ಮೈಸೂರು: ಕೆಆರ್ಎಸ್ (ಕೃಷ್ಣರಾಜ ಸಾಗರ) ಮಾದರಿಯಲ್ಲಿ ಕಬಿನಿ ಜಲಾಶಯದ ಬಳಿಯೂ ಸಹಾ ಉದ್ಯಾನವನ ನಿರ್ಮಿಸಲಾಗುವುದು ಎಂದು ಎಚ್ಡಿ ಕೋಟೆ ಶಾಸಕ ಅನಿಲ್ ಚಿಕ್ಕಮಾದು ಹೇಳಿದರು.
ಈ ವಿಚಾರವಾಗಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಬಿನಿಯಲ್ಲಿ ಉದ್ಯಾನವನ ನಿರ್ಮಾಣ ಸಂಬಂಧ 30 ಕೋಟಿ ರೂ. ಅಂದಾಜುಪಟ್ಟಿ ಸಿದ್ದಪಡಿಸಲಾಗಿದೆ. ಶೀಘ್ರದಲ್ಲೇ ಕಾರ್ಯಾರಂಭ ಮಾಡಲಾಗುವುದು ಎಂದು ತಿಳಿಸಿದರು.
ಮೂರು ಜಲಾಶಯಗಳು, ಅಭಯಾರಣ್ಯ ಮತ್ತು ಪ್ರಾಕೃತಿಕ ಸಂಪತ್ತು ಹೇರಳವಾಗಿ ಸಿಗುವ ಎಚ್ಡಿ ಕೋಟೆ ಪ್ರವಾಸೋದ್ಯಮಕ್ಕೆ ಪೂರಕವಾಗಿದೆ. ಹಾಗಾಗಿ ತಾಲೂಕಿನಲ್ಲಿ ಪ್ರವಾಸೋದ್ಯಮ ಬೆಳವಣಿಗೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ವಿವರಿಸಿದರು.
ಇನ್ನು ಕಬಿನಿ ಜಲಾಶಯದಲ್ಲಿ ಬಿರುಕು ಕಂಡಿರುವ ಬಗ್ಗೆ ಮಾತನಾಡಿ, ಈ ದುರಸ್ತಿ ಕಾರ್ಯಕ್ಕೆ ಜಲಸಂಪನ್ಮೂಲ ಸಚಿವರಾದ ಡಿಕೆ ಶಿವಕುಮಾರ್ ಅವರು 6 ಕೋಟಿ ರೂ ದುರಸ್ತಿ ವೆಚ್ಚ ಬಿಡುಗಡೆ ಮಾಡುವುದಾಗಿ ಭರವಸೆ ಕೊಟ್ಟಿದ್ದಾರೆ. ಶ್ರೀಘ್ರದಲ್ಲೇ ಎಲ್ಲಾ ಕಾರ್ಯಾರಂಭ ಮಾಡಲಾಗುದು ಎಂದರು.
ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…
ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…
ಎಚ್.ಎಸ್.ದಿನೇಶ್ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…
ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…