elction get redy
ನಂಜನಗೂಡು : ಶೀಘ್ರದಲ್ಲೇ ಜಿಪಂ, ತಾಪಂ ಚುನಾವಣೆಗಳು ಬರಲಿದ್ದು, ಬಿಜೆಪಿ ಕಾರ್ಯಕರ್ತರು ಅದಕ್ಕೆ ಸಿದ್ಧರಾಗಬೇಕು ಎಂದು ಮಾಜಿ ಶಾಸಕ ಬಿ.ಹಷವರ್ಧನ್ ಕರೆ ನೀಡಿದರು.
ಬುಧವಾರ ತಮ್ಮ ಅವಧಿಯಲ್ಲಿ ಭೂಮಿ ಪೂಜೆ ನೆರವೇರಿಸಿದ್ದ ಮುಳ್ಳೂರು ಏತ ನೀರಾವರಿ ಪ್ರದೇಶಕ್ಕೆ ಭೇಟಿ ನೀಡಿದ್ದ ಅವರು ಸದ್ಯದಲ್ಲೇ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಬರಲಿದ್ದು, ಕಾರ್ಯಕರ್ತರು ಸಜ್ಜಾಗಬೇಕು ಎಂದರು.
ಸ್ಥಳೀಯ ಸಂಸ್ಥೆ ಚುನಾವಣೆ ನಡೆಸದ ಕುರಿತು ನ್ಯಾಯಾಲಯ ಈಗಾಗಲೇ ಸರ್ಕಾರಕ್ಕೆ ಛೀಮಾರಿ ಹಾಕಿದ್ದು ಶೀಘ್ರದಲ್ಲಿ ಚುನಾವಣೆ ನಡೆಸುವಂತೆ ಸೂಚನೆ ನೀಡಬಹುದಾಗಿದೆ. ಹಾಗಾದರೆ ಡಿಸೆಂಬರ್ನಲ್ಲಿ ಚುನಾವಣೆ ನಡೆಯಲಿದ್ದು, ಕಾರ್ಯಕರ್ತರು ಅದಕ್ಕೆ ಈಗಿನಿಂದಲೇ ಸಿದ್ಧರಾಗಬೇಕು ಎಂದರು.
ಈ ಭಾಗದ ಜನತೆಯ ಕನಸಾದ ಮುಳ್ಳೂರು ಏತ ನೀರಾವರಿ ಯೋಜನೆಯನ್ನು ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರ ಕಾಲದಲ್ಲಿ ಮಂಜೂರು ಮಾಡಿಸಲಾಗಿತ್ತು. ನನ್ನ ಶಾಸಕತ್ವದ ಅವಧಿಯಲ್ಲಿ ಆರಂಭವಾದ ಈ ನೀರಾವರಿ ಯೋಜನೆ ೨ ವರ್ಷಗಳಿಂದ ಸ್ಥಗಿತವಾಗಿದೆ. ಹಾಲಿ ಶಾಸಕರು ಜನತೆಗೆ ಉಪಯೋಗವಾಗುವ ಈ ಯೋಜನೆಯನ್ನು ಪುನಾರಂಭಿಸಿ ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿದರು.
ತಾಲ್ಲೂಕು ಬಿಜೆಪಿ ಅಧ್ಯಕ್ಷ ಕೆಂಡಗಣ್ಣಪ್ಪ, ಹುರ ಚಂದ್ರು, ಕಣೇನೂರು ಪರಶಿವಮೂರ್ತಿ, ಬಸವಣ್ಣ, ಮಲ್ಲೇಶ, ಬಸವರಾಜು ಮತ್ತಿತರರು ಹಾಜರಿದ್ದರು.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…