ಮೈಸೂರು

ಪಂಚಾಯಿತಿ ಚುನಾವಣೆಗೆ ಸಿದ್ಧರಾಗಿ : ಮಾಜಿ ಶಾಸಕ ಹರ್ಷವರ್ಧನ್ ಕರೆ

ನಂಜನಗೂಡು : ಶೀಘ್ರದಲ್ಲೇ ಜಿಪಂ, ತಾಪಂ ಚುನಾವಣೆಗಳು ಬರಲಿದ್ದು, ಬಿಜೆಪಿ ಕಾರ್ಯಕರ್ತರು ಅದಕ್ಕೆ ಸಿದ್ಧರಾಗಬೇಕು ಎಂದು ಮಾಜಿ ಶಾಸಕ ಬಿ.ಹಷವರ್ಧನ್ ಕರೆ ನೀಡಿದರು.

ಬುಧವಾರ ತಮ್ಮ ಅವಧಿಯಲ್ಲಿ ಭೂಮಿ ಪೂಜೆ ನೆರವೇರಿಸಿದ್ದ ಮುಳ್ಳೂರು ಏತ ನೀರಾವರಿ ಪ್ರದೇಶಕ್ಕೆ ಭೇಟಿ ನೀಡಿದ್ದ ಅವರು ಸದ್ಯದಲ್ಲೇ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಬರಲಿದ್ದು, ಕಾರ್ಯಕರ್ತರು ಸಜ್ಜಾಗಬೇಕು ಎಂದರು.

ಸ್ಥಳೀಯ ಸಂಸ್ಥೆ ಚುನಾವಣೆ ನಡೆಸದ ಕುರಿತು ನ್ಯಾಯಾಲಯ ಈಗಾಗಲೇ ಸರ್ಕಾರಕ್ಕೆ ಛೀಮಾರಿ ಹಾಕಿದ್ದು ಶೀಘ್ರದಲ್ಲಿ ಚುನಾವಣೆ ನಡೆಸುವಂತೆ ಸೂಚನೆ ನೀಡಬಹುದಾಗಿದೆ. ಹಾಗಾದರೆ ಡಿಸೆಂಬರ್‌ನಲ್ಲಿ ಚುನಾವಣೆ ನಡೆಯಲಿದ್ದು, ಕಾರ್ಯಕರ್ತರು ಅದಕ್ಕೆ ಈಗಿನಿಂದಲೇ ಸಿದ್ಧರಾಗಬೇಕು ಎಂದರು.

ಈ ಭಾಗದ ಜನತೆಯ ಕನಸಾದ ಮುಳ್ಳೂರು ಏತ ನೀರಾವರಿ ಯೋಜನೆಯನ್ನು ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರ ಕಾಲದಲ್ಲಿ ಮಂಜೂರು ಮಾಡಿಸಲಾಗಿತ್ತು. ನನ್ನ ಶಾಸಕತ್ವದ ಅವಧಿಯಲ್ಲಿ ಆರಂಭವಾದ ಈ ನೀರಾವರಿ ಯೋಜನೆ ೨ ವರ್ಷಗಳಿಂದ ಸ್ಥಗಿತವಾಗಿದೆ. ಹಾಲಿ ಶಾಸಕರು ಜನತೆಗೆ ಉಪಯೋಗವಾಗುವ ಈ ಯೋಜನೆಯನ್ನು ಪುನಾರಂಭಿಸಿ ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿದರು.

ತಾಲ್ಲೂಕು ಬಿಜೆಪಿ ಅಧ್ಯಕ್ಷ ಕೆಂಡಗಣ್ಣಪ್ಪ, ಹುರ ಚಂದ್ರು, ಕಣೇನೂರು ಪರಶಿವಮೂರ್ತಿ, ಬಸವಣ್ಣ, ಮಲ್ಲೇಶ, ಬಸವರಾಜು ಮತ್ತಿತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

13 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

13 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

14 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

14 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

19 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

19 hours ago