ಶ್ರೀರಂಗಪಟ್ಟಣ : ಜಿ20 ಶೃಂಗಸಭೆಯ ಪ್ರತಿನಿಧಿಗಳು ಶ್ರೀರಂಗಪಟ್ಟಣ ಪ್ರವಾಸ ಕೈಗೊಂಡಿರುವ ಹಿನ್ನಲೆಯಲ್ಲಿ ದೇಶ-ವಿದೇಶದ ಪ್ರತಿನಿಧಿಗಳ ಸ್ವಾಗತಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಮೈಸೂರಿನಲ್ಲಿ ಜಿ20 ಶೃಂಗಸಭೆಯ ಪೂರ್ವಭಾವಿ ಸಭೆ ನಡೆಯಲಿದ್ದು, ಶ್ರೀರಂಗಪಟ್ಟಣ ತಾಲೂಕಿನ ವಿವಿಧೆಡೆಗೆ ಜಿ20 ಶೃಂಗಸಭೆ ಪ್ರತಿನಿಧಿಗಳು ಭೇಟಿ ನೀಡಲಿದ್ದಾರೆ.
ಸಂಜೆ 6 ಗಂಟೆಗೆ ಶ್ರೀರಂಗಪಟ್ಟಣದ ದರಿಯಾ ದೌಲತ್, ರಂಗನಾಥ ಸ್ವಾಮಿ ದೇಗುಲ, ಕೆಆರ್ ಎಸ್ ಬೃಂದಾವನ ಗಾರ್ಡನ್ ಗೆ ಭೇಟಿ ನೀಡಲಿದ್ದಾರೆ. ದರಿಯಾ ದೌಲತ್ ಹಾಗೂ ಕೆಆರ್ ಎಸ್ ನಲ್ಲಿ ಗಣ್ಯರನ್ನು ಸ್ವಾಗತಿಸಲು ಕಲಾ ತಂಡಗಳನ್ನು ನಿಯೋಜನೆ ಮಾಡಲಾಗಿದೆ.
ಮಂಗಳವಾರದಿಂದ ಮೈಸೂರಿನಲ್ಲಿ ಜಿ20 ಶೃಂಗಸಭೆಯ ಪೂರ್ವಭಾವಿ ಸಭೆ ನಡೆಯುತ್ತಿದ್ದು, ಈ ಸಭೆಯು ಮೂರು ದಿನಗಳ ಕಾಲ ನಡೆಯಲಿದೆ.
ಜಿ20 ಶೃಂಗಸಭೆಯ ಸದ್ಯರು ಭೇಟಿ ನೀಡುವ ಪ್ರವಾಸಿ ತಾಣಗಳಲ್ಲಿ ಬಿಗಿ ಪೊಲೀಸ್ ಭದ್ರತೆ ಕೈಗೊಂಡಿದ್ದು, ಪ್ರವಾಸಿಗರಿಗೆ ಇಂದು ಮಧ್ಯಾಹ್ನದ ನಂತರ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧ ವಿಧಿಸಲಾಗಿದೆ.
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…