ಶ್ರೀರಂಗಪಟ್ಟಣ : ಜಿ20 ಶೃಂಗಸಭೆಯ ಪ್ರತಿನಿಧಿಗಳು ಶ್ರೀರಂಗಪಟ್ಟಣ ಪ್ರವಾಸ ಕೈಗೊಂಡಿರುವ ಹಿನ್ನಲೆಯಲ್ಲಿ ದೇಶ-ವಿದೇಶದ ಪ್ರತಿನಿಧಿಗಳ ಸ್ವಾಗತಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಮೈಸೂರಿನಲ್ಲಿ ಜಿ20 ಶೃಂಗಸಭೆಯ ಪೂರ್ವಭಾವಿ ಸಭೆ ನಡೆಯಲಿದ್ದು, ಶ್ರೀರಂಗಪಟ್ಟಣ ತಾಲೂಕಿನ ವಿವಿಧೆಡೆಗೆ ಜಿ20 ಶೃಂಗಸಭೆ ಪ್ರತಿನಿಧಿಗಳು ಭೇಟಿ ನೀಡಲಿದ್ದಾರೆ.
ಸಂಜೆ 6 ಗಂಟೆಗೆ ಶ್ರೀರಂಗಪಟ್ಟಣದ ದರಿಯಾ ದೌಲತ್, ರಂಗನಾಥ ಸ್ವಾಮಿ ದೇಗುಲ, ಕೆಆರ್ ಎಸ್ ಬೃಂದಾವನ ಗಾರ್ಡನ್ ಗೆ ಭೇಟಿ ನೀಡಲಿದ್ದಾರೆ. ದರಿಯಾ ದೌಲತ್ ಹಾಗೂ ಕೆಆರ್ ಎಸ್ ನಲ್ಲಿ ಗಣ್ಯರನ್ನು ಸ್ವಾಗತಿಸಲು ಕಲಾ ತಂಡಗಳನ್ನು ನಿಯೋಜನೆ ಮಾಡಲಾಗಿದೆ.
ಮಂಗಳವಾರದಿಂದ ಮೈಸೂರಿನಲ್ಲಿ ಜಿ20 ಶೃಂಗಸಭೆಯ ಪೂರ್ವಭಾವಿ ಸಭೆ ನಡೆಯುತ್ತಿದ್ದು, ಈ ಸಭೆಯು ಮೂರು ದಿನಗಳ ಕಾಲ ನಡೆಯಲಿದೆ.
ಜಿ20 ಶೃಂಗಸಭೆಯ ಸದ್ಯರು ಭೇಟಿ ನೀಡುವ ಪ್ರವಾಸಿ ತಾಣಗಳಲ್ಲಿ ಬಿಗಿ ಪೊಲೀಸ್ ಭದ್ರತೆ ಕೈಗೊಂಡಿದ್ದು, ಪ್ರವಾಸಿಗರಿಗೆ ಇಂದು ಮಧ್ಯಾಹ್ನದ ನಂತರ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧ ವಿಧಿಸಲಾಗಿದೆ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…