ಶ್ರೀರಂಗಪಟ್ಟಣ : ಜಿ20 ಶೃಂಗಸಭೆಯ ಪ್ರತಿನಿಧಿಗಳು ಶ್ರೀರಂಗಪಟ್ಟಣ ಪ್ರವಾಸ ಕೈಗೊಂಡಿರುವ ಹಿನ್ನಲೆಯಲ್ಲಿ ದೇಶ-ವಿದೇಶದ ಪ್ರತಿನಿಧಿಗಳ ಸ್ವಾಗತಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಮೈಸೂರಿನಲ್ಲಿ ಜಿ20 ಶೃಂಗಸಭೆಯ ಪೂರ್ವಭಾವಿ ಸಭೆ ನಡೆಯಲಿದ್ದು, ಶ್ರೀರಂಗಪಟ್ಟಣ ತಾಲೂಕಿನ ವಿವಿಧೆಡೆಗೆ ಜಿ20 ಶೃಂಗಸಭೆ ಪ್ರತಿನಿಧಿಗಳು ಭೇಟಿ ನೀಡಲಿದ್ದಾರೆ.
ಸಂಜೆ 6 ಗಂಟೆಗೆ ಶ್ರೀರಂಗಪಟ್ಟಣದ ದರಿಯಾ ದೌಲತ್, ರಂಗನಾಥ ಸ್ವಾಮಿ ದೇಗುಲ, ಕೆಆರ್ ಎಸ್ ಬೃಂದಾವನ ಗಾರ್ಡನ್ ಗೆ ಭೇಟಿ ನೀಡಲಿದ್ದಾರೆ. ದರಿಯಾ ದೌಲತ್ ಹಾಗೂ ಕೆಆರ್ ಎಸ್ ನಲ್ಲಿ ಗಣ್ಯರನ್ನು ಸ್ವಾಗತಿಸಲು ಕಲಾ ತಂಡಗಳನ್ನು ನಿಯೋಜನೆ ಮಾಡಲಾಗಿದೆ.
ಮಂಗಳವಾರದಿಂದ ಮೈಸೂರಿನಲ್ಲಿ ಜಿ20 ಶೃಂಗಸಭೆಯ ಪೂರ್ವಭಾವಿ ಸಭೆ ನಡೆಯುತ್ತಿದ್ದು, ಈ ಸಭೆಯು ಮೂರು ದಿನಗಳ ಕಾಲ ನಡೆಯಲಿದೆ.
ಜಿ20 ಶೃಂಗಸಭೆಯ ಸದ್ಯರು ಭೇಟಿ ನೀಡುವ ಪ್ರವಾಸಿ ತಾಣಗಳಲ್ಲಿ ಬಿಗಿ ಪೊಲೀಸ್ ಭದ್ರತೆ ಕೈಗೊಂಡಿದ್ದು, ಪ್ರವಾಸಿಗರಿಗೆ ಇಂದು ಮಧ್ಯಾಹ್ನದ ನಂತರ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧ ವಿಧಿಸಲಾಗಿದೆ.
ಮಂಡ್ಯ: ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…
ಬೆಂಗಳೂರು: ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ಸಿನಿಮಾ ಟ್ರೈಲರ್ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್ ಕಾರ್ತಿಕೇಯ-ಸುದೀಪ್ ಕಾಂಬಿನೇಷನ್ನಲ್ಲಿ ಮೂಡಿಬಂದಿರುವ…