ಹುಣಸೂರು: ಶುಂಠಿ ಬೆಳೆ ಮಧ್ಯೆ ಬೆಳೆಸಿದ್ದ ಗಾಂಜಾ ಗಿಡವನ್ನು ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ ವಶಪಡಿಸಿಕೊಂಡ ಘಟನೆ ನಾಗರಹೊಳೆ ಉದ್ಯಾನದಂಚಿನ ಗ್ರಾಮದಲ್ಲಿ ನಡೆದಿದೆ.
ಹನಗೋಡು ಹೋಬಳಿಯ ಕೋಣನಹೊಸಳ್ಳಿ ಗ್ರಾಮದ ಹೊಲದಲ್ಲಿ ಕದ್ದುಮುಚ್ಚಿ ಗಾಂಜಾ ಗಿಡ ಬೆಳೆಸಲಾಗಿತ್ತು. ಇದರ ಬಗ್ಗೆ ಖಚಿತ ಮಾಹಿತಿ ಪಡೆದ ಅಬಕಾರಿ ಅಧಿಕಾರಿಗಳ ತಂಡ ದಾಳಿ ನಡೆಸಿ ಗಾಂಜಾ ಗಿಡವನ್ನು ವಶಪಡಿಸಿಕೊಂಡಿದ್ದಾರೆ.
ಅಬಕಾರಿ ಡಿವೈಎಸ್ಪಿ ಕೆ.ಟಿ ವಿಜಯಕುಮಾರ್ ಮಾರ್ಗದರ್ಶನದಲ್ಲಿ ಸಿಬ್ಬಂದಿ ದಾಳಿ ನಡೆಸಿದ್ದು, ಈವೇಳೆ 5 ಅಡಿ ಎತ್ತರದ ಸುಮಾರು 2.190 ಗ್ರಾಂ.ನ ಹಸಿ ಗಾಂಜಾ ಗಿಡವನ್ನು ವಶಕ್ಕೆ ಪಡೆಯಲಾಗಿದೆ.
ಜಮೀನಿನ ಮಾಲೀಕ ನಾಪತ್ತೆಯಾಗಿದ್ದು, ಬಂಧನಕ್ಕೆ ಕ್ರಮ ವಹಿಸಲಾಗಿದೆ ಎಂದು ಅಬಕಾರಿ ಅಧಿಕಾರಿ ನಾಗಲಿಂಗಸ್ವಾಮಿ ತಿಳಿಸಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…