ಮೈಸೂರು

ಅರಣ್ಯಭವನದಲ್ಲಿ ಗಜಪಡೆ ರಿಲ್ಯಾಕ್ಸ್‌ : ಆ.10ಕ್ಕೆ ಅರಮನೆ ಪ್ರವೇಶ

ಮೈಸೂರು : ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿಯಲ್ಲಿ ಭಾಗವಹಿಸುವ ಗಜಪಡೆಯ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಒಂಬತ್ತು ಆನೆಗಳ ಮೊದಲ ತಂಡ ಈಗಾಗಲೇ ಮೈಸೂರು ನಗರಕ್ಕೆ ಆಗಮಿಸಿದ್ದು, ಅರಣ್ಯ ಭವನದಲ್ಲಿ ಬೀಡುಬಿಟ್ಟಿವೆ.

ಆ.10ರ ಭಾನುವಾರ ಸಂಜೆ 6.45ರಿಂದ 7.20ರ ವೇಳೆಗೆ ಗಜಪಡೆಯು ಅರಮನೆ ಪೂರ್ವ ದಿಕ್ಕಿನಲ್ಲಿರುವ ಜಯಮಾರ್ತಾಂಡ ದ್ವಾರದಿಂದ ಅರಮನೆ ಆವರಣ ಪ್ರವೇಶಿಸಲಿದೆ. ಈಗಾಗಲೇ ಅರಮನೆ ಆವರಣದಲ್ಲಿ ಆನೆಗಳು, ಮಾವುತರು, ಕಾವಾಡಿಗಳು ಮತ್ತವರ ಕುಟುಂಬಗಳ ವಾಸ್ತವ್ಯಕ್ಕೆ ಅಗತ್ಯ ಸಿದ್ಧತೆ ಮಾಡಲಾಗಿದೆ. ದಸರಾ ಗಜಪಯಣ ಕಾರ್ಯಕ್ರಮ ವೀಕ್ಷಿಸಲು ಅಪಾರ ಸಂಖ್ಯೆಯಲ್ಲಿ ಜನತೆ ನೆರೆದಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಜಿಲ್ಲಾಡಳಿತ ಸಾರ್ವಜನಿಕರ ಅನುಕೂಲಕ್ಕಾಗಿ ಆನೆಗಳ ಅರಮನೆ ಪ್ರವೇಶವನ್ನು ಆ.8ರಿಂದ ಆ.10ಕ್ಕೆ ಮುಂದೂಡಿದೆ.

ಈ ಬಗ್ಗೆ ಮಾತನಾಡಿದ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ಅಂದು ಭಾನುವಾರವಾಗಿರುವುದರಿಂದ ಸಾರ್ವಜನಿಕರು ಹಾಗೂ ಪ್ರವಾಸಿಗರೂ ಗಜಪಡೆ ಅರಮನೆ ಆವರಣ ಪ್ರವೇಶಿಸುವುದನ್ನು ಕಣ್ತುಂಬಿಕೊಳ್ಳಬಹುದು. ಈ ಹಿನ್ನೆಲೆಯಲ್ಲಿ ದಿನಾಂಕ ಬದಲಾವಣೆ ಮಾಡಲಾಗಿದೆ ಎಂದರು.

ಭಾನುವಾರ ಸಂಜೆ ಗಜಪಡೆ ಅರಮನೆ ಪ್ರವೇಶಿಸುವ ವೇಳೆಗೆ ಸರಿಯಾಗಿ ಅರಮನೆ ದೀಪಾಲಂಕಾರ ಕಂಗೊಳಿಸಲಿದೆ. ದೀಪಾಲಂಕಾರದ ಸೌಂದರ್ಯದ ನಡುವೆಯೇ ಪ್ರವಾಸಿಗರಿಗೆ ಆನೆಗಳ ಅರಮನೆ ಆವರಣ ಪ್ರವೇಶದ ಸೊಬಗನ್ನು ಸವಿಯುವ ಅವಕಾಶ ಲಭಿಸುತ್ತದೆ ಎಂದು ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್.ಸುಬ್ರಮಣ್ಯ ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

3 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026: ಗಜಪಯಣಕ್ಕೆ ವಿದ್ಯುಕ್ತ ಚಾಲನೆ

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…

5 hours ago

ಓದುಗರ ಪತ್ರ: ಕಾವೇರಿ ನದಿ ನೀರಿನ ವಿವಾದಕ್ಕೆ ಮಾತುಕತೆಯೇ ಮದ್ದು

ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…

6 hours ago

ಓದುಗರ ಪತ್ರ: ಈ ‘ಎರಡು’ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು

ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…

6 hours ago

ಓದುಗರ ಪತ್ರ: ಸ್ಥಳ ಶುದ್ಧೀಕರಣಕ್ಕಿಂತ ಮನ ಶುದ್ಧೀಕರಣವಾಗಲಿ

ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…

6 hours ago

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

10 hours ago