ಮೈಸೂರು

ಅರಣ್ಯಭವನದಲ್ಲಿ ಗಜಪಡೆ ರಿಲ್ಯಾಕ್ಸ್‌ : ಆ.10ಕ್ಕೆ ಅರಮನೆ ಪ್ರವೇಶ

ಮೈಸೂರು : ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿಯಲ್ಲಿ ಭಾಗವಹಿಸುವ ಗಜಪಡೆಯ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಒಂಬತ್ತು ಆನೆಗಳ ಮೊದಲ ತಂಡ ಈಗಾಗಲೇ ಮೈಸೂರು ನಗರಕ್ಕೆ ಆಗಮಿಸಿದ್ದು, ಅರಣ್ಯ ಭವನದಲ್ಲಿ ಬೀಡುಬಿಟ್ಟಿವೆ.

ಆ.10ರ ಭಾನುವಾರ ಸಂಜೆ 6.45ರಿಂದ 7.20ರ ವೇಳೆಗೆ ಗಜಪಡೆಯು ಅರಮನೆ ಪೂರ್ವ ದಿಕ್ಕಿನಲ್ಲಿರುವ ಜಯಮಾರ್ತಾಂಡ ದ್ವಾರದಿಂದ ಅರಮನೆ ಆವರಣ ಪ್ರವೇಶಿಸಲಿದೆ. ಈಗಾಗಲೇ ಅರಮನೆ ಆವರಣದಲ್ಲಿ ಆನೆಗಳು, ಮಾವುತರು, ಕಾವಾಡಿಗಳು ಮತ್ತವರ ಕುಟುಂಬಗಳ ವಾಸ್ತವ್ಯಕ್ಕೆ ಅಗತ್ಯ ಸಿದ್ಧತೆ ಮಾಡಲಾಗಿದೆ. ದಸರಾ ಗಜಪಯಣ ಕಾರ್ಯಕ್ರಮ ವೀಕ್ಷಿಸಲು ಅಪಾರ ಸಂಖ್ಯೆಯಲ್ಲಿ ಜನತೆ ನೆರೆದಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಜಿಲ್ಲಾಡಳಿತ ಸಾರ್ವಜನಿಕರ ಅನುಕೂಲಕ್ಕಾಗಿ ಆನೆಗಳ ಅರಮನೆ ಪ್ರವೇಶವನ್ನು ಆ.8ರಿಂದ ಆ.10ಕ್ಕೆ ಮುಂದೂಡಿದೆ.

ಈ ಬಗ್ಗೆ ಮಾತನಾಡಿದ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ಅಂದು ಭಾನುವಾರವಾಗಿರುವುದರಿಂದ ಸಾರ್ವಜನಿಕರು ಹಾಗೂ ಪ್ರವಾಸಿಗರೂ ಗಜಪಡೆ ಅರಮನೆ ಆವರಣ ಪ್ರವೇಶಿಸುವುದನ್ನು ಕಣ್ತುಂಬಿಕೊಳ್ಳಬಹುದು. ಈ ಹಿನ್ನೆಲೆಯಲ್ಲಿ ದಿನಾಂಕ ಬದಲಾವಣೆ ಮಾಡಲಾಗಿದೆ ಎಂದರು.

ಭಾನುವಾರ ಸಂಜೆ ಗಜಪಡೆ ಅರಮನೆ ಪ್ರವೇಶಿಸುವ ವೇಳೆಗೆ ಸರಿಯಾಗಿ ಅರಮನೆ ದೀಪಾಲಂಕಾರ ಕಂಗೊಳಿಸಲಿದೆ. ದೀಪಾಲಂಕಾರದ ಸೌಂದರ್ಯದ ನಡುವೆಯೇ ಪ್ರವಾಸಿಗರಿಗೆ ಆನೆಗಳ ಅರಮನೆ ಆವರಣ ಪ್ರವೇಶದ ಸೊಬಗನ್ನು ಸವಿಯುವ ಅವಕಾಶ ಲಭಿಸುತ್ತದೆ ಎಂದು ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್.ಸುಬ್ರಮಣ್ಯ ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಇಂಡಿಗೋ ಬಿಕ್ಕಟ್ಟಿನ ನಡುವೆ ಸಚಿವರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ

ನವದೆಹಲಿ: ಇಂಡಿಗೋ ವಿಮಾನಯಾ ಸಂಸ್ಥೆಗಳ ಆರ್ಥಿಕ ಬಿಕ್ಕಟ್ಟಿನ ನಡುವೆ ಕಾನೂನು ಮತ್ತು ನಿಯಮಗಳು ಜನರಿಗೆ ಹೊರೆಯಾಗದಂತೆ ನೋಡಿಕೊಳ್ಳುವಂತೆ ಪ್ರಧಾನಿ ನರೇಂದ್ರ…

6 mins ago

ವಿಶ್ವದ 2ನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜ ಅನಾವರಣಗೊಳಿಸಿದ ಸಿಎಂ

ಬೆಳಗಾವಿ: ಸುವರ್ಣಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಸಿಎಂ ಸಿದ್ದರಾಮಯ್ಯ ಅವರಿಂದು ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜವನ್ನು ಅನಾವರಣಗೊಳಿಸಿದರು.…

32 mins ago

ನಟ ರಿಷಬ್‌ ಶೆಟ್ಟಿ ತೊಡೆ ಮೇಲೆ ಮಲಗಿದ್ದು ಪಂಜುರ್ಲಿಯಲ್ಲ ನರ್ತಕ: ಸೋಷಿಯಲ್‌ ಮೀಡಿಯಾದಲ್ಲಿ ಆಕ್ರೋಶ

ಬೆಂಗಳೂರು: ಇತ್ತೀಚೆಗೆ ಮಂಗಳೂರಿನಲ್ಲಿ ಹರಕೆ ಕೋಲಾ ಮಾಡಿಸಿದ್ದ ರಿಷಬ್‌ ಶೆಟ್ಟಿ ತೊಡೆ ಮೇಲೆ ದೈವಾರಾಧಕ ಮಲಗಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ.…

35 mins ago

ಇಂಡಿಗೋ ಏರ್‌ಲೈನ್ಸ್‌ಗೆ ಕೇಂದ್ರ ಸರ್ಕಾರದಿಂದ ಮೂಗುದಾರ: ಚಳಿಗಾಲ ವೇಳಾಪಟ್ಟಿ ಕಡಿತ

ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೋದ ಕಾರ್ಯಾಚರಣೆಯಲ್ಲಿ ಅಸ್ತವ್ಯಸ್ತ ಉಂಟಾಗಿದ್ದು, ಪ್ರಯಾಣಿಕರು ಹಿಡಿಶಾಪ ಹಾಕುತ್ತಿದ್ದಾರೆ. ಕಳೆದ ಒಂದು ವಾರದಿಂದ…

47 mins ago

ಬಿಜೆಪಿ ಹೋರಾಟ ನಡೆಸಬೇಕಾಗಿದ್ದು ಕೇಂದ್ರ ಸರ್ಕಾರದ ವಿರುದ್ಧ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನ ಎರಡನೇ ದಿನಕ್ಕೆ ಕಾಲಿಟ್ಟಿದೆ. ರಾಜ್ಯ ಸರ್ಕಾರದ ವಿರುದ್ಧ ಇಂದು 9ಕ್ಕೂ ಹೆಚ್ಚು…

1 hour ago

ಶಾಲಾ ಬಸ್ ತಡೆದು ಬಾಲಕಿಯನ್ನು ವಶಕ್ಕೆ ನೀಡುವಂತೆ ಕಿರಿಕ್: ಪುಂಡರಿಬ್ಬರ ಬಂಧನ

ಕೆ.ಆರ್.ಪೇಟೆ: ಗಾಂಜಾ ಮತ್ತು ಮಧ್ಯ ಸೇವಿಸಿದ ಅಮಲಿನಲ್ಲಿ ಶಾಲಾ ಬಸ್ ತಡೆದು, ಅಪ್ರಾಪ್ತ ಬಾಲಕಿಯನ್ನು ತಮ್ಮ ವಶಕ್ಕೆ ನೀಡುವಂತೆ ಕಿರಿಕ್…

2 hours ago