು ಇಂದು(ಫೆಬ್ರವರರಿ.14) ಉದಯಗಿರಿ ಪೊಲೀಸ್‌ ಠಾಣೆಗೆ ಭೇಟಿ ನೀಡಿದ್ದು, ಪೊಲೀಸರಿಂದ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಈ ವೇಳೇ ಪರಮೇಶ್ವರ್‌ ಅವರೊಂದಿಗೆ ಡಿಸಿಪಿಗಳಾದ ಮುತ್ತುರಾಜ್‌ ಮತ್ತು ಜಾಹ್ನವಿ ಸೇರಿದಂತೆ ಇನ್ನಿತರ ಪೊಲೀಸ್‌ ಅಧಿಕಾರಿಗಳು ಉಪಸ್ಥಿತರಿದ್ದರು.

ಪೊಲೀಸ್‌ ಠಾಣೆಯಲ್ಲಿ ಪ್ರಕರಣದ ಬಗ್ಗೆ ಮಾಹಿತಿ ಪಡೆದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ವನಾನು ಇವತ್ತು ಘಟನೆ ಬಗ್ಗೆ ತಿಳಿದುಕೊಳ್ಳಲು ಬಂದಿದ್ದೇನೆ. ಮೊದಲು ಮಾಹಿತಿಯನ್ನು ಪಡೆದಿದ್ದೇನೆ. ಮೇಲ್ನೋಟಕ್ಕೆ ಅವರಿಗೆ ಇರುವ ಮಾಹಿತಿಯನ್ನ ಪೊಲೀಸರು ಹೇಳಿದ್ದಾರೆ. ಈ ಘಟನೆಗೆ ಕಾರಣರಾದವರಿಗೆ ಕಠಿಣ ಕ್ರಮ ತೆಗೆದುಕೊಳ್ಳಲು ಆದೇಶ ಮಾಡಿದ್ದೇವೆ. ಪೊಲೀಸ್ ವಾಹನಗಳಿಗೆ ಜಖಂ ಮಾಡಿದ್ದು, ವಾಹನಗಳಿಗೆ ಕಲ್ಲು ತೂರಿದ್ದವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಹೇಳಿದರು.

ಈ ಘಟನೆ ವಿಚಾರವಾಗಿ ಕಾನೂನನ್ನ ಕೈಗೆ ತೆಗೆದುಕೊಂಡವರನ್ನ ಯಾವುದೇ ಕಾರಣಕ್ಕೂ ಬಿಡುವ ಮಾತಿಲ್ಲ. ಯಾರೇ ತಪ್ಪು ಮಾಡಿದರೂ ಅದಕ್ಕೆ ಪೊಲೀಸ್ ವ್ಯವಸ್ಥೆ ಇದೆ. ಯಾರೇ ಆಗಲಿ ಕಾನೂನನ್ನು ಕೈಗೆ ತೆಗೆದುಕೊಳ್ಳಬಾರದು. ಪೊಲೀಸ್‌ರಿಗೆ ಪಕ್ಷ ಮುಖ್ಯ ಅಲ್ಲ, ಕಾನೂನನ್ನು ರಕ್ಷಣೆ ಮಾಡುವುದು ಮುಖ್ಯ. ಘಟನೆ ಆದ ಮೇಲೆ ಕೆಲವರು ಪರ ವಿರೋಧ ಹೇಳಿಕೆಗಳ ಕೊಡೋದು ಆಗುತ್ತಿದೆ. ಅವರಿಗೆ ಮಾತನಾಡುವ ಹಕ್ಕು ಇದೆ ಮಾತಾಡಿದ್ದಾರೆ. ಆದರೆ ಮಾತನಾಡುವಾಗ ಬೇರೆಯವರ ಭಾವನೆಗಳಿಗೆ ಧಕ್ಕೆ ಆಗದಂತೆ ಮಾತನಾಡಬೇಕು ಎಂದರು.

ಇನ್ನೂ ಉತ್ತರ ಪ್ರದೇಶದಂತೆ ನಾವು ಬುಲ್ಡೇಜರ್ ತೆಗೆದುಕೊಂಡು ಮನೆ ಕೆಡವಿ ಹಾಕುವಷ್ಟು ಮಟ್ಟಕ್ಕೆ ನಮ್ಮ ರಾಜ್ಯದಲ್ಲಿ ಆ ಮಟ್ಟದ ಪರಿಸ್ಥಿತಿ ಇಲ್ಲ. ಉದಯಗಿರಿ ಭಾಗದಲ್ಲಿ ಹೆಚ್ಚಿನ ಜನ ಸಂಖ್ಯೆ ಇದೆ. ಸುಮಾರು ನಾಲ್ಕುವರೆ ಲಕ್ಷ ಜನ ಸಂಖ್ಯೆ ಇದೆ. ಹೀಗಾಗಿ ಮತ್ತೊಂದು ಪೊಲೀಸ್ ಠಾಣೆ ತೆರೆಯುವ ಅವಶ್ಯಕತೆ ಬಿದ್ದಲ್ಲಿ ತೆಗೆಯಲಾಗುತ್ತದೆ. ಪೊಲೀಸ್ ಘಟನೆ ನಡೆದ ದಿನ ಗಲಭೆ ನಿಯಂತ್ರಣ ಮಾಡುವಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ಇದರ ಬಗ್ಗೆ ಬೇರೆ ಬೇರೆಯವರು ರಾಜಕೀಯ ಮಾಡುವುದು ತಪ್ಪು. ಮುಂದೆ ತನಿಖೆ ಮಾಡಿ ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

ಏನಿದು ಪ್ರಕರಣ?

ಉದಯಗಿರಿ ಪೊಲೀಸ್‌ ಠಾಣೆಯ ಮೇಲೆ ಕೆಲವು ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿದ್ದರು. ಈ ಪ್ರಕರಣದ ವಿಚಾರವಾಗಿ ಹಲವರನ್ನು ಬಂಧಿಸಲಾಗಿದೆ. ಅಲ್ಲದೇ ವಿವಾದ ಪೋಸ್ಟ್‌ ಹಾಕಿದ್ದ ವ್ಯಕ್ತಿಯನ್ನು ಸಹ ಆರೆಸ್ಟ್‌ ಮಾಡಲಾಗಿದ್ದು, ಸಾವಿರಕ್ಕೂ ಹೆಚ್ಚು ಮಂದಿಯ ಮೇಲೆ ಎಫ್‌ಐ ಆರ್ ದಾಖಲಾಗಿದೆ. ಅದರಲ್ಲಿ 50 ಕ್ಕೂ ಅಧಿಕ ಮಂದಿಯ ಗುರುತು ಪತ್ತೆಯಾಗಿದೆ.

ಇನ್ನು ಪೊಲೀಸ್‌ ಠಾಣೆಯ ಮೇಲೆ ಕಲು ತೂರಾಟ ನಡೆಸಿರುವ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ದೃಶ್ಯಾವಳಿಯನ್ನು ಆಧರಿಸಿ ಗಲಭೇಕೋರರನ್ನು ಬಂಧಿಸಲಾಗಿಸಲು ಪೊಲೀಸರು ಮುಂದಾಗಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

7 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

8 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

8 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

8 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

8 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

8 hours ago