ಮೈಸೂರು

ಅರಣ್ಯಭವನದಲ್ಲಿ ಗಜಪಡೆ ರಿಲ್ಯಾಕ್ಸ್‌ : ಆ.10ಕ್ಕೆ ಅರಮನೆ ಪ್ರವೇಶ

ಮೈಸೂರು : ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿಯಲ್ಲಿ ಭಾಗವಹಿಸುವ ಗಜಪಡೆಯ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಒಂಬತ್ತು ಆನೆಗಳ ಮೊದಲ ತಂಡ ಈಗಾಗಲೇ ಮೈಸೂರು ನಗರಕ್ಕೆ ಆಗಮಿಸಿದ್ದು, ಅರಣ್ಯ ಭವನದಲ್ಲಿ ಬೀಡುಬಿಟ್ಟಿವೆ.

ಆ.10ರ ಭಾನುವಾರ ಸಂಜೆ 6.45ರಿಂದ 7.20ರ ವೇಳೆಗೆ ಗಜಪಡೆಯು ಅರಮನೆ ಪೂರ್ವ ದಿಕ್ಕಿನಲ್ಲಿರುವ ಜಯಮಾರ್ತಾಂಡ ದ್ವಾರದಿಂದ ಅರಮನೆ ಆವರಣ ಪ್ರವೇಶಿಸಲಿದೆ. ಈಗಾಗಲೇ ಅರಮನೆ ಆವರಣದಲ್ಲಿ ಆನೆಗಳು, ಮಾವುತರು, ಕಾವಾಡಿಗಳು ಮತ್ತವರ ಕುಟುಂಬಗಳ ವಾಸ್ತವ್ಯಕ್ಕೆ ಅಗತ್ಯ ಸಿದ್ಧತೆ ಮಾಡಲಾಗಿದೆ. ದಸರಾ ಗಜಪಯಣ ಕಾರ್ಯಕ್ರಮ ವೀಕ್ಷಿಸಲು ಅಪಾರ ಸಂಖ್ಯೆಯಲ್ಲಿ ಜನತೆ ನೆರೆದಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಜಿಲ್ಲಾಡಳಿತ ಸಾರ್ವಜನಿಕರ ಅನುಕೂಲಕ್ಕಾಗಿ ಆನೆಗಳ ಅರಮನೆ ಪ್ರವೇಶವನ್ನು ಆ.8ರಿಂದ ಆ.10ಕ್ಕೆ ಮುಂದೂಡಿದೆ.

ಈ ಬಗ್ಗೆ ಮಾತನಾಡಿದ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ಅಂದು ಭಾನುವಾರವಾಗಿರುವುದರಿಂದ ಸಾರ್ವಜನಿಕರು ಹಾಗೂ ಪ್ರವಾಸಿಗರೂ ಗಜಪಡೆ ಅರಮನೆ ಆವರಣ ಪ್ರವೇಶಿಸುವುದನ್ನು ಕಣ್ತುಂಬಿಕೊಳ್ಳಬಹುದು. ಈ ಹಿನ್ನೆಲೆಯಲ್ಲಿ ದಿನಾಂಕ ಬದಲಾವಣೆ ಮಾಡಲಾಗಿದೆ ಎಂದರು.

ಭಾನುವಾರ ಸಂಜೆ ಗಜಪಡೆ ಅರಮನೆ ಪ್ರವೇಶಿಸುವ ವೇಳೆಗೆ ಸರಿಯಾಗಿ ಅರಮನೆ ದೀಪಾಲಂಕಾರ ಕಂಗೊಳಿಸಲಿದೆ. ದೀಪಾಲಂಕಾರದ ಸೌಂದರ್ಯದ ನಡುವೆಯೇ ಪ್ರವಾಸಿಗರಿಗೆ ಆನೆಗಳ ಅರಮನೆ ಆವರಣ ಪ್ರವೇಶದ ಸೊಬಗನ್ನು ಸವಿಯುವ ಅವಕಾಶ ಲಭಿಸುತ್ತದೆ ಎಂದು ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್.ಸುಬ್ರಮಣ್ಯ ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…

32 mins ago

2028ಕ್ಕೆ ಸಿಎಂ ವಿಚಾರ: ಎಚ್‌ಡಿಕೆ ಹಗಲು ಕನಸು ಕಾಣುತ್ತಿದ್ದಾರೆ ಎಂದ ಜಮೀರ್‌ ಅಹಮ್ಮದ್‌ ಖಾನ್‌

ದಾವಣಗೆರೆ: 2028ಕ್ಕೆ ಎಚ್.ಡಿ.ಕುಮಾರಸ್ವಾಮಿ ಸಿಎಂ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ವ್ಯಂಗ್ಯವಾಡಿದ್ದಾರೆ. ಈ ಕುರಿತು…

37 mins ago

ಲಕ್ಕುಂಡಿ| ಪ್ರಜ್ವಲ್‌ ರಿತ್ತಿ ಕುಟುಂಬಕ್ಕೆ ಸರ್ಕಾರದಿಂದ ಬಿಗ್‌ ಗಿಫ್ಟ್‌

ಗದಗ: ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಪತ್ತೆಹಚ್ಚಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್‌ ರಿತ್ತಿ ಕುಟುಂಬಕ್ಕೆ…

39 mins ago

ಟೂರಿಸ್ಟ್‌ ಬೋಟ್‌ ಮುಳುಗಿ ಇಬ್ಬರು ಸಾವು ಪ್ರಕರಣ: ತನಿಖೆಗೆ ಸೂಚಿಸಿದ ಲಕ್ಷ್ಮೀ ಹೆಬ್ಬಾಳ್ಕರ್‌

ಉಡುಪಿ: ಅರಬ್ಬಿ ಸಮುದ್ರದಲ್ಲಿ ಟೂರಿಸ್ಟ್‌ ಬೋಟ್‌ ಮುಳುಗಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು…

41 mins ago

ವಾರಕ್ಕೆ 5 ದಿನ ಮಾತ್ರ ಕೆಲಸಕ್ಕೆ ಆಗ್ರಹಿಸಿ ಇಂದು ಬ್ಯಾಂಕ್‌ ನೌಕರರ ಮುಷ್ಕರ

ಬೆಂಗಳೂರು: ಬ್ಯಾಂಕಿಂಗ್‌ ಕ್ಷೇತ್ರದ ನೌಕರರಿಗೆ ವಾರಕ್ಕೆ ಐದು ದಿನ ಮಾತ್ರ ಕೆಲಸದ ದಿನವಾಗಿಸಬೇಕೆಂಬುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ…

43 mins ago

ಉಡುಪಿ ಮಲ್ಪೆ ಬಳಿ ದೋಣಿ ಪಲ್ಟಿ: ಮೈಸೂರಿನ ಇಬ್ಬರು ಸಾವು

ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್‌ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…

12 hours ago