ಮೈಸೂರು

ಮುಡಾದಲ್ಲಿ ಅಕ್ರಮ ಆರೋಪ| ನಾವು ಯಾವುದೇ ಅಕ್ರಮ ಮಾಡಿಲ್ಲ: ಜಿಟಿಡಿ ಸ್ಪಷ್ಟನೆ

ಮೈಸೂರು: ಲೋಕಾಯುಕ್ತಕ್ಕೆ ಮುಡಾ ವಿಚಾರವಾಗಿ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ. ಆದರೆ ನಾನಾಗಲಿ ಅಥವಾ ಶಾಸಕ ಜಿ.ಡಿ.ಹರೀಶ್‌ ಗೌಡ ಅವರಾಗಲಿ ಯಾವುದೆ ಅಕ್ರಮ ಮಾಡಿಲ್ಲ ಎಂದು ಶಾಸಕ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ.

ಮೈಸೂರಿನಲ್ಲಿ ಇಂದು(ಫೆಬ್ರವರಿ.1) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಜಮೀನಿನ ಭೂ ಮಾಲೀಕರೇ ಇದಕ್ಕೆ ಸ್ಪಷ್ಟನೆ ನೀಡಿದ್ದಾರೆ. ಮುಡಾದಲ್ಲಿ ಅಕ್ರಮ ಮಾಡಿರೋರ ವಿಚಾರದ ಹೊರಗೆ ಬರುತ್ತಿಲ್ಲ. ಆದರೆ ಅಕ್ರಮ ಮಾಡದೇ ಇರೋರರ ಬಗ್ಗೆ ಪ್ರತಿನಿತ್ಯ ಚರ್ಚೆ ಆಗುತ್ತಿದೆ. ಹೀಗಾಗಿ ಮೈಸೂರು ಮಹಾರಾಜರು ಕಟ್ಟಿದ ಮುಡಾದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿದೆ. ಮುಡಾ ಹಗರಣದ ಬಗ್ಗೆ ಮೈಸೂರು ಲೋಕಾಯುಕ್ತ ಅಧಿಕಾರಿಗಳು ಮತ್ತು ಜಾರಿ ನಿರ್ದೇಶನಾಲಯ ತನಿಖೆ ಮಾಡುತ್ತಿದೆ. ಹೀಗಾಗಿ ಸತ್ಯಾಸತ್ಯತೆ ಹೊರ ಬರಬೇಕಿದೆ. ಆ ನಂತರ ಮುಡಾ ಅಭಿವೃದ್ಧಿ ಆಗಬೇಕು ಎಂದು ಹೇಳಿದರು.

ಇದೇ ವೇಳೆ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ ಕಿರುಕುಳ ವಿಚಾರವಾಗಿ ಮಾತನಾಡಿದ ಅವರು, ಕಳೆದ ವರ್ಷಗಳಲ್ಲಿ ಭೀಕರವಾಗಿ ಕಾಡಿದ ಕೊರೋನಾ ವೈರಸ್‌ನಂತೆ ಮೈಕ್ರೋ ಫೈನಾನ್ಸ್‌ಗಳು ಇದೀಗ ರಾಜ್ಯಾದಾದ್ಯಂತ ಹರಡಿದೆ. ಅಲ್ಲದೇ ಈಗ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ತರಲು ಮುಂದಾಗಿದೆ. ಹೀಗಾಗಿ ನಾವು ಸರ್ಕಾರದ ಈ ನಿರ್ಧಾರವನ್ನು ಸ್ವಾಗತ ಮಾಡಲಿದ್ದು, ಮೈಕ್ರೋ ಫೈನಾನ್ಸ್‌ಗಳಿಗೆ ಕಡಿವಾಣ ಹಾಕಬೇಕು ಎಂದರು.

ಅರ್ಚನ ಎಸ್‌ ಎಸ್

Recent Posts

ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ ; ಸಾರ್ವಜನಿಕರಲ್ಲಿ ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ!

ಮೈಸೂರು : ನಿರ್ದಿಷ್ಟ ಬ್ರಾಂಡ್‌ನ ಮೊಟ್ಟೆಗಳಲ್ಲಿ ಕ್ಯಾನ್ಸರ್‌ಗೆ ಕಾರಣವಾಗುವ 'ಜಿನೋಟಾಕ್ಸಿಕ್ ಅಂಶ' ಪತ್ತೆಯಾಗಿದೆ ಎಂದು ಹೇಳುವ ವೈರಲ್ ವಿಡಿಯೋ ಇದೀಗ…

4 seconds ago

ಶಿವಾಜಿ ಮುಸ್ಲಿಂರ ವಿರೋಧಿಯಾಗಿರಲಿಲ್ಲ :ಸಚಿವ ಕಾರ್ಮಿಕ ಸಂತೋಷ ಲಾಡ್‌

ಬೆಳಗಾವಿ : ಮರಾಠರು ಮುಸ್ಲಿಂ ವಿರೋಧಿ ಅಂತ‌ ಹಣೆಪಟ್ಟಿ ಕಟ್ಟಿಕೊಂಡಿದ್ದೇವೆ. ನಾವು ಮೊಘಲರ ವಿರುದ್ಧ ಇದ್ದೆವು. ಆದರೆ ಮುಸ್ಲಿಂರ ವಿರೋಧಿಗಳಾಗಿರಲಿಲ್ಲ.…

39 mins ago

ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೂ ಆದ್ಯತೆ ನೀಡಬೇಕು : ಸಂಸದ ಯದುವೀರ್‌

ಮೈಸೂರು : ‘ಹಳೆಯ ಮೈಸೂರು ರಕ್ಷಣೆಯ ನಿಟ್ಟಿನಲ್ಲಿ ಕಾಲಕಾಲಕ್ಕೆ ಸೂಕ್ತ ಕ್ರಮ ವಹಿಸಬೇಕು. ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೂ ಆದ್ಯತೆ ನೀಡಬೇಕು.…

2 hours ago

ಬಾಲವಿಕಾಸ ಅಕಾಡೆಮಿಯ ಬಾಲಗೌರವ ಪ್ರಶಸ್ತಿ : ಮೈಸೂರಿನ ತಬಲಾ ಬಾಲ ಪ್ರತಿಭೆ ಪಂಚಮಿ ಬಿದನೂರು ಸೇರಿದಂತೆ ಅನೇಕರಿಗೆ ಪ್ರಶಸ್ತಿ

ಬೆಳಗಾವಿ : ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ ಇದೇ ಪ್ರಥಮಬಾರಿಗೆ ಬೆಳಗಾವಿ ಸುವರ್ಣ ವಿಧಾನಸೌಧದ ಉತ್ತರ ಪ್ರವೇಶ ದ್ವಾರದ ಬಳಿ ಇರುವ…

2 hours ago

ಅಕ್ರಮ ಗಾಂಜಾ ಮಾರಾಟ : ಮಹಿಳೆ ಪೊಲೀಸ್ ವಶಕ್ಕೆ

ಹನೂರು : ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆಯೋರ್ವಳನ್ನು ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಬಂಧಿಸಿರುವ ಘಟನೆ ಜರುಗಿದೆ. ಹನೂರು…

3 hours ago

ಮತಗಳ್ಳತನದ ಹೋರಾಟದಲ್ಲಿ ರಾಜಕೀಯ ಉದ್ದೇಶವಿಲ್ಲ : ಡಿ.ಕೆ.ಶಿವಕುಮಾರ್

ಹೊಸದಿಲ್ಲಿ : ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಾವು ಮತಕಳ್ಳತನದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಇದರಲ್ಲಿ…

4 hours ago