ಮೈಸೂರು: ಲೋಕಾಯುಕ್ತಕ್ಕೆ ಮುಡಾ ವಿಚಾರವಾಗಿ ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ. ಆದರೆ ನಾನಾಗಲಿ ಅಥವಾ ಶಾಸಕ ಜಿ.ಡಿ.ಹರೀಶ್ ಗೌಡ ಅವರಾಗಲಿ ಯಾವುದೆ ಅಕ್ರಮ ಮಾಡಿಲ್ಲ ಎಂದು ಶಾಸಕ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ.
ಮೈಸೂರಿನಲ್ಲಿ ಇಂದು(ಫೆಬ್ರವರಿ.1) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಜಮೀನಿನ ಭೂ ಮಾಲೀಕರೇ ಇದಕ್ಕೆ ಸ್ಪಷ್ಟನೆ ನೀಡಿದ್ದಾರೆ. ಮುಡಾದಲ್ಲಿ ಅಕ್ರಮ ಮಾಡಿರೋರ ವಿಚಾರದ ಹೊರಗೆ ಬರುತ್ತಿಲ್ಲ. ಆದರೆ ಅಕ್ರಮ ಮಾಡದೇ ಇರೋರರ ಬಗ್ಗೆ ಪ್ರತಿನಿತ್ಯ ಚರ್ಚೆ ಆಗುತ್ತಿದೆ. ಹೀಗಾಗಿ ಮೈಸೂರು ಮಹಾರಾಜರು ಕಟ್ಟಿದ ಮುಡಾದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿದೆ. ಮುಡಾ ಹಗರಣದ ಬಗ್ಗೆ ಮೈಸೂರು ಲೋಕಾಯುಕ್ತ ಅಧಿಕಾರಿಗಳು ಮತ್ತು ಜಾರಿ ನಿರ್ದೇಶನಾಲಯ ತನಿಖೆ ಮಾಡುತ್ತಿದೆ. ಹೀಗಾಗಿ ಸತ್ಯಾಸತ್ಯತೆ ಹೊರ ಬರಬೇಕಿದೆ. ಆ ನಂತರ ಮುಡಾ ಅಭಿವೃದ್ಧಿ ಆಗಬೇಕು ಎಂದು ಹೇಳಿದರು.
ಇದೇ ವೇಳೆ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ವಿಚಾರವಾಗಿ ಮಾತನಾಡಿದ ಅವರು, ಕಳೆದ ವರ್ಷಗಳಲ್ಲಿ ಭೀಕರವಾಗಿ ಕಾಡಿದ ಕೊರೋನಾ ವೈರಸ್ನಂತೆ ಮೈಕ್ರೋ ಫೈನಾನ್ಸ್ಗಳು ಇದೀಗ ರಾಜ್ಯಾದಾದ್ಯಂತ ಹರಡಿದೆ. ಅಲ್ಲದೇ ಈಗ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ತರಲು ಮುಂದಾಗಿದೆ. ಹೀಗಾಗಿ ನಾವು ಸರ್ಕಾರದ ಈ ನಿರ್ಧಾರವನ್ನು ಸ್ವಾಗತ ಮಾಡಲಿದ್ದು, ಮೈಕ್ರೋ ಫೈನಾನ್ಸ್ಗಳಿಗೆ ಕಡಿವಾಣ ಹಾಕಬೇಕು ಎಂದರು.
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…