elction get redy
ನಂಜನಗೂಡು : ಶೀಘ್ರದಲ್ಲೇ ಜಿಪಂ, ತಾಪಂ ಚುನಾವಣೆಗಳು ಬರಲಿದ್ದು, ಬಿಜೆಪಿ ಕಾರ್ಯಕರ್ತರು ಅದಕ್ಕೆ ಸಿದ್ಧರಾಗಬೇಕು ಎಂದು ಮಾಜಿ ಶಾಸಕ ಬಿ.ಹಷವರ್ಧನ್ ಕರೆ ನೀಡಿದರು.
ಬುಧವಾರ ತಮ್ಮ ಅವಧಿಯಲ್ಲಿ ಭೂಮಿ ಪೂಜೆ ನೆರವೇರಿಸಿದ್ದ ಮುಳ್ಳೂರು ಏತ ನೀರಾವರಿ ಪ್ರದೇಶಕ್ಕೆ ಭೇಟಿ ನೀಡಿದ್ದ ಅವರು ಸದ್ಯದಲ್ಲೇ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಬರಲಿದ್ದು, ಕಾರ್ಯಕರ್ತರು ಸಜ್ಜಾಗಬೇಕು ಎಂದರು.
ಸ್ಥಳೀಯ ಸಂಸ್ಥೆ ಚುನಾವಣೆ ನಡೆಸದ ಕುರಿತು ನ್ಯಾಯಾಲಯ ಈಗಾಗಲೇ ಸರ್ಕಾರಕ್ಕೆ ಛೀಮಾರಿ ಹಾಕಿದ್ದು ಶೀಘ್ರದಲ್ಲಿ ಚುನಾವಣೆ ನಡೆಸುವಂತೆ ಸೂಚನೆ ನೀಡಬಹುದಾಗಿದೆ. ಹಾಗಾದರೆ ಡಿಸೆಂಬರ್ನಲ್ಲಿ ಚುನಾವಣೆ ನಡೆಯಲಿದ್ದು, ಕಾರ್ಯಕರ್ತರು ಅದಕ್ಕೆ ಈಗಿನಿಂದಲೇ ಸಿದ್ಧರಾಗಬೇಕು ಎಂದರು.
ಈ ಭಾಗದ ಜನತೆಯ ಕನಸಾದ ಮುಳ್ಳೂರು ಏತ ನೀರಾವರಿ ಯೋಜನೆಯನ್ನು ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರ ಕಾಲದಲ್ಲಿ ಮಂಜೂರು ಮಾಡಿಸಲಾಗಿತ್ತು. ನನ್ನ ಶಾಸಕತ್ವದ ಅವಧಿಯಲ್ಲಿ ಆರಂಭವಾದ ಈ ನೀರಾವರಿ ಯೋಜನೆ ೨ ವರ್ಷಗಳಿಂದ ಸ್ಥಗಿತವಾಗಿದೆ. ಹಾಲಿ ಶಾಸಕರು ಜನತೆಗೆ ಉಪಯೋಗವಾಗುವ ಈ ಯೋಜನೆಯನ್ನು ಪುನಾರಂಭಿಸಿ ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿದರು.
ತಾಲ್ಲೂಕು ಬಿಜೆಪಿ ಅಧ್ಯಕ್ಷ ಕೆಂಡಗಣ್ಣಪ್ಪ, ಹುರ ಚಂದ್ರು, ಕಣೇನೂರು ಪರಶಿವಮೂರ್ತಿ, ಬಸವಣ್ಣ, ಮಲ್ಲೇಶ, ಬಸವರಾಜು ಮತ್ತಿತರರು ಹಾಜರಿದ್ದರು.
ಮಂಡ್ಯ: ನಿಂತಿದ್ದ ಟಿಪ್ಪರ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಮೂವರು ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆ…
ನವದೆಹಲಿ: 2026ರ ಬಜೆಟ್ 140 ಕೋಟಿ ಭಾರತೀಯರ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಕುರಿತು…
ಬೆಂಗಳೂರು: ಭಾನುವಾರ ಮಂಡಿಸಲಾದ ಕೇಂದ್ರ ಬಜೆಟ್ ದೇಶದ ಆರ್ಥಿಕತೆಗೆ ರಜೆ ನೀಡುವಂತಿದೆ. ಸಂಪೂರ್ಣ ನಿರಾಶಾದಾಯಕವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು…
ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ಇಂದು 2026-27ನೇ ಕೇಂದ್ರ ಬಜೆಟ್ ಮಂಡನೆ ಮಾಡಿದ್ದಾರೆ. ಬಜೆಟ್ನಲ್ಲಿ…
ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಮಾಡಿದರು. ತೆರಿಗೆಗೆ ಸಂಬಂಧಿಸಿದಂತೆ ಹಲವು…
ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಮಾಡಿದರು. ದೇಶಾದ್ಯಂತ 500 ಹೊಸ…