ಮೈಸೂರು

ಮುಡಾದಲ್ಲಿ ಅಕ್ರಮ ಆರೋಪ| ನಾವು ಯಾವುದೇ ಅಕ್ರಮ ಮಾಡಿಲ್ಲ: ಜಿಟಿಡಿ ಸ್ಪಷ್ಟನೆ

ಮೈಸೂರು: ಲೋಕಾಯುಕ್ತಕ್ಕೆ ಮುಡಾ ವಿಚಾರವಾಗಿ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ. ಆದರೆ ನಾನಾಗಲಿ ಅಥವಾ ಶಾಸಕ ಜಿ.ಡಿ.ಹರೀಶ್‌ ಗೌಡ ಅವರಾಗಲಿ ಯಾವುದೆ ಅಕ್ರಮ ಮಾಡಿಲ್ಲ ಎಂದು ಶಾಸಕ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ.

ಮೈಸೂರಿನಲ್ಲಿ ಇಂದು(ಫೆಬ್ರವರಿ.1) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಜಮೀನಿನ ಭೂ ಮಾಲೀಕರೇ ಇದಕ್ಕೆ ಸ್ಪಷ್ಟನೆ ನೀಡಿದ್ದಾರೆ. ಮುಡಾದಲ್ಲಿ ಅಕ್ರಮ ಮಾಡಿರೋರ ವಿಚಾರದ ಹೊರಗೆ ಬರುತ್ತಿಲ್ಲ. ಆದರೆ ಅಕ್ರಮ ಮಾಡದೇ ಇರೋರರ ಬಗ್ಗೆ ಪ್ರತಿನಿತ್ಯ ಚರ್ಚೆ ಆಗುತ್ತಿದೆ. ಹೀಗಾಗಿ ಮೈಸೂರು ಮಹಾರಾಜರು ಕಟ್ಟಿದ ಮುಡಾದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿದೆ. ಮುಡಾ ಹಗರಣದ ಬಗ್ಗೆ ಮೈಸೂರು ಲೋಕಾಯುಕ್ತ ಅಧಿಕಾರಿಗಳು ಮತ್ತು ಜಾರಿ ನಿರ್ದೇಶನಾಲಯ ತನಿಖೆ ಮಾಡುತ್ತಿದೆ. ಹೀಗಾಗಿ ಸತ್ಯಾಸತ್ಯತೆ ಹೊರ ಬರಬೇಕಿದೆ. ಆ ನಂತರ ಮುಡಾ ಅಭಿವೃದ್ಧಿ ಆಗಬೇಕು ಎಂದು ಹೇಳಿದರು.

ಇದೇ ವೇಳೆ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ ಕಿರುಕುಳ ವಿಚಾರವಾಗಿ ಮಾತನಾಡಿದ ಅವರು, ಕಳೆದ ವರ್ಷಗಳಲ್ಲಿ ಭೀಕರವಾಗಿ ಕಾಡಿದ ಕೊರೋನಾ ವೈರಸ್‌ನಂತೆ ಮೈಕ್ರೋ ಫೈನಾನ್ಸ್‌ಗಳು ಇದೀಗ ರಾಜ್ಯಾದಾದ್ಯಂತ ಹರಡಿದೆ. ಅಲ್ಲದೇ ಈಗ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ತರಲು ಮುಂದಾಗಿದೆ. ಹೀಗಾಗಿ ನಾವು ಸರ್ಕಾರದ ಈ ನಿರ್ಧಾರವನ್ನು ಸ್ವಾಗತ ಮಾಡಲಿದ್ದು, ಮೈಕ್ರೋ ಫೈನಾನ್ಸ್‌ಗಳಿಗೆ ಕಡಿವಾಣ ಹಾಕಬೇಕು ಎಂದರು.

ಅರ್ಚನ ಎಸ್‌ ಎಸ್

Recent Posts

ಚಿರತೆ ಸೆರೆ | ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…

6 hours ago

ಮೈಸೂರಲ್ಲಿ ಡ್ರಗ್ಸ್‌ ಉತ್ಪಾದನೆ ಶಂಕೆ : ಓರ್ವನ ಬಂಧನ

ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…

7 hours ago

ತೇಗದ ಮರ ಅಕ್ರಮ ಕಟಾವು : ಓರ್ವ ಬಂಧನ

ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…

7 hours ago

ಮೈಸೂರು ವಿ.ವಿ | ಯುಜಿಸಿ ಉದ್ದೇಶಿತ ಹೊಸ ನಿಯಾಮವಳಿ ಜಾರಿಗೆ ಒತ್ತಾಯ

ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…

8 hours ago

ಸರ್ಕಾರಿ ನೌಕರರಿಗೆ ತಿಂಗಳಿಗೊಮ್ಮೆ ಖಾದಿ ಧಿರಿಸು ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…

9 hours ago

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ : ಯುಜಿಸಿ ನಿಯಮಾವಳಿಗೆ ʻಸುಪ್ರೀಂʼ ತಡೆ

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…

9 hours ago