ಮೈಸೂರು: ಮೈಸೂರಿನಲ್ಲಿ ಶುಂಠಿ ಬೆಳೆಗಾರರಿಗೆ ಹೊಸ ಸಮಸ್ಯೆಯೊಂದು ಎದುರಾಗಿದೆ.
ಮೈಸೂರು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಅನ್ನದಾತರು ಶುಂಠಿ ಬೆಳೆ ಬೆಳೆದಿದ್ದು, ಕಳೆದ ಕೆಲ ದಿನಗಳಿಂದ ಸುರಿದ ಧಾರಾಕಾರ ಮಳೆಯಿಂದ ಶುಂಠಿಗೆ ಕೊಳೆರೋಗ ಕಾಣಿಸಿಕೊಂಡಿದೆ.
ಇದರ ಜೊತೆಗೆ ಈ ಬಾರಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಯತೇಚ್ಛವಾಗಿ ಶುಂಠಿ ಬೆಳೆಯಲಾಗಿದ್ದು, ಇಳುವರಿ ಕೂಡ ತೀವ್ರ ಕಡಿಮೆಯಾಗಿದೆ. ಈ ಬೆನ್ನಲ್ಲೇ ಶುಂಠಿ ಬೆಳೆಗೂ ಬೆಲೆಯೂ ಕೂಡ ಇಳಿಕೆಯಾಗಿದೆ.
ಬೇರೆ ಬೆಳೆಗಳಿಗೆ ಹೋಲಿಸಿದರೆ ಶುಂಠಿ ಬೆಳೆ ಬೆಳೆಯಲು ಕೀಟನಾಶಕ ಹಾಗೂ ಗೊಬ್ಬರಕ್ಕೆಂದೇ ಲಕ್ಷಾಂತರ ರೂಪಾಯಿ ಖರ್ಚಾಗುತ್ತಿದೆ. ಹೀಗಾಗಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿದ್ರೂ, ಶುಂಠಿಯಿಂದ ಅಧಿಕ ಲಾಭವಿದೆ ಎಂದು ರೈತರೆಲ್ಲಾ ಶುಂಠಿ ಬೆಳೆ ಬೆಳೆದಿದ್ದಾರೆ.
ಆದರೆ ವರುಣ ಈ ಬಾರಿ ಶುಂಠಿ ಬೆಳೆಗಾರರಿಗೆ ಸಂಕಷ್ಟ ತಂದೊಡ್ಡಿದ್ದಾನೆ. ಇದರ ಜೊತೆಗೆ ಕೆಲ ಭಾಗದಲ್ಲಿ ಶುಂಠಿ ಬೆಳೆ ಇಳುವರಿ ಜಾಸ್ತಿ ಕೊಟ್ಟಿದ್ದು, ರೈತರು ಕೂಡ ತುಂಬಾ ಖುಷಿಯಲ್ಲಿದ್ದರು.
ಈಗ ಶುಂಠಿ ಬೆಲೆ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳೆಗಾರರು ತೀವ್ರ ಕಂಗಾಲಾಗಿದ್ದು, ಮುಂದಿನ ದಿನಗಳಲ್ಲಾದರೂ ಬೆಳೆಗೆ ಸೂಕ್ತ ಬೆಲೆ ಸಿಗುತ್ತದೆ ಎಂದು ಎದುರು ನೋಡುತ್ತಿದ್ದಾರೆ.
ಬೆಂಗಳೂರು : ಶಕ್ತಿ ಯೋಜನೆಯ ಮಹಿಳಾ ಟಿಕೆಟ್ಗಳನ್ನು ಪುರುಷ ಪ್ರಯಾಣಿಕರಿಗೂ ನೀಡಿ ಹಣ ಸಂಗ್ರಹಿಸಿ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ…
ಮೈಸೂರು : ರಾಜ್ಯದಲ್ಲಿ ಕೃಷಿ, ತೋಟಗಾರಿಕೆ, ಪಶುವೈದ್ಯಕೀಯ ಮತ್ತು ಅರಣ್ಯ ಶಾಸ್ತ್ರ ಪದವಿಗಳಿಗೆ ಕೃಷಿಕರ ಕೋಟಾದಡಿ (50%) ಅಡಿಯಲ್ಲಿ ವಿದ್ಯಾರ್ಥಿಗಳಿಗೆ…
ಮುಂಬೈ : ಖ್ಯಾತ ಗಾಯಕಿ ಆಶಾ ಭೋಸ್ಲೆ (92) ಅವರು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಆಶಾ ಭೋಸ್ಲೆ ಅವರಿಗೆ…
ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ಪುನರಾಚನೆಗೆ ಒತ್ತಡ ಹೆಚ್ಚಾಗಿದ್ದು, 20ಕ್ಕೂ ಹೆಚ್ಚು ಶಾಸಕರು ಇಂದು (ಭಾನುವಾರ)…
ಕನ್ನಡಕ್ಕೆ ಶ್ರೇಷ್ಠ ದಾಂಪತ್ಯ ಗೀತೆಗಳನ್ನು ನೀಡಿದ, ಪ್ರೇಮಕವಿಯೆಂದೇ ಹೆಸರಾದ ನಾಡಿನ ಹಿರಿಯ ಕವಿ ಕೆ.ಎಸ್.ನರಸಿಂಹಸ್ವಾಮಿ ಅವರ ಗೌರವಾರ್ಥವಾಗಿ ಹುಟ್ಟೂರಾದ ಕಿಕ್ಕೇರಿಯ…
ಮೈಸೂರಿನಲ್ಲಿ ಸ್ವಲ್ಪ ಮಳೆಯಾದರೂ ರೂಪಾನಗರ ಬಡಾವಣೆಯಲ್ಲಿ ವಿದ್ಯುತ್ ಕಡಿತ ಮಾಡಲಾಗುತ್ತದೆ. ರಾತ್ರಿ ವೇಳೆ ಮಳೆ ಬಂದರಂತೂ ವಿದ್ಯುತ್ ಸಂಪರ್ಕಕಲ್ಪಿಸುವುದು ಬೆಳಿಗ್ಗೆಯೇ.…