elction get redy
ನಂಜನಗೂಡು : ಶೀಘ್ರದಲ್ಲೇ ಜಿಪಂ, ತಾಪಂ ಚುನಾವಣೆಗಳು ಬರಲಿದ್ದು, ಬಿಜೆಪಿ ಕಾರ್ಯಕರ್ತರು ಅದಕ್ಕೆ ಸಿದ್ಧರಾಗಬೇಕು ಎಂದು ಮಾಜಿ ಶಾಸಕ ಬಿ.ಹಷವರ್ಧನ್ ಕರೆ ನೀಡಿದರು.
ಬುಧವಾರ ತಮ್ಮ ಅವಧಿಯಲ್ಲಿ ಭೂಮಿ ಪೂಜೆ ನೆರವೇರಿಸಿದ್ದ ಮುಳ್ಳೂರು ಏತ ನೀರಾವರಿ ಪ್ರದೇಶಕ್ಕೆ ಭೇಟಿ ನೀಡಿದ್ದ ಅವರು ಸದ್ಯದಲ್ಲೇ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಬರಲಿದ್ದು, ಕಾರ್ಯಕರ್ತರು ಸಜ್ಜಾಗಬೇಕು ಎಂದರು.
ಸ್ಥಳೀಯ ಸಂಸ್ಥೆ ಚುನಾವಣೆ ನಡೆಸದ ಕುರಿತು ನ್ಯಾಯಾಲಯ ಈಗಾಗಲೇ ಸರ್ಕಾರಕ್ಕೆ ಛೀಮಾರಿ ಹಾಕಿದ್ದು ಶೀಘ್ರದಲ್ಲಿ ಚುನಾವಣೆ ನಡೆಸುವಂತೆ ಸೂಚನೆ ನೀಡಬಹುದಾಗಿದೆ. ಹಾಗಾದರೆ ಡಿಸೆಂಬರ್ನಲ್ಲಿ ಚುನಾವಣೆ ನಡೆಯಲಿದ್ದು, ಕಾರ್ಯಕರ್ತರು ಅದಕ್ಕೆ ಈಗಿನಿಂದಲೇ ಸಿದ್ಧರಾಗಬೇಕು ಎಂದರು.
ಈ ಭಾಗದ ಜನತೆಯ ಕನಸಾದ ಮುಳ್ಳೂರು ಏತ ನೀರಾವರಿ ಯೋಜನೆಯನ್ನು ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರ ಕಾಲದಲ್ಲಿ ಮಂಜೂರು ಮಾಡಿಸಲಾಗಿತ್ತು. ನನ್ನ ಶಾಸಕತ್ವದ ಅವಧಿಯಲ್ಲಿ ಆರಂಭವಾದ ಈ ನೀರಾವರಿ ಯೋಜನೆ ೨ ವರ್ಷಗಳಿಂದ ಸ್ಥಗಿತವಾಗಿದೆ. ಹಾಲಿ ಶಾಸಕರು ಜನತೆಗೆ ಉಪಯೋಗವಾಗುವ ಈ ಯೋಜನೆಯನ್ನು ಪುನಾರಂಭಿಸಿ ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿದರು.
ತಾಲ್ಲೂಕು ಬಿಜೆಪಿ ಅಧ್ಯಕ್ಷ ಕೆಂಡಗಣ್ಣಪ್ಪ, ಹುರ ಚಂದ್ರು, ಕಣೇನೂರು ಪರಶಿವಮೂರ್ತಿ, ಬಸವಣ್ಣ, ಮಲ್ಲೇಶ, ಬಸವರಾಜು ಮತ್ತಿತರರು ಹಾಜರಿದ್ದರು.
ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್ಬಾರ್) ನಲ್ಲಿ ಸಂಭವಿಸಿದ ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…
ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…
ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…
೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…